ಮೈಸೂರು | ಒಕ್ಕಲಿಗರ ವಿಕಾಸ ವೇದಿಕೆಯಿಂದ ‘ಹತ್ತನೇ ಚಾಮರಾಜ ಒಡೆಯರ್ ಜಯಂತ್ಯುತ್ಸವ ‘

Date:

ಮೈಸೂರಿನಲ್ಲಿ ಇಂದು ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ‘ ಹತ್ತನೇ ಚಾಮರಾಜ ಒಡೆಯರ್ ಜಯಂತ್ಯುತ್ಸವ ‘ ಕಾರ್ಯಕ್ರಮವನ್ನು ಅರಮನೆ ಮುಂಭಾಗದ ಕೋಟೆ ಆಂಜನೇಯ ದೇವಸ್ಥಾನ ವೃತ್ತದಲ್ಲಿ ಹಮ್ಮಿಕೊಂಡಿದ್ದರು.

ಒಕ್ಕಲಿಗರ ವಿಕಾಸ ವೇದಿಕೆ ರಾಜ್ಯಾಧ್ಯಕ್ಷೆ ಯಮುನ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ ಅವರ ನೇತೃತ್ವದಲ್ಲಿ ಹತ್ತನೇ ಚಾಮರಾಜ ಒಡೆಯರ್ ಅವರ ಕೊಡುಗೆಯನ್ನು ಸ್ಮರಿಸಿ ನುಡಿ ನಮನ ಹಾಗೂ ಪುಷ್ಪ ನಮನ ಸಲ್ಲಿಸಿದರು.

” ಮೈಸೂರಿನ 23 ನೇ ಮಹಾರಾಜರಾದ ಚಾಮರಾಜ ಒಡೆಯರ್ ಫೆ. 22, 1894 ರಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜನಿಸಿದರು. ಇವರ ಆಳ್ವಿಕೆಯಲ್ಲಿ ಸಿ ವಿ ರಂಗಚಾರ್ಲು, ಕೆ ಶೇಷಾದ್ರಿ ಅಯ್ಯರ್ ದಿವಾನರುಗಳಾಗಿ ಸಮರ್ಥ ಆಡಳಿತಕ್ಕೆ ನೇರವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1881 ರಲ್ಲಿ ಮೈಸೂರು ಪ್ರತಿನಿಧಿ ಸಭೆಯನ್ನು ಸ್ಥಾಪಿಸಿದವರು ಇದು ಭಾರತದ ಮೊದಲ ಆಧುನಿಕ ಪ್ರಜಾಪ್ರಭುತ್ವದ ಶಾಸಕಾಂಗ ಸಂಸ್ಥೆಯಾಗಿತ್ತು” ಎಂದು ರಾಜ್ಯಾಧ್ಯಕ್ಷೆ ಯಮುನ ಅವರು ಸ್ಮರಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ ಮಾತನಾಡಿ ” 1893 ರಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಪ್ರಯಾಣವನ್ನು ಪ್ರಾಯೋಜಿಸಿದರು.ಅದಲ್ಲದೆ, ‘ ಕನ್ನಡ ಬಾಷೋಜ್ಜೀವಿನಿ ‘ ಶಾಲೆಯನ್ನು ಮಹಿಳಾ ಶಿಕ್ಷಣಕ್ಕೆ ಆಧ್ಯತೆಯಾಗಿ ಸ್ಥಾಪಿಸಿದರು. ಬೆಂಗಳೂರು ಅರಮನೆಯ ನಿರ್ಮಾತ್ರು ಸಹ ಇವರೇ ” ಎಂದು ಆಡಾಳಿತಾವಧಿಯ ಹೆಗ್ಗುರುತುಗಳನ್ನು ಮೆಲುಕು ಹಾಕಿದರು.

ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಕೆ ಸಿ ಮಹೇಂದ್ರ ಮಾತನಾಡಿ ಮಹಾರಾಜರ ಕೊಡುಗೆ ಅಪಾರವಾದದ್ದು, ಅಲ್ಪಾವಧಿ ಆಳ್ವಿಕೆ ನಡೆಸಿದ್ದರು ಸಹ, ಚಾಮರಾಜ ಒಡೆಯರ್ ಅವರ ಆಳ್ವಿಕೆಯ ಅವಧಿ ಅತ್ಯಂತ ಸ್ಮರಣಿಯವಾದದ್ದು.

ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಹನೀಯರ ಸ್ಮರಿಸುವುದು ನಿಜಕ್ಕೂ ಅರ್ಥಪೂರ್ಣವಾದದ್ದು. ಇನ್ನು ಹೆಚ್ಚು ಹೆಚ್ಚಾಗಿ ಇಂತಹ ಮಹನೀಯರ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು.ಮೈಸೂರಿನಲ್ಲಿ ಇರುವ ಹಲವು ಪ್ರತಿಮೆಗಳು ಮೈಸೂರಿನ ಹೆಗ್ಗುರುತು ಸರಿಯಾದ ನಿರ್ವಹಣೆ ಇರದೆ ಸೊರಗುತ್ತಿವೆ.ಮಹಾ ನಗರ ಪಾಲಿಕೆ ಇದರ ಕಡೆ ಗಮನ ಹರಿಸಬೇಕು.

ನಿರ್ಲಕ್ಷ್ಯದಿಂದ ಇರುವುದು ಸರಿಯಲ್ಲ, ಇಂದು ಜನ್ಮ ದಿನದ ಕಾರ್ಯಕ್ರಮ ಇರುವಾಗಲು ಸ್ವಚ್ಛತೆ ಮಾಡದೆ ಇರುವುದು ಬೇಸರ ತರುವಂತದ್ದು, ಇನ್ನಾದರು ಜಿಲ್ಲಾಡಳಿತ ಎಚ್ಚೆತ್ತುಕೊಂಡು, ಇತ್ತ ಕಡೆ ಗಮನ ಕೊಡಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ; ಕಿಡಿಗೇಡಿಗಳ ಕೃತ್ಯವಿರುವ ಶಂಕೆ

ದಸರಾ ಅರ್ಚಕರಾದ ಪ್ರಹ್ಲಾದರಾವ್, ಬಹುಜನ ವಿದ್ಯಾರ್ಥಿ ಸಂಘದ ಸಿದ್ದರಾಜು,ನಾಯಕರ ಸಂಘದ ರಾಜ್ಯಾಧ್ಯಕ್ಷರಾದ ದ್ಯಾವಪ್ಪ ನಾಯಕ, ಮಹಿಳಾ ಸಹಕಾರಿ ಬ್ಯಾಂಕ್ ನಿರ್ದೇಶಕರು ಸುಶೀಲ ನಂಜಪ್ಪ, ಸಮಾಜ ಸೇವಕರಾದ ಎಸ್ ಆರ್ ರವಿ ಕುಮಾರ್, ಗಾಯಕರಾದ ಗಾನ ಸುಮಾ, ಸತ್ಯವತಿ, ಪತ್ರಕರ್ತರಾದ ರಾಜೇಶ್, ಜಿ ಪ್ರಕಾಶ್, ಶಿವಶಂಕರ್ ಕಾರ್ಯಕ್ರಮದಲ್ಲಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...