ಮೈಸೂರು | ಅಜ್ಜಿಯನ್ನು ಕೊಂದು ‘ಮಿಸ್ಸಿಂಗ್‌ ಕಂಪ್ಲೇಂಟ್‌’ ನೀಡಿದ ಮೊಮ್ಮಗ; ತನಿಖೆ ಬಳಿಕ ಸತ್ಯ ಬಯಲು

Date:

ಕೆಆರ್‌ಎಸ್ ಹಿನ್ನಿರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಸಿಕ್ಕಿದ ಪ್ರಕರಣವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಸ್ವಂತ ಅಜ್ಜಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.

ಮೈಸೂರಿನ ಗಾಯತ್ರಿಪುರಂ ನಿವಾಸಿ ಸುಲೋಚನ (75) ಮೃತ ವೃದ್ಧೆ. ಸುಪ್ರೀತ್ (23) ಎಂಬಾತ ತನ್ನ ಅಜ್ಜಿಯನ್ನು ಹತ್ಯೆ ಮಾಡಿದ್ದಾನೆ. ಮೈಸೂರು ತಾಲೂಕಿನ ಸಾಗರಕಟ್ಟೆ ಗ್ರಾಮದ ಬಳಿ ಮೇ 30ರಂದು ಶವ ಪತ್ತೆಯಾಗುವ ಮೂಲಕ ಘಟನೆ ತನಿಖೆಗೆ ಚಾಲನೆ ನೀಡಲಾಗಿತ್ತು. ಗುರುತು ಸಿಗದಂತೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.

ಮೃತ ದೇಹದ ತಲೆ ಕೂದಲು ಹಾಗೂ ಕನ್ನಡಕದಿಂದ ಮೈಸೂರು ದಕ್ಷಿಣ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು. ನಜರ್‌ಬಾದ್ ಠಾಣೆಯಲ್ಲಿ ದಾಖಲಾಗಿದ್ದ ಮಿಸ್ಸಿಂಗ್ ಕಂಪ್ಲೇಂಟ್ ಜೊತೆಗೆ ಸಾಮ್ಯತೆ ಕಂಡುಬಂದಿತ್ತು. ಹತ್ಯೆ ಮಾಡಿದ ಮೊಮ್ಮಗನೇ ಮಿಸ್ಸಿಂಗ್‌ ಕಂಪ್ಲೇಂಟ್‌ ಕೂಡ ನೀಡಿದ್ದ. ಆತನನ್ನು ವಿವರವಾದ ತನಿಖೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಹಿನ್ನೆಲೆ

ಅಜ್ಜಿ ಬೈಯುತ್ತಿದ್ದರು, ಹಾಗಾಗಿ ಕೊಲೆ ಮಾಡಿದೆ ಎಂದು ಆರೋಪಿ ಸುಪ್ರೀತ್ ಹೇಳಿದ್ದಾನೆ. ಮೇ 28ರಂದು ಮನೆಯಲ್ಲಿ ಮಾತಿಗೆ ಮಾತು ಬೆಳೆದು, ಬೈದ ಅಜ್ಜಿ ಸುಲೋಚನ ಅವರನ್ನು ಸುಪ್ರೀತ್‌ ತಳ್ಳಿದ್ದಾನೆ. ಹೊಡೆದು ಬೀಳಿಸಿದ ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ, ರಟ್ಟಿನ ಬಾಕ್ಸ್‌ನಲ್ಲಿ ಹಾಕಿದ್ದ. ಶವವನ್ನು ಏನು ಮಾಡುವುದು ಎಂಬುದಕ್ಕೆ ಕೊರಿಯನ್ ವೆಬ್ ಸೀರಿಸ್ ನೋಡಿ ಪ್ರೇರಣೆ ಪಡೆದಿದ್ದಾನೆ. ಹೆಣ ಸುಟ್ಟು ಬಚಾವಾಗಲು ಯತ್ನಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

ಕಾರಿನಲ್ಲಿ ಕೆಆರ್‌ಎಸ್ ಹಿನ್ನೀರು ಪ್ರದೇಶಕ್ಕೆ ಶವ ಕೊಂಡೊಯ್ದು ಗುಂಡಿಯಲ್ಲಿ ಹಾಕಿ ಶವವನ್ನು ಸುಟ್ಟು ಹಾಕಿದ್ದಾನೆ. ಅದಕ್ಕೂ ಮುನ್ನ ಹೆಣವನ್ನು ಪ್ಯಾಕ್ ಮಾಡಿ ಕಾರಿನಲ್ಲಿಟ್ಟುಕೊಂಡು ದಿನವಿಡೀ ಓಡಾಡಿದ್ದು, ಹಾಗೇ ಪೊಲೀಸ್‌ ಠಾಣೆಗೂ ಹೋಗಿ ಕಂಪ್ಲೇಂಟ್‌ ನೀಡಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...