ಮೈಸೂರು | ಡಿಸೆಂಬರ್‌ನಲ್ಲಿ ಮೂರು ದಿನ ಎಐಡಿಎಸ್ಒ 10ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ

Date:

ನಮ್ಮ ದೇಶದ ನವೋದಯ ಚಳವಳಿಯ ಮೂಲ ಉದ್ದೇಶ ಎಲ್ಲ ಹಳೆಯ ಕಂದಾಚಾರ, ಮೌಡ್ಯ, ಮತಾಂಧತೆಗಳಿಂದ ಮುಕ್ತಗೊಳಿಸುವುದಾಗಿತ್ತು ಎಂದು ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬಿ ಜಿ ಹೇಳಿದರು.

ಮೈಸೂರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಯವರು ರಾಜಕೀಯ, ಆರ್ಥಿಕ, ಸಾಂಸ್ಕೃತಿಕ, ಸಾಮಾಜಿಕವಾಗಿ ಮೂಲಭೂತ ಬದಲಾವಣೆ ತರುವ ಕನಸು ಹೊತ್ತು, ಎಲ್ಲರಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ ಒದಗಿಸಿ, ಯಾವುದೇ ಹೆಣ್ಣು ಮಗುವು ಅಭದ್ರತೆಯಿಂದ ಬಳಲದೆ ಸಮ ಸಮಾಜವನ್ನು ನಿರ್ಮಿಸುವ ಮಹಾನ್ ಧ್ಯೇಯದೊಂದಿಗೆ ಹೋರಾಡಿದರು” ಎಂದು ಹೇಳಿದರು.

“ಸ್ವಾತಂತ್ರ್ಯ ನಂತರ ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಶಿಕ್ಷಣಕ್ಕೆ ಅನುದಾನ ಕಡಿತಗೊಳಿಸುತ್ತ ಬಂದಿವೆ. ಎನ್ಇಪಿ ಶಿಕ್ಷಣ ನೀತಿಯು ಜಾರಿಯಾದ ಮೊದಲ ಹಂತದಲ್ಲೇ 13,800 ಸರ್ಕಾರಿ ಶಾಲೆಗಳನ್ನು ವಿಲೀನೀಕರಣದ ಹೆಸರಿನಲ್ಲಿ ಮುಚ್ಚಲು ಆದೇಶ ಹೊರಡಿಸಿತು. ನಾಲ್ಕು ವರ್ಷದ ಪದವಿಯು ಜಾರಿಯಾಯಿತು. ಎಐಡಿಎಸ್‌ ನಾಯಕತ್ವದಡಿಯಲ್ಲಿ 37 ಲಕ್ಷಕ್ಕೂ ಹೆಚ್ಚು ಸಾರ್ವಜನಿಕರು ಜನಸಾಮಾನ್ಯರು ಸಹಿ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಎನ್ಇಪಿ-2020ಯನ್ನು ಕರ್ನಾಟಕದಲ್ಲಿ ರದ್ದುಗೊಳಿಸಬೇಕಾಯಿತು. ಈ ಅಭೂತಪೂರ್ವ ವಿಜಯವು, ದೇಶಕ್ಕೆ ಮಾದರಿಯಾಗುವಂತಿದೆ. ಈಗ ನಮ್ಮ ಮುಂದಿರುವ ದೊಡ್ಡ ಸವಾಲೆಂದರೆ ಎನ್‌ಇಪಿಯು ದೇಶದ ಯಾವುದೇ ಮೂಲೆಯಲ್ಲೂ ಜಾರಿಯಾಗದಂತೆ ತಡೆಯಲು ವಿದ್ಯಾರ್ಥಿಗಳ ಸಂಘಟಿತ ಹೋರಾಟ ಬೆಳೆಸುವುದಾಗಿದೆ” ಎಂದು ಹೇಳಿದರು.

“ಸಮಾಜದಲ್ಲಿ ಕುಸಿಯುತ್ತಿರುವ ಸಾಂಸ್ಕೃತಿಕ ಮಟ್ಟ ಹಾಗೂ ಮಹಿಳೆಯರ ಮೇಲೆ ದಿನೇ ದಿನೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧ ಸಾಂಸ್ಕೃತಿಕ ಚಳವಳಿಯನ್ನು ಹರಿಬಿಡಬೇಕಿದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ, ಮಾನವತೆ ಮತ್ತು ಸಂಸ್ಕೃತಿಯನ್ನು ಉಳಿಸುವ ಘೋಷವಾಕ್ಯಗಳನ್ನು ಮೊಳಗಿಸಿ, ಉತ್ತಮ ಸಮಾಜ ನಿರ್ಮಿಸುವ ಉದಾತ್ತ ಜವಬ್ದಾರಿ ನಮ್ಮ ಮೇಲಿದೆ. ಈ ಐತಿಹಾಸಿಕ ಅವಶ್ಯಕತೆಗಾಗಿ ವಿದ್ಯಾರ್ಥಿ ಹೋರಾಟಗಳನ್ನು ಇನ್ನಷ್ಟು ಬಲಿಷ್ಠಗೊಳಿಸಲು ದೇಶದ ರಾಜಧಾನಿ ದೆಹಲಿಯಲ್ಲಿ ಡಿಸೆಂಬರ್‌ 27, 28, 29ರಂದು ಎಐಡಿಎಸ್ಒ ನೇತೃತ್ವದಲ್ಲಿ 10ನೇ ಅಖಿಲ ಭಾರತ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ” ಎಂದರು.

“ಶಿಕ್ಷಣ ಪ್ರೇಮಿ ಜನತೆ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಈ ಸಮ್ಮೇಳನದ ಕರೆಗೆ ಓಗೊಟ್ಟು, ಅಖಿಲ ಭಾರತ ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಐಡಿಎಸ್ಒ ಮೈಸೂರು ಜಿಲ್ಲಾ ಸಮಿತಿ ಮನವಿ ಮಾಡುತ್ತದೆ” ಎಂದು ಕೋರಿದರು.

ಪ್ರಮುಖ ಬೇಡಿಕೆಗಳು:

  1. ಶಾಲಾ ಕಾಲೇಜುಗಳಲ್ಲಿ ಎಲ್ಲ ಹಂತದ ಶುಲ್ಕ ಏರಿಕೆಯನ್ನು ತಡೆಗಟ್ಟಬೇಕು.
  2. ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಿ, ಮುಚ್ಚಿದ ಶಾಲೆಗಳನ್ನು ಪುನರಾರಂಭಿಸಬೇಕು.
  3. ಖಾಲಿಯಿರುವ ಎಲ್ಲ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಕೂಡಲೇ ಕಾಯಂ ಆಧಾರದ ಮೇಲೆ ಭರ್ತಿ ಮಾಡಬೇಕು.
  4. ಎನ್‌ಟಿಎ ರದ್ದುಗೊಳಿಸಿ ಮತ್ತು ಎಲ್ಲ ಪರೀಕ್ಷಾ ಅಕ್ರಮಗಳ ಕುರಿತು ಪರಿಣಾಮಕಾರಿ ತನಿಖೆ ನಡೆಸಬೇಕು.
  5. ವೈದ್ಯಕೀಯ ಶಿಕ್ಷಣದಲ್ಲಿ ಅವೈಜ್ಞಾನಿಕ ಸಿಎಂಬಿಎ ಅನುಷ್ಠಾನಗೊಳಿಸುವುದನ್ನು ನಿಲ್ಲಿಸಿ ಮತ್ತು ನೀಟ್‌ ರದ್ದುಗೊಳಿಸಬೇಕು.
  6. ನಾಲ್ಕು ವರ್ಷದ ಪದವಿಯನ್ನು ತಿರಸ್ಕರಿಸಿ, ಶಿಕ್ಷಣದ ವ್ಯಾಪಾರೀಕರಣ, ಖಾಸಗೀಕರಣ, ಕೇಂದ್ರೀಕರಣ, ವೃತ್ತಿಪರೀಕರಣದ ನೀಲಿನಕ್ಷೆಯಾಗಿರುವ ಎನ್‌ಇಪಿ-2020ನ್ನು ರದ್ದುಗೊಳಿಸಿ ಮತ್ತು ಶಿಕ್ಷಣದಲ್ಲಿ ಕೋಮುವಾದೀಕರಣವನ್ನು ತಡೆಗಟ್ಟಬೇಕು.
  7. ಎಲ್ಲ ಸಂಶೋಧನಾ ವಿದ್ಯಾರ್ಥಿಗಳಿಗೆ ತಾರತಮ್ಯವಿಲ್ಲದೆ ಗೌರವಾನ್ವಿತ ಮತ್ತು ನಿಯಮಿತ ಫೆಲೋಶಿಪ್ ನೀಡಲು ಕ್ರಮ ಕೈಗೊಳ್ಳಬೇಕು.
  8. ನವೋದಯದ ಹರಿಕಾರರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಜೀವನ ಹೋರಾಟಗಳನ್ನು ಪಠ್ಯಕ್ರಮದಲ್ಲಿ ಸೇರಿಸಿ, ಅವೈಜ್ಞಾನಿಕ ವಿಚಾರಗಳನ್ನು ಹರಡುವ ಮತ್ತು ಐತಿಹಾಸಿಕ ಸತ್ಯಗಳನ್ನು ವಿರೂಪಗೊಳಿಸುವುದನ್ನು ನಿಲ್ಲಿಸಬೇಕು.
  9. ಸರ್ಕಾರ ಎಲ್ಲರಿಗೂ ಉದ್ಯೋಗವನ್ನು ಖಾತ್ರಿಪಡಿಸಬೇಕು.
  10. ಶಿಕ್ಷಣಕ್ಕಾಗಿ ಕೇಂದ್ರ ಬಜೆಟ್‌ನಲ್ಲಿ ಶೇ.10ರಷ್ಟು ಮತ್ತು ರಾಜ್ಯ ಬಜೆಟ್‌ನಲ್ಲಿ ಶೇ.30ರಷ್ಟು ಮೀಸಲಿಡಬೇಕು. ಒಟ್ಟು ಜಿಡಿಪಿಯ ಶೇ.3 ಮತ್ತು ಬಜೆಟ್‌ನಲ್ಲಿ ಶೇ.3ರಷ್ಟನ್ನು ಸಂಶೋಧನೆಗಾಗಿ ನಿಗದಿಪಡಿಸಬೇಕು.
  11. ಕ್ಯಾಂಪಸ್‌ಗಳ ಒಳಗೆ ಮತ್ತು ಹೊರಗೆ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಅವರ ಘನತೆಯ ರಕ್ಷಣೆಯನ್ನು ಖಾತ್ರಿಪಡಿಸಿ.
  12. ಲಿಂಗ್ಡೊ ಆಯೋಗದ ಶಿಫಾರಸುಗಳನ್ನು ರದ್ದುಗೊಳಿಸಿ ಮತ್ತು ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಎಲ್ಲ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮರು-ಪರಿಚಯಿಸಿ, ಎಲ್ಲ ಶೈಕ್ಷಣಿಕ ಕ್ಯಾಂಪಸ್‌ಗಳಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಮುಕ್ತ ಪ್ರಜಾತಾಂತ್ರಿಕ ವಾತಾವರಣವನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ನಿತಿನ್, ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ ಹಾಗೂ ಪದಾಧಿಕಾರಿ ಹೇಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...