ಮೈಸೂರು | ಹನಗೋಡು ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ; ಸ್ಥಳೀಯರಲ್ಲಿ ಆತಂಕ

Date:

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಮತ್ತೆ ಹುಲಿ ಹೆಜ್ಜೆಗುರುತು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಹನಗೋಡು ಗ್ರಾಮದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್ ಆರ್ ರಮೇಶ್‌ಗೆ ಸೇರಿದ ತೋಟದಲ್ಲಿ ಕಳೆದ ಎರಡು ದಿನಗಳಿಂದ ಕಾಣಿಸಿಕೊಂಡಿದ್ದ ಹುಲಿಯ ಹೆಜ್ಜೆಗುರುತು ಪತ್ತೆಯಾಗಿದೆ. ಹುಲಿಯು ಕಾಡು ಹಂದಿಯೊಂದಿಗೆ ಕಾದಾಡಿ ಬೇಟೆ ಮಾಡಿರುವ ಕುರುಹು ಸ್ಥಳದಲ್ಲಿದೆ.

“ಲಕ್ಷ್ಮಣತೀರ್ಥ ನದಿಯ ಏರಿಯಲ್ಲಿ ಸಾಕಷ್ಟು ಪೊದೆಗಳಿವೆ. ಸಾಕಷ್ಟು ಗಿಡ-ಗಂಟಿಗಳು ಬೆಳೆದಿದ್ದು, ಇದು ಹುಲಿ-ಚಿರತೆ ವಾಸಕ್ಕೆ ಪ್ರಶಸ್ತ ಸ್ಥಳವಾಗಿದೆ. ಹಾಗಾಗಿ ಇದನ್ನು ತೆರವುಗೊಳಿಸಬೇಕು” ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಎರಡು ವರ್ಷಗಳಿಂದ ಹನಗೋಡಿನ ಸುಮಾರು 10 ಕಿ ಮೀ ಸುತ್ತ ಮುತ್ತಲಲ್ಲಿ ಹುಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದೆ. ಅಲ್ಲದೆ, ಹತ್ತಾರು ಜಾನುವಾರುಗಳನ್ನು ಬಲಿ ಪಡೆದಿದೆ. ಕಳೆದ ಆರು ತಿಂಗಳ ಹಿಂದೆ ಒಮ್ಮೆಲೆ ಎರಡು ಹಸುಗಳ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ಘಟನೆ ವೇಳೆ ಶೆಟ್ಟಳ್ಳಿ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ನಡೆಸಿದ್ದರೂ ಹುಲಿ ಪತ್ತೆಯಾಗಿರಲಿಲ್ಲ. ಆದರೂ ಆಗಾಗ್ಗೆ ಅಲ್ಲಲ್ಲಿ ತನ್ನ ಹೆಜ್ಜೆಗುರುತುಗಳೊಂದಿಗೆ ಕಾಣಿಸಿಕೊಂಡು ತನ್ನ ಇರುವಿಕೆಯನ್ನು ಸಾಬೀತುಪಡಿಸುತ್ತಲೇ ಇದೆ” ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

“ಹುಲಿ ಇರುವುದರಿಂದ ಗ್ರಾಮಸ್ಥರು ಜಮೀನಿಗೆ ತೆರಳಲು ಹೆದರುವಂತಾಗಿದೆ. ಹೇಗಾದರೂ ಸರಿ ಯಾವುದೇ ಪ್ರಾಣ ಹಾನಿಯುಂಟಾಗುವ ಮೊದಲೇ ಮುನ್ನೆಚ್ಚರಿಕೆಯಾಗಿ ಹುಲಿಯನ್ನು ಸೆರೆ ಹಿಡಿಯಬೇಕು” ಎಂದು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಹೆಜ್ಜೆ ಕಾಣಿಸಿಕೊಂಡಿರುವ ಸುತ್ತ ಕೂಂಬಿಂಗ್ ನಡೆಸಲಾಗುವುದು ಹಾಗೂ ಕ್ಯಾಮರಾ ಅಳವಡಿಸಿ ಹುಲಿ ಪತ್ತೆಗೆ ಕ್ರಮವಹಿಸುವುದಾಗಿ ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಸೀಮಾ, ವಲಯ ಅರಣ್ಯಾಧಿಕಾರಿ ನಂದಕುಮಾರ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ನಾಲ್ಕು ವರ್ಷದ ಪದವಿ ಹೇರಿಕೆ ಎಐಡಿಎಸ್‌ಒ ಖಂಡನೆ

ಡಿಆರ್‌ಎಫ್‌ಒ ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ಇದೀಗ ಹುಲಿ ಹೆಜ್ಜೆ ಪತ್ತೆಯಾಗಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕ್ಯಾಮರಾ ಅಳವಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...