ಮೈಸೂರು‌ | ಸಾವಯವ ಕೃಷಿ ಪದ್ಧತಿಯಲ್ಲಿ ತಂಬಾಕು ಬೆಳೆಯುವಂತಾಗಲಿ: ಹೊಸೂರು ಕುಮಾರ್

Date:

ಸಾವಯವ ಕೃಷಿ ಪದ್ಧತಿಯಲ್ಲಿ ತಂಬಾಕು ಬೆಳೆಯುವಂತಾಗಬೇಕು. ಇದರಿಂದಾಗಿ ರೈತರಿಗೆ ಖರ್ಚು ಉಳಿಯುತ್ತದೆ ಮತ್ತು ಗೊಬ್ಬರದ ನಿರ್ವಹಣೆಗೆ ತಗುಲುವ ವೆಚ್ಚ ಉಳಿತಾಯವಾಗುತ್ತದೆ. ಇದೊಂದು ಉತ್ತಮವಾದ ಪದ್ಧತಿ ಎಂದು ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ತಿಳಿಸಿದರು.

ಮೈಸೂರು ಜಿಲ್ಲೆಯ ಹುಣಸೂರಿನ ತಂಬಾಕು ಮಂಡಳಿಯಿಂದ ಹೊಸೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದಿರುವ ತಂಬಾಕಿನ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.

“ತಂಬಾಕು ಹದಮಾಡಲು ಲಕ್ಷಾಂತರ ಟನ್ ಸೌದೆಗಾಗಿ ಮರಗಳನ್ನು ಕಡಿಯಲಾಗುತ್ತದೆ. ಇದರಿಂದ ಅರಣ್ಯನಾಶ, ಮರಗಿಡಗಳ ನಾಶವಾಗುತ್ತಿದೆ. ಸದ್ಯ ಬೇರೆ ದಾರಿ ಕಾಣದೆ ರೈತರು ಸೌದೆಯ ಮೊರೆ ಹೋಗಿದ್ದಾರೆ. ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವಿಜ್ಞಾನಿಗಳು ತಂಬಾಕನ್ನು ಸೌದೆರಹಿತ ಕ್ಯೂರಿಂಗ್ ಮಾಡುವ ತಂತ್ರಜ್ಞಾನವನ್ನು ಕಂಡುಹಿಡಿಯಬೇಕು. ಆಧುನಿಕ ತಂತ್ರಜ್ಞಾನದಲ್ಲಿ ಎಲ್ಲವೂ ಸಾಧ್ಯ. ವಿದ್ಯುತ್ ಉಪಕರಣ, ಸೋಲಾರ್ ಇತ್ಯಾದಿ ಬಳಸುವುದರ ಮೂಲಕ ಮರಗಿಡಗಳನ್ನು ರಕ್ಷಿಸಲು ನೆರವಾಗಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಂಬಾಕು ಮಂಡಳಿ ಹರಾಜು ಅಧೀಕ್ಷಕ ನಿವೇಶ ಕುಮಾರ್ ಪಾಂಡೆ ಮಾತನಾಡಿ, “ತಂಬಾಕು ಬೆಳೆಯಲ್ಲಿ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದರಿಂದ ರೈತರಿಗೆ ಲಾಭವೇ ಹೊರತು ಅನಾನುಕೂಲಗಳಿಲ್ಲ. ವೆಚ್ಚ ಉಳಿತಾಯ, ಗೊಬ್ಬರದ ಉಳಿತಾಯ ಮಾಡಬಹುದು. ಕೆಲಸವೂ ಕೂಡ ಸರಾಗವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೆ ಎಸ್ಎಫ್ಐ ಆಗ್ರಹ

“ತಂಬಾಕು ಮಂಡಳಿಯಿಂದ ನಿಲ್ಸೋಡ್ ರೈತರಿಗೆ ಮತ್ತು ಕಡಿಮೆ ಸೊಪ್ಪನ್ನು ಮಾರಾಟ ಮಾಡಿದ ರೈತರಿಗೆ ವಿಧಿಸುತ್ತಿದ್ದ ದಂಡವನ್ನು ರದ್ದು ಮಾಡಲಾಗಿದೆ” ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ರೈತರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮದ ರಾಮೇಗೌಡ, ಚಿಕ್ಕ ತಮ್ಮಪ್ಪ, ಮಂಜೇಗೌಡ, ಹಳೆ ವರಂಜಿ ಲೋಕೇಶ, ಸಾವಯವ ಕೃಷಿ ಪದ್ಧತಿ ಮಾಡಿರುವ ಹೊಸೂರಿನ ರೈತ ಸುರೇಶ್, ವಿ ಎಸ್ ರಘು, ಗುರು, ಪುರದ ಪ್ರಕಾಶ್ ತಂಬಾಕು ಮಂಡಳಿಯ ಕ್ಷೇತ್ರ ಅಧಿಕಾರಿ ನಿರುಪಾದಿ ಸ್ವಾಮಿ, ಕ್ಷೇತ್ರ ಸಹಾಯಕ ನಾರಾಯಣ ಐಟಿಸಿ ಮತ್ತು ಜಿಪಿಐ ಕಂಪನಿಯ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...