ಮೈಸೂರು | ಅವೈಜ್ಞಾನಿಕ ಸಂಚಾರ ಕ್ರಮ; ಪ್ರವಾಸಿಗರಿಗೆ, ಪ್ರಯಾಣಿಕರಿಗೆ ಅನಾನುಕೂಲ

Date:

ಮೈಸೂರು ದಸರಾ ಮಹೋತ್ಸವದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ಸಾಮಾನ್ಯ ದೂರುಗಳಲ್ಲಿ ಸಂಚಾರ ನಿರ್ವಹಣೆಯ ಕೊರತೆಯೂ ಒಂದಾಗಿದೆ. ಅವೈಜ್ಞಾನಿಕ ತಿರುವುಗಳು ಮತ್ತು ಏಕಮುಖ ಸಂಚಾರವು ವಾಹನ ಚಾಲಕರಲ್ಲಿ ಸಾಕಷ್ಟು ಗೊಂದಲವನ್ನು ಸೃಷ್ಟಿಸುತ್ತಿದೆ ಎಂದು ಪ್ರವಾಸಿಗರು ಹೇಳಿದ್ದಾರೆ.

“ಸಂಜೆ 4ರ ಬಳಿಕ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ಜಿಲ್ಲೆಯ ವ್ಯಾಪಾರ ಕೇಂದ್ರಕ್ಕೆ ಪ್ರಯಾಣಿಸುವುದು ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಆದರೆ ಆಟೋಗಳು ಮತ್ತು ಬಸ್ಸುಗಳಿಗೆ ಗೊತ್ತುಪಡಿಸಿದ ನಿಲ್ದಾಣಗಳಿಲ್ಲ” ಎಂದು ಪ್ರವಾಸಿಗರು ಆರೋಪಿಸಿದ್ದಾರೆ.

“ವಾಹನ ಸಂಚಾರವನ್ನು ಸುವ್ಯವಸ್ಥಿತಗೊಳಿಲು ಪ್ರಮುಖ ಸ್ಥಳಗಳ ಬಳಿ ಆಟೋ, ಕಾರುಗಳಲ್ಲಿ ಬರುವವರಿಗೆ ಪೊಲೀಸರು ಯಾವುದೇ ಪಿಕ್-ಅಪ್ ಅಥವಾ ಡ್ರಾಪ್ ಪಾಯಿಂಟ್‌ಗಳನ್ನು ಒದಗಿಸಿಲ್ಲ. ಇದು ಗೊಂದಲದ ಪರಿಸ್ಥಿತಿಗೆ ಕಾರಣವಾಗುತ್ತಿದೆ” ಎಂದು ಬೆಂಗಳೂರಿನ ಪ್ರವಾಸಿಯಬ್ಬರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೋಮ್‌ ಗಾರ್ಡ್ಸ್ ಮತ್ತು ಸಂಚಾರ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದ್ದರೂ, ಅವೈಜ್ಞಾನಿಕ ತಿರುವುಗಳು ಮತ್ತು ಏಕಮುಖ ನಿಯಮವು ದೊಡ್ಡ ಸಮಸ್ಯೆಯಾಗಿದೆ.‌ ಮೈಸೂರು ರಸ್ತೆಗಳು ಅಗಲವಾಗಿದ್ದರೂ, ಟ್ರಾಫಿಕ್ ಜಾಮ್ ಸಮಸ್ಯೆಯಿಂದ ರಸ್ತೆಗಿಳಿಯಲು ಎಲ್ಲರೂ ಹೆದರುತ್ತಿದ್ದಾರೆ” ಎಂದು ಹೇಳಿದರು.

ಸಂಜೆ 6 ಗಂಟೆಯ ನಂತರ ಆಟೋ, ಟಾಂಗಾ ಸಂಚಾರ ಸ್ಥಗಿತ

“ನಗರದ ಬೆಳಕು ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದ್ದರೂ, ಸಂಚಾರ ದಟ್ಟಣೆಯಿಂದಾಗಿ ಅನೇಕ ಆಟೋ ಚಾಲಕರು, ಟಾಂಗಾ ನಿರ್ವಾಹಕರು ಸಂಜೆ 6 ಗಂಟೆಯ ನಂತರ ಸೇವೆಯನ್ನು ನಿಲ್ಲಿಸುತ್ತಿದ್ದಾರೆ. ನಾವು ಪ್ರಮುಖ ವ್ಯಾಪಾರ ಪ್ರದೇಶವನ್ನು ಪ್ರವೇಶಿಸಿದರೆ, ಹೊರಬರುವುದು ಸುಲಭವಲ್ಲ. ಪ್ರತಿ ದಸರಾ ಸಮಯದಲ್ಲೂ ಇದೇ ಸಮಸ್ಯೆ ಇರುತ್ತದೆ. ಹೀಗಾಗಿ ಸಂಜೆ 6 ಗಂಟೆಯ ನಂತರ ಆಟೋ ಸಂಚಾರ ನಿಲ್ಲಿಸುತ್ತೇವೆ” ಎಂದು ಆಟೋ ಚಾಲಕ ರಂಗಸ್ವಾಮಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

“ಸಂಚಾರ ತಿರುವು ಪ್ರತಿದಿನ ಗಲಾಟೆಗಳಿಗೆ ಕಾರಣವಾಗುತ್ತದೆ. ಈ ವರ್ಷ ತಿರುವುಗಳು ಅವೈಜ್ಞಾನಿಕವಾಗಿವೆ. ಪ್ರಮುಖ ರಸ್ತೆಗಳಲ್ಲಿ ಬಸ್ ಸಂಚಾರ ನಿಷೇಧಿಸುವುದು ಬುದ್ಧಿವಂತಿಕೆಯಲ್ಲ. ನಾವು ಅದನ್ನು ತಿಳಿಸಲು ಪ್ರಯತ್ನಿಸಿದರೆ, ನಮ್ಮ ವಿರುದ್ಧ ಪ್ರಕರಣಗಳು ದಾಖಲಾಗುತ್ತವೆಂದು ನಾವು ಏನೂ ಮಾತನಾಡುವುದಿಲ್ಲ” ಎಂದು ಕೆಎಸ್‌ಆರ್‌ಟಿಸಿ ಚಾಲಕರೊಬ್ಬರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...