ಮೈಸೂರು | ನಿರುದ್ಯೋಗ ಬಿಕ್ಕಟ್ಟು ಪರಿಹಾರಕ್ಕೆ ತುರ್ತುಕ್ರಮ ಕೈಗೊಳ್ಳುವಂತೆ ಪ್ರಧಾನ ಮಂತ್ರಿಗೆ ಮನವಿ

Date:

ನಿರುದ್ಯೋಗ ಬಿಕ್ಕಟ್ಟು ಪರಿಹಾರಕ್ಕೆ ತುರ್ತುಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯಿಂದ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದರು.

“ಭಾರತದಲ್ಲಿ ಯುವಜನರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದು, ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ)ಯ ಇತ್ತೀಚಿನ ವರದಿಯ ಪ್ರಕಾರ ಜೂನ್ 2024ರಲ್ಲಿ ನಮ್ಮ ದೇಶದ ನಿರುದ್ಯೋಗ ಶೇ.9.2ರಷ್ಟಾಗಿದೆ” ಎಂದರು.

“ಅನೇಕ ಯುವಜನರು ಉದ್ಯೋಗಾವಕಾಶಗಳ ಹುಡುಕಾಟದಲ್ಲಿ ದೇಶಾದ್ಯಂತ ಅನಿವಾರ್ಯವಾಗಿ ಅಲೆದಾಡುತ್ತಿದ್ದಾರೆ. ವಿದ್ಯಾವಂತ ಯುವಜನರಿಗೆ ಉದ್ಯೋಗಾವಕಾಶಗಳು ದೊರೆಯದೆ ತಮ್ಮ ತಾಯ್ನೆಲ, ಬಂಧು-ಬಳಗ, ಪ್ರೀತಿ-ಪಾತ್ರರನ್ನು ಬಿಟ್ಟು ದೇಶವನ್ನು ತೊರೆಯುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಲಸೆ ಕಾರ್ಮಿಕರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಇದರಿಂದ ಸಮಸ್ಯೆ ಮತ್ತುಷ್ಟು ಉಲ್ಬಣಗೊಳ್ಳುತ್ತಿದೆ. ಇದಲ್ಲದೆ, ಹತ್ತಾರು ವರ್ಷಗಳ ಸತತ ಪ್ರಯತ್ನಗಳ ನಂತರವೂ ಯುಪಿಎಸ್‌ಸಿ ಮತ್ತು ರಾಜ್ಯ ಸೇವಾ ಆಯೋಗಗಳ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆರ್ಥಿಕ ಭದ್ರತೆ ಮತ್ತು ಸ್ಥಿರತೆಯನ್ನು ನೀಡುವ ಸರ್ಕಾರಿ ಉದ್ಯೋಗವನ್ನು ಪಡೆಯಲಾಗದೆ ಹತಾಶರಾಗುತ್ತಿದ್ದಾರೆ. ನಿರುದ್ಯೋಗದ ಬಿಕ್ಕಟ್ಟು ಯುವಜನರ ಮಾನಸಿಕ ಆರೋಗ್ಯದ ಮೇಲೂ ಭಾರೀ ದುಷ್ಪರಿಣಾಮವನ್ನು ಉಂಟುಮಾಡುತ್ತಿದೆ” ಎಂದು ಹೇಳಿದರು.

“ಪ್ರಪಂಚದಲ್ಲೇ ಅತ್ಯಧಿಕ ಸಂಖ್ಯೆಯ ಯುವಜನರನ್ನು ಹೊಂದಿರುವ ಭಾರತ ದೇಶದಲ್ಲಿಂದು ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲಾಗುತ್ತಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಿಕೊಳ್ಳುತ್ತಿಲ್ಲ. ಖಾಯಂ ಸ್ವರೂಪದ ಕೆಲಸಗಳಿಗೂ ಗುತ್ತಿಗೆ ಆಧಾರದಲ್ಲಿ ನೇಮಕಾತಿಗಳು ನಡೆಯುತ್ತಿವೆ. ಹೊಸ ಉದ್ಯೋಗಗಳ ಸೃಷ್ಟಿಯ ಮಾತಂತೂ ದೂರವೇ ಉಳಿದಿದೆ” ಎಂದು ಅಪಾರ ಪ್ರಮಾಣದ ಉದ್ಯೋಗಾಕಾಂಕ್ಷಿ ಯುವಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿರುದ್ಯೋಗಿ ಯುವಜನರ ನೋವನ್ನು ನಿವಾರಿಸಲು ಪ್ರಧಾನ ಮಂತ್ರಿಯವರು ಕೂಡಲೇ ಕ್ರಮ ಕೈಗೊಳ್ಳಬೇಕು. ಉದ್ಯೋಗವು ಮೂಲಭೂತ ಹಕ್ಕೆಂದು ನಾವು ನಂಬುತ್ತೇವೆ ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಗೌರವಾನ್ವಿತ ಜೀವನೋಪಾಯದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಿರುದ್ಯೋಗಿ ಯುವಜನರ ಹಕ್ಕೊತ್ತಾಯಗಳನ್ನು ಬಗೆ ಹರಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಒಳ್ಳೆಯ ಮನುಷ್ಯನಾಗಲು ಓದಿನ ಅಗತ್ಯವಿದೆ : ಡಾ.ಶಿವಾಜಿ ಮೇತ್ರೆ

ನೀತುಶ್ರೀ ಎಸ್ ವಿ, ಸುನಿಲ್ ಟಿ ಆರ್, ಸುಮ ಎಸ್, ಪವನ್, ವೆಂಕಟೇಶ್, ನಚ್ಚಿನ್, ಅಕ್ಷಯ್ ಸೇರಿದಂತೆ ಇತರ ಉದ್ಯೋಗ ಆಕಾಂಕ್ಷಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...