ಮೈಸೂರು | ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಎಚ್ಚರಿಕೆ ಜಾಥಾ

Date:

ಸಂಯುಕ್ತ ಕಿಸಾನ್ ಮೋರ್ಚಾ ಕಳೆದ ದಿನ ರಾಜ್ಯವ್ಯಾಪಿ ಜನಜಾಗೃತಿ ಅಭಿಯಾನದ ಭಾಗವಾಗಿ ರೈತ, ಕಾರ್ಮಿಕ ಹಾಗೂ ಎಲ್ಲ ರೀತಿಯ ಶೋಷಿತ ಬಂಧುಗಳ ಹಿತ ಕಾಯುವಂತೆ ಆಗ್ರಹಿಸಿ ‘ಎಚ್ಚರಿಕೆ ಜಾಥಾʼ ನಡೆಸಿತು.

ಟೌನ್ ಹಾಲ್ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಸಂಸ, ಜೆಸಿಟಿಯು ಕಾರ್ಯಕರ್ತರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಸಯ್ಯಾಜಿರಾವ್ ರಸ್ತೆ ಮೂಲಕ ಮೆರವಣಿಗೆ ನಡೆಸುವುದರ ಮೂಲಕ ಗಾಂಧಿ ವೃತ್ತದಲ್ಲಿ ಸೇರಿದರು.

“ಕಾರ್ಮಿಕರು ಮತ್ತು ರೈತರು ಜಂಟಿಯಾಗಿ ದೇಶಾದ್ಯಂತ ಜ್ವಲಂತ ಸಮಸ್ಯೆಗಳನ್ನು ಎತ್ತಿ ಹಿಡಿಯಲು ಮತ್ತು ಪರಿಹಾರಕ್ಕಾಗಿ ಒತ್ತಾಯಿಸಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 2020ರಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಐತಿಹಾಸಿಕ ಚಳವಳಿ ಆರಂಭಿಸಲಾಗಿತ್ತು. ಆದೇ ದಿನವಾದ ನವೆಂಬರ್‌ 26ರಂದು ಪ್ರತಿಭಟನಾ ದಿನವನ್ನಾಗಿ ಆಚರಿಸಿದ್ದೇವೆ” ಎಂದು ಸಂಘಟಕರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಯಾಗಬೇಕು. ಬೆಳೆಗೆ ತಕ್ಕ ಬೆಲೆ ಇಲ್ಲದಿರುವುದರಿಂದ ರೈತರು ಸಾಲಗಾರರಾಗಿ ಲಕ್ಷಾಂತರ ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನ ಮಾಡಬೇಕು” ಎಂದು ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

“ರೈತರ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ನಿಲ್ಲಿಸಬೇಕು. ವಿದ್ಯುತ್ ಖಾಸಗೀಕರಣವಾಗದಂತೆ ತಡೆಯಬೇಕು. ರೈತರಿಗೆ ಅನ್ಯಾಯವಾಗದಂತೆ ರೈತರ ಹಿತ ಕಾಯುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾರ್ಯೋನ್ಮುಖರಾಗಬೇಕು” ಎಂದು ಒತ್ತಾಯಿಸಿದರು.

ಜನಾಂದೋಲನ ಮಹಾ ಮೈತಿಯ ಉಗ್ರನರಸಿಂಹೆ ಗೌಡ ಮಾತನಾಡಿ, “ಕೇಂದ್ರ ಸರ್ಕಾರ ಎಂಎಲ್‌ಸಿಗಳಿಗೆ ಅನುಕೂಲವಾಗುವಂತೆ ಡಿಜಿಟಲೀಕರಣವನ್ನು ಹೇರುತ್ತಿದೆ. ಇದರಿಂದ ಕಾರ್ಪೊರೇಟ್ ಕಂಪನಿಗಳ ಅದಾನಿ ಮತ್ತು ಅಂಬಾನಿಯಂಥವರಿಗೆ ನೆರವು ನೀಡುತ್ತಿದ್ದಾರೆ. ಯುವಕರಿಗೆ ಉದ್ಯೋಗದ ಆಸರೆಯಿರದೆ ವಾಸ್ತವವಾಗಿ ಗುಲಾಮಗಿರಿಗೆ ತಳ್ಳುವಂತಹ ಕೆಲಸವಾಗುತ್ತಿದೆ. ಕಾರ್ಮಿಕರಿಗೆ ಭದ್ರತೆಯಿಲ್ಲ. ಹೆಚ್ಚು ಸಮಯ ದುಡಿಸಿಕೊಳ್ಳುವುದು ಬಿಟ್ಟರೆ, ಕಾರ್ಮಿಕರ ಹಿತ ಕಾಯುವ ಕುಟುಂಬದ ಭದ್ರತೆ ಒದಗಿಸುವ ಕೆಲಸವಾಗುತ್ತಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ಅನುಭದಲ್ಲಿರುವವರಿಗೆ  ಭೂಮಿ ಮಂಜೂರು ಮಾಡಲು ರೈತರ ಮನವಿ 

ಜಗದೀಶ್ ಸೂರ್ಯ ಮಾತನಾಡಿ, “ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ಧೋರಣೆಗಳಿಂದ ರೈತರು, ಕಾರ್ಮಿಕರು ಶೋಷಣೆಗೆ ಒಳಗಾಗಿದ್ದಾರೆ. ಯುವಕರು ಬದುಕು ಕಟ್ಟಿಕೊಳ್ಳಲು ಆಗುತ್ತಿಲ್ಲ. ಕಾರ್ಪೊರೇಟ್ ಕುಳಗಳಿಗೆ ಮಣೆ ಹಾಕುತ್ತ ರೈತ, ಕಾರ್ಮಿಕರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ರೈತ ವಿರೋಧಿ ಕಾಯ್ದೆಗಳು ಒಂದುಕಡೆಯಾದರೆ, ಇನ್ನೊಂದು ಕಡೆ ಕಾರ್ಮಿಕ ವಿರೋಧಿ ನಡೆಯಂತಹ ದುರಾಡಳಿತವನ್ನು ನಿಲ್ಲಿಸಬೇಕು” ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಹೊಸಕೋಟೆ ಬಸವರಾಜು, ಜನಮನ ಗೋಪಾಲ್, ನೇತ್ರಾವತಿ, ಮಹಾದೇವ ನಾಯಕ, ಪಿ ಮರಂಕಯ್ಯ ಮೊದಲಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...