ಮೈಸೂರು | ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ಅಬ್ಬಿ ಫಾಲ್ಸ್‌ಗೆ ಬಂದಾಕೆ ಬೆಂಗಳೂರಿನಲ್ಲಿ ಪತ್ತೆ

Date:

ಮೈಸೂರು ಜಿಲ್ಲೆ ಬೆಟ್ಟದಪುರದ ಬಾರಸೆ ಗ್ರಾಮದ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಇದೀಗ ನಾಟಕೀಯ ತಿರುವು ಪಡೆದುಕೊಂಡಿದೆ. ಈಕೆ ಮಡಿಕೇರಿ ಅಬ್ಬಿ ಫಾಲ್ಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ಹುಸಿಯಾಗಿದ್ದು, ಆ ಮಹಿಳೆ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಸರಸ್ವತಿ (33) ಎಂಬ ಮಹಿಳೆ ಸೆಪ್ಟೆಂಬರ್ 7ರಂದು ನಾಪತ್ತೆಯಾಗಿರುವುದಾಗಿ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಈಕೆಯ ಪತ್ತೆ ಕಾರ್ಯಕ್ಕೆ ಮುಂದಾದ ಸಂದರ್ಭದಲ್ಲಿ ಅಬ್ಬಿ ಫಾಲ್ಸ್‌​ ಬಳಿ ಮಹಿಳೆಯ ಚಪ್ಪಲಿ, ಬಟ್ಟೆ, ಪರ್ಸ್ ಪತ್ತೆಯಾಗಿದ್ದವು. ಆಕೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿ ಎನ್​ಡಿಆರ್​ಎಫ್​, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಆದರೆ ಪ್ರಯೋಜನವಾಗಿರಲಿಲ್ಲ. ಈ ನಡುವೆ ಬೆಟ್ಟದಪುರದಲ್ಲಿರುವ ತನ್ನ ಸಹೋದರನಿಗೆ ಕರೆ ಮಾಡಿರುವ ಸರಸ್ವತಿ ತಾನು ಬೆಂಗಳೂರಿನಲ್ಲಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ನಾಪತ್ತೆಯಾಗುವ ಮುನ್ನ ಬರೆದಿಟ್ಟಿದ್ದ ಪತ್ರದಲ್ಲಿ ಏನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಕೆ ನಾಪತ್ತೆಯಾಗುವ ಮುನ್ನ ಮನೆಯಲ್ಲಿ ಬರೆದಿಟ್ಟು ಬಂದಿರುವ ಪತ್ರದಲ್ಲಿ ಈಕೆ ತಾನು ಅನುಭವಿಸಿದ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.

“ನನ್ನ ಈ ನಿರ್ಧಾರಕ್ಕೆ ಯಾರೂ ಕಾರಣರಲ್ಲ. ಮದುವೆಯಾಗಿ 12ರಿಂದ 13 ವರ್ಷದವರೆಗೆ ಎಷ್ಟೇ ಕಷ್ಟ ಆದರೂ ಸಹಿಸಿಕೊಂಡು ಬಂದೆ. ಆದರೆ ನಮ್ಮ ಮನೆಯಲ್ಲಿ ನನ್ನ ಇಷ್ಟ ಕಷ್ಟ ಏನೂ ನಡೆಯಲಿಲ್ಲ. ಹೊರಗಡೆ ಹೋಗಬೇಕೆಂದರೆ ದುಡ್ಡು ಕೊಡುತ್ತಿರಲಿಲ್ಲ. ನನಗೆ ಅದು ಬೇಕು ಇದು ಬೇಕು ಎಂದು ಯಾವತ್ತೂ ಕೇಳುತ್ತಿರಲಿಲ್ಲ. ಗಂಡ ಒಂದು ದಿನವೂ ಎಲ್ಲೂ ಕರೆದುಕೊಂಡು ಹೋಗಲಿಲ್ಲ. ಬರೀ ದನ ಕರು ಇದರಲ್ಲೇ ಕಾಲ ಕಳೆಯುವುದಾಯಿತು. ನಾನು ಕೆಲಸಕ್ಕೆ ಹೋಗುತ್ತೇನೆಂದರೂ ಕಳುಹಿಸಲಿಲ್ಲ. ಯಾರನ್ನು ಮಾತನಾಡಿಸಿದರೂ ಗಂಡನಿಗೆ ಅನುಮಾನ. ಇತ್ತೀಚೆಗೆ ನನಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ನಾನು ಎಲ್ಲೇ ಹೋದರು, ಏನೇ ಮಾಡಿಕೊಂಡರು, ಸತ್ತರೂ ಕೂಡ ಯಾರೂ ಜವಾಬ್ದಾರರಲ್ಲ. ನನ್ನನ್ನು ಹುಡುಕಬೇಡಿ, ನನ್ನ ಮಕ್ಕಳನ್ನು ಚೆನ್ನಾಗಿ ನೋಡ್ಕೊಳಿ” ಎಂದು ಆ ಪತ್ರದಲ್ಲಿ ಬರೆದಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ

ಜೀವ ಕಳೆದುಕೊಳ್ಳುವುದಾಗಿ ಪರೋಕ್ಷವಾಗಿ ಕುರುಹು ನೀಡಿ ನಾಪತ್ತೆಯಾಗಿದ್ದ ಈಕೆ ಪೊಲೀಸ್ ಇಲಾಖೆ ಮತ್ತು ಮನೆಯವರನ್ನು ಪೀಕಲಾಟಕ್ಕೆ ತಳ್ಳಿದ್ದು, ಇದೀಗ ಬೆಂಗಳೂರಿನಲ್ಲಿ ಇರುವುದಾಗಿ ಅವರೇ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...