ಮೈಸೂರು | ವಿಶ್ವ ಪೋಲಿಯೋ ದಿನ

Date:

ಪೋಲಿಯೋ ಮಹತ್ವದ ಕುರಿತು ಪೋಷಕರಲ್ಲಿ ಅರಿವು ಮೂಡಿಸಬೇಕು. ಕಾಲಕ್ಕೆ ತಕ್ಕಂತೆ ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸುವ ಮೂಲಕ ಸಂಪೂರ್ಣ ಪೋಲಿಯೋ ನಿರ್ಮೂಲನೆಗೆ ಶ್ರಮಿಸಬೇಕಿದೆ ಎಂದು ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಅಧ್ಯಕ್ಷ ಆರ್ ರಾಜೇಶ್ ಸಲಹೆ ನೀಡಿದರು.

ವಿಶ್ವ ಪೋಲಿಯೋ ದಿನದ ಅಂಗವಾಗಿ ಮೈಸೂರಿನ ರೋಟರಿ ಕ್ಲಬ್ ಆಫ್ ಹೆರಿಟೇಜ್ ವತಿಯಿಂದ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆದ ಲಸಿಕೆಯ ಮಹತ್ವದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಸಿಕೆ ಹಾಕಿ ಮಾತನಾಡಿದರು.

“ಐದು ವರ್ಷದೊಳಗಿನ ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಪೋಲಿಯೋ ಲಸಿಕೆ ಕೊಡಿಸುವುದು ಪೋಷಕರ ಮಹತ್ತರ ಜವಾಬ್ದಾರಿಯಾಗಿದೆ. ಏಕೆಂದರೆ ಲಸಿಕೆ ನೀಡದೇ ಹೋದಲ್ಲಿ ಮಕ್ಕಳು ಅಂಗವೈಕಲ್ಯತೆಗೆ ತುತ್ತಾಗುತ್ತಾರೆ. ಆದ್ದರಿಂದ ತಪ್ಪದೇ ಲಸಿಕೆ ಕೊಡಸಬೇಕು. ಈವರೆಗೂ ಪೋಲಿಯೋ ನಿರ್ಮೂಲನೆಗೆ ಜಗತ್ತಿನಾದ್ಯಂತ ಆರ್ಥಿಕವಾಗಿಯೂ ಹಾಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಸಾಕಷ್ಟು ಶ್ರಮ ವಹಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಆಸ್ಪತ್ರೆಗೆ ದಾಖಲಾಗಿರುವ ಸುಮಾರು 50ಕ್ಕೂ ಅಧಿಕ ನವಜಾತ ಶಿಶುಗಳಿಗೆ ಅಗತ್ಯವಿರುವ ಸ್ವೆಟರ್, ಟೊಪ್ಪಿ, ಕಾಲು ಚೀಲ ವಿತರಿಸಿದರು.

ಚೆಲುವಾಂಬ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ರಾಜೇಂದ್ರ ಕುಮಾರ್ ಮಾತನಾಡಿ, “ಪೋಲಿಯೋ ಲಸಿಕೆ ಕುರಿತು ಸಾಕಷ್ಟು ಅರಿವು ಮೂಡಿಸಿ, ಮನೆ-ಮನೆಗೆ ತೆರಳಿ ಲಸಿಕೆ ಕೊಡಿಸುವ ಕಾರ್ಯಕ್ಕೆ ಮುಂದಾದರೂ ಕೂಡಾ ಇನ್ನೂ ಸಾಕಷ್ಟು ಮಕ್ಕಳು ಲಸಿಕೆ ವಂಚಿತರಾಗಿ ಅಂಗವೈಕಲ್ಯತೆಗೆ ತುತ್ತಾಗುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ದಸರಾ ಪ್ರಾಧಿಕಾರ ರಚನೆಗೆ ಮಾಜಿ ಮೇಯರ್ ಸಂದೇಶ್ ಸ್ವಾಮಿ ಆಗ್ರಹ

“ಪೋಷಕರು ಎಚ್ಚೆತ್ತುಕೊಂಡು ಇನ್ಮುಂದಾದರೂ ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ಕೊಡಿಸುವ ಮುಖೇನ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ರೋಟರಿ ಕ್ಲಬ್ ಆಫ್ ಹೆರಿಟೇಜ್ ಸಂಸ್ಥಾಪಕ ಅಧ್ಯಕ್ಷ ರೊ ಮಂಜುನಾಥ್ ಕೆ, ಕ್ಲಬ್‌ನ ಹಿರಿಯ ಸದಸ್ಯ ರೊ ನಾರಾಯಣ್ ನಾಯಕ್, ರೊ ರಾಘವೇಂದ್ರ ಆಚಾರ್ ಮತ್ತು ಚಂದನ್, ಜೀವನಿಧಿ ಟ್ರಸ್ಟ್‌ನ ಆಯೇಷಾ, ಆಸ್ಪತ್ರೆಯ ಕಚೇರಿಯ ಅಧೀಕ್ಷಕ ದೇವರಾಜು, ಶುಶ್ರೂಷಕರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...