ಮೈಸೂರು | ವಿಶ್ವ ಶೌಚಾಲಯ ದಿನಾಚರಣೆ ʼನಮ್ಮ ಶೌಚಾಲಯ-ನಮ್ಮ ಗೌರವʼ ಅಭಿಯಾನ

Date:

ಸ್ವಚ್ಛತೆ ಕಡೆಗೆ ಆಧ್ಯತೆ ನೀಡಿ, ಪ್ರತಿ ಮನೆಗೆ ಶೌಚಾಲಯ ನಿರ್ಮಿಸಿಕೊಡುವ ಮೂಲಕ ಗ್ರಾಮಗಳಲ್ಲಿ ಬಯಲು ಶೌಚ ನಿರ್ಮೂಲನೆ ಮಾಡಬೇಕಿದೆ. ಇಂತಹ ಕಾರ್ಯಕ್ರಮಗಳ ಅನುಷ್ಠಾನ ಕುರಿತಾಗಿ ಅತಿಹೆಚ್ಚು ಜಾಗೃತಿ ಮೂಡಿಸಿ ಬದಲಾವಣೆ ದಿಕ್ಕಿಗೆ ಸಾಗಬೇಕಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ ಹೇಳಿದರು.

ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ʼವಿಶ್ವ ಶೌಚಾಲಯ ದಿನಾಚರಣೆʼ ಅಂಗವಾಗಿ ಸ್ವಚ್ಛ ಭಾರತ್ ಮಿಷನ್, ಜಿಲ್ಲಾ ಪಂಚಾಯತ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಮೈಸೂರು ಜಿಲ್ಲೆ ಬಯಲು ಮುಕ್ತ ಶೌಚವನ್ನಾಗಿಸಲು ಪಣತೊಟ್ಟು ‘ನಮ್ಮ ಶೌಚಾಲಯ-ನಮ್ಮ ಗೌರವ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಶ್ವ ಶೌಚಾಲಯ ದಿನ ಕಾರ್ಯಕ್ರಮ ಉದ್ಘಾಟನೆ 1

“ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತಿ ಮೂಡಿಸಬೇಕು. ತಾವು ತಮ್ಮ ಮನೆಯಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ. ತಮ್ಮ ಮನೆಗಳಲ್ಲಿ ಶೌಚಾಲಯವಿಲ್ಲದೇ ಇದ್ದರೆ ಪೋಷಕರಿಗೆ ಮಾಹಿತಿ ನೀಡಿ ಗ್ರಾಮ ಪಂಚಾಯಿತಿಗಳ ಮೂಲಕ ಅನುದಾನ ಪಡೆದು ನಿರ್ಮಾಣವಾಗುವಂತೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವ್ಯವಸ್ಥೆ ಎಷ್ಟೇ ಬದಲಾವಣೆಯಾದರು ನಾವಿನ್ನೂ ಬಯಲಿನಲ್ಲಿ ಶೌಚಕ್ಕೆ ಹೋಗುವುದು ಅನೈರ್ಮಲ್ಯಕ್ಕೇ ಕಾರಣರಾಗುತ್ತಿರುವುದು ಸರಿಯಲ್ಲ. ಅದರಿಂದ ರೋಗ ರುಜಿನಗಳು ಹೆಚ್ಚುತ್ತವೆ. ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ‘ನಮ್ಮ ಶೌಚಾಲಯ ನಮ್ಮ ಗೌರವ’ ಎನ್ನುವ ಭಾವನೆ ಮೂಡಬೇಕು. ಇಂತಹ ಕಾರ್ಯಕ್ರಮಗಳು ಆದಷ್ಟೂ ಹಳ್ಳಿಗಳಲ್ಲಿ ಅನುಷ್ಠಾನವಾಗಬೇಕು. ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಂಡು ಶೌಚಾಲಯವಿಲ್ಲದ ಮನೆಗಳನ್ನು ಗುರುತಿಸಿ,
ಸರ್ಕಾರದ ಅನುದಾನದಡಿಯಲ್ಲಿ ಶೌಚಾಲಯ ನಿರ್ಮಿಸಿಕೊಡಲು ಮುಂದಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಆರೋಗ್ಯ ಅಭಿಯಾನ ವಿಶೇಷ ಗ್ರಾಮ ಸಭೆಗೆ ಯಾರಿಗೂ ಆಹ್ವಾನವಿಲ್ಲ; ಪಂಚಾಯಿತಿ ಸದಸ್ಯರದ್ದೇ ದರ್ಬಾರ್

ಸಿಇಒ ಗಾಯತ್ರಿ ಮಾತನಾಡಿ, “ಬಯಲುಮುಕ್ತ ಶೌಚ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳು ಹೆಚ್ಚಿನ ಆಧ್ಯತೆ ನೀಡಿ ಪ್ರತಿ ಮನೆಗೆ ಶೌಚಾಲಯ ನಿರ್ಮಿಸಿಕೊಡುವ, ನಿರ್ಮಿಸಿಕೊಳ್ಳುವಂತೆ ಅರಿವು ನೀಡುವ ಕೆಲಸ ಮಾಡಬೇಕು. ಹಿರಿಯರು ಮುಜುಗರದಿಂದ ಮುಂದೆ ಬರದೆ ಇರಬಹುದು, ಅಂಥವರಿಗೆ ಮಾಹಿತಿ ನೀಡಿ, ಅದರಿಂದಾಗುವ ಪರಿಣಾಮ ತಿಳಿಸಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ” ಎಂದರು.

ಜಿಪಂ ಉಪ ಕಾರ್ಯದರ್ಶಿ ಕೃಷ್ಣರಾಜು, ಮಹೇಂದ್ರ, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...