ಸ್ವಚ್ಛ ನಗರಗಳಲ್ಲಿ 27ನೇ ಸ್ಥಾನಕ್ಕೆ ಕುಸಿದ ಮೈಸೂರು

Date:

2016ರಲ್ಲಿ ರಾಷ್ಟ್ರಮಟ್ಟದ ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಮೊದಲ ಸ್ಥಾನದಲ್ಲಿದ್ದ ಮೈಸೂರು ನಗರ 2023ರ ಸಮೀಕ್ಷೆಯಲ್ಲಿ 27ನೇ ಸ್ಥಾನಕ್ಕೆ ಕುಸಿದಿರುವುದು ಕಂಡುಬಂದಿದೆ.

2022ರಲ್ಲಿ ಮೈಸೂರು 14ನೇ ಸ್ಥಾನದಲ್ಲಿತ್ತು. ರ‍್ಯಾಂಕಿಂಗ್ ವ್ಯವಸ್ಥೆಯಲ್ಲಿನ ಬದಲಾವಣೆ ಮತ್ತು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ಸೌಲಭ್ಯದ ಕೊರತೆಯು ಕಳಪೆ ಸಾಧನೆಗೆ ಕಾರಣವಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹೇಳುತ್ತಾರೆ.

“ಕೆಲವು ವರ್ಷಗಳ ಹಿಂದೆ ಪ್ರಸ್ತಾಪಿಸಲಾದ ಅವಶೇಷಗಳ ತ್ಯಾಜ್ಯ ಘಟಕವನ್ನು ನಿರ್ಮಿಸುವ ಯೋಜನೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಆದರೂ ಮೈಸೂರು ಕರ್ನಾಟಕದ ಮೊದಲ ಸ್ವಚ್ಛ ನಗರವಾಗಿದೆ. 3ರಿಂದ 10 ಲಕ್ಷ ಮಂದಿ ಜನಸಂಖ್ಯೆ ವಿಭಾಗದಲ್ಲಿ ಅಖಿಲ ಭಾರತ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದೆ. ಈ ವರ್ಷದ ಥೀಮ್ ‘ತ್ಯಾಜ್ಯದಿಂದ ಸಂಪತ್ತಿಗೆ’ ಆಗಿತ್ತು. ತ್ರೈಮಾಸಿಕ ಮೌಲ್ಯಮಾಪನಗಳು, ಪ್ರಮಾಣೀಕರಣಗಳ ಅಂಕಗಳು (ಬಯಲು ಮಲವಿಸರ್ಜನೆ ಮುಕ್ತ ಮತ್ತು ಕಸ ಮುಕ್ತ ನಗರಗಳು) ಮತ್ತು ಸ್ವಚ್ಛ ಸರ್ವೇಕ್ಷಣ್ (ನೇರ ವೀಕ್ಷಣೆ, ನಾಗರಿಕರ ಪ್ರತಿಕ್ರಿಯೆ ಮತ್ತು ಸೇವಾ ಮಟ್ಟದ ಪ್ರಗತಿ) ಆಧಾರದ ಮೇಲೆ ಶ್ರೇಯಾಂಕವನ್ನು ನಿರ್ಧರಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸ್ವಚ್ಛ ಸರ್ವೇಕ್ಷಣ್-2023 | ಬೆಂಗಳೂರಿಗೆ ರಾಷ್ಟ್ರಮಟ್ಟದಲ್ಲಿ 125ನೇ ಸ್ಥಾನ

“ರಾಷ್ಟ್ರಮಟ್ಟದ ರ‍್ಯಾಂಕಿಂಗ್‌ನಲ್ಲಿ ಮೈಸೂರು 27ನೇ ಸ್ಥಾನಕ್ಕೆ ಕುಸಿದಿದೆ. ಈ ವರ್ಷ ಶ್ರೇಯಾಂಕ ವ್ಯವಸ್ಥೆಯ ನಿಯಮಗಳು ಬದಲಾಗಿವೆ. ಅಲ್ಲದೆ, ಮೈಸೂರು ನಗರವು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ಮೂಲಸೌಕರ್ಯಗಳನ್ನು ಮೈಸೂರು ನಗರವು ಇನ್ನೂ ರಚಿಸಿಲ್ಲ. ಅಂತಹ ಸೌಲಭ್ಯದ ಕೊರತೆಯು ಶ್ರೇಯಾಂಕದಲ್ಲಿ ನಗರಕ್ಕೆ ಪ್ರತಿಕೂಲವಾಗಿದೆ” ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಎನ್ ಪಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...