ಮೈಸೂರು | ಜಿಲ್ಲೆಯಲ್ಲಿ 9 ತಿಂಗಳಲ್ಲಿ 35 ರೈತರು ಆತ್ಮಹತ್ಯೆ

Date:

ಈ ವರ್ಷ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಮೈಸೂರು ಜಿಲ್ಲೆಯಲ್ಲಿ 2023ರ ಏಪ್ರಿಲ್‌ನಿಂದ ಈವರೆಗೆ 35 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆಘಾತಕಾರಿ ಸಂಗತಿ ವರದಿಯಾಗಿದೆ. ಮೃತ ರೈತರಲ್ಲಿ 18 ಮಂದಿ ಹೆಚ್ಚಾಗಿ ವಾಣಿಜ್ಯ ಬೆಳೆ ತಂಬಾಕು ಬೆಳೆಯುವ ಪರಿಯಾಪಟ್ಟಣ ತಾಲೂಕಿನವರಾಗಿದ್ದಾರೆ.

ಈ 35 ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರಕ್ಕೆ 27 ಸಂತ್ರಸ್ತ ಕುಟುಂಬದ ಅರ್ಜಿಯನ್ನು ಸರ್ಕಾರ ಅನುಮೋದಿಸಿದೆ. ಐದು ಪ್ರಕರಣಗಳನ್ನು ತಿರಸ್ಕರಿಸಿದೆ. ಉಳಿದ ಮೂರು ಪ್ರಕರಣಗಳಲ್ಲಿ ಪರಿಹಾರಕ್ಕಾಗಿ ಸಹಾಯಕ ಆಯುಕ್ತರ ನೃತೃತ್ವದ ಸಮಿತಿಯ ಮುಂದೆ ದಾಖಲೆಗಳನ್ನು ಸಲ್ಲಿಸಬೇಕಿದೆ ಎಂದು ತಿಳಿದುಬಂದಿದೆ.

“ರೈತರು ಕೂಲಿ ಕಾರ್ಮಿಕರನ್ನು ಸಂಪೂರ್ಣವಾಗಿ ಅವಲಂಬಿಸಿದ್ದರೆ, ಕೃಷಿಯಲ್ಲಿ ಲಾಭ ದೊರೆಯುವುದಿಲ್ಲ. ರೈತರು ಆಧುನಿಕ ವಿಧಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಮತ್ತು ಇಲಾಖೆಯ ಸಲಹೆಗಳನ್ನು ಅನುಸರಿಸುವಲ್ಲಿ ವಿಫಲರಾಗಿದ್ದಾರೆ. ರೈತರು ಬ್ಯಾಂಕ್‌ಗಳಲ್ಲಿ ಹೆಚ್ಚು ಸಾಲ ಪಡೆದು ಮರುಪಾವತಿ ಮಾಡದೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್ ಹೇಳಿರುವುದಾಗಿ ಟಿಎನ್‌ಐಇ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯು ಬರಕ್ಕೆ ತುತ್ತಾಗಿತ್ತು. ಆದರೂ, ಅಕ್ಟೋಬರ್‌ನಲ್ಲಿ ಉತ್ತಮ ಮಳೆಯಾಗಿದ್ದು, ಹಿಂಗಾರಿನಲ್ಲಿ ದ್ವಿದಳ ಧಾನ್ಯಗಳು ಮತ್ತು ಮೆಕ್ಕೆಜೋಳವನ್ನು ಶೇ.103 ರಷ್ಟು ಬಿತ್ತನೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಹೇಳಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...