ತಲೆಹರಟೆ ಸಂಸದ ಪ್ರತಾಪ್‌ ಸಿಂಹನನ್ನು ಪಕ್ಷದಿಂದ ದೂರವಿಡಬೇಕು; ಬಿಜೆಪಿ ಮುಖಂಡರ ಒತ್ತಾಯ

Date:

ಬಿಜೆಪಿ ಹೆಸರನ್ನು ಬಳಸಿಕೊಂಡು ಸಂಸದ ಪ್ರತಾಪ್ ಸಿಂಹ ತಲೆಹರಟೆ ಮಾಡುತ್ತಿದ್ದಾರೆ. ಬಿಜೆಪಿ ಕೋರ್ ಕಮಿಟಿಯಲ್ಲಿ ಚರ್ಚೆಯೇ ಆಗದಿದ್ದರೂ, ಮಹಿಷ ದಸರಾಗೆ ಬಿಜೆಪಿ ಹೆಸರಿನಲ್ಲಿ ಅಡ್ಡಿ ಮಾಡುತ್ತಿದ್ದಾರೆ. ಅವರನ್ನು ಪಕ್ಷದಿಂದ ದೂರ ಇಡಬೇಕು. ಮಹಿಷ ದಸರಾ ನಡೆಸಲು ಸರ್ಕಾರ ಮತ್ತು ಜಿಲ್ಲಾಡಳಿತ ಅವಕಾಶ ನೀಡಬೇಕು ಎಂದು ಬಿಜೆಪಿ ಮುಖಂಡ ಗಿರಿಧರ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಂವಿಧಾನವು ಎಲ್ಲರಿಗೂ ಧಾರ್ಮಿಕ ಹಕ್ಕನ್ನು ನೀಡಿದೆ. ಅದರಂತೆ, ಎಲ್ಲರಿಗೂ ತಮ್ಮ ಧಾರ್ಮಿಕ ಆಚರಣೆಗೆ ಅವಕಾಶವಿದೆ. ಮಹಿಷ ದಸರಾ ನಿಲ್ಲಿಸಬೇಕೆಂದು ಹೇಳಲು ಸಂಸದ ಪ್ರತಾಪ್ ಸಿಂಹ ಯಾರು? ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ. ಪಕ್ಷದ ಕೋರ್ ಕಮಿಟಿಯಲ್ಲಿ ಮಹಿಷ ದಸರಾವನ್ನು ವಿರೋಧಿಸಬೇಕೆಂಬ ತೀರ್ಮಾನವೇ ಆಗಿಲ್ಲ. ಮಹಿಷ ದಸರಾಗೆ ಬಿಎಪಿಯ ಸಂಪೂರ್ಣ ಬೆಂಬಲ ಇದೆ” ಎಂದು ಹೇಳಿದ್ದಾರೆ.

“ಬಿಜೆಪಿ ಶಾಸಕ ಶ್ರೀವತ್ಸ ಅವರಿಗೂ ಮಹಿಷ ದಸರಾವನ್ನು ವಿರೋಧಿಸುವುದು ಇಷ್ಟವಿಲ್ಲ. ತಲಹರಟೆ ಪ್ರತಾಪ್ ಸಿಂಹ ಅವರ ಬಲವಂತಕ್ಕೆ ಒಲ್ಲದ ಮನಸ್ಸಿನಿಂದ ಶ್ರೀವತ್ಸ ಅವರು ವಿರೋಧ ಮಾಡುತ್ತಿದ್ದಾರೆ. ಪ್ರತಾಪ್ ಸಿಂಹಗೆ ಮೈಸೂರಿನ ಇತಿಹಾಸ ಗೊತ್ತಿಲ್ಲ. ಮಹಿಷ ಕೆಟ್ಟ ವ್ಯಕ್ತಿಯಾಗಿದ್ದರೆ ಮೈಸೂರಿನ ಮಹರಾಜರು ಏಕೆ ಮಹಿಷನ ದೊಡ್ಡ ಪ್ರತಿಮೆ ನಿರ್ಮಾಣ ಮಾಡುತ್ತಿದ್ದರು. ಅಂತಹ ಪ್ರತಿಮೆಯನ್ನೇ ಅಪದ್ಧ, ಅಸಹ್ಯ ಎಂದು ಹೇಳುವ ಮೂಲಕ ಮೈಸೂರು ಮಹರಾಜರಿಗೆ ಅವಮಾನ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಜಗಜೀವನ್ ರಾಮ್ ಚರ್ಮ ಕೈಗಾರಿಕಾ ತರಬೇತಿ ಕೇಂದ್ರ ನಡೆಸದಂತೆ ಸವರ್ಣೀಯರ ತಡೆ; ಆರೋಪ

“ಪ್ರತಾಪ್ ಸಿಂಹನಿಗೂ ಮೈಸೂರಿಗೂ ಯಾವ ಸಂಬಂಧವಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಲಿ ಎಂಬ ಕಾರಣಕ್ಕಾಗಿ 2014ರಲ್ಲಿ ಇವರಿಗೆ ಟಿಕೆಟ್‌ ಕೊಟ್ಟು ಗೆಲ್ಲಿಸಿದ್ದೇವೆ. ಗೆದ್ದ ನಂತರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ನಡೆದುಕೊಂಡು ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಚಾಮುಂಡಿ ಬೆಟ್ಟವನ್ನು ಪ್ರತಾಪ್‌ ಸಿಂಹ ಗುತ್ತಿಗೆ ಪಡೆದಿಲ್ಲ. ಅಲ್ಲಿಗೆ ಎಲ್ಲ ಧರ್ಮದವರು ಹೋಗುತ್ತಾರೆ. ಈ ಹಿಂದೆ, ಪ್ರತಾಪ್‌ ಸಿಂಹ ಮುಸಲ್ಮಾನರ ವಿರುದ್ಧ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಹಿನ್ನಡೆಯುಂಟು ಮಾಡಿದ್ದರು. ಈಗ ದಲಿತರ ವಿರುದ್ಧ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮತ್ತಷ್ಟು ಹಿನ್ನಡೆಯುಂಟು ಮಾಡುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...