ಮೈಸೂರು| ಬೇನಾಮಿ ಆಸ್ತಿ ಖರಿದಿದಾರರ ವಿರುದ್ಧ ಕ್ರಮಕ್ಕೆ ರೈತರ ಆಗ್ರಹ

Date:

ಬೇನಾಮಿ ಆಸ್ತಿ ಖರೀದಿದಾರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರು ತಾಲುಕಿನ ಕೋಚನಹಳ್ಳಿ ಗ್ರಾಮದ ಭೂಮಿ ಕಳೆದುಕೊಂಡ ರೈತರು ಮೈಸೂರಿಗೆ ಕಾಲ್ನಡಿಗೆ ಜಾಥಾ ನಡೆಸಿದ್ದಾರೆ. ಸುಮಾರು 965 ದಿನಗಳಿಂದ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ಕೋಚನಹಳ್ಳಿಯಲ್ಲಿ ಕೆಲವರು ಬೇನಾಮಿ ಆಸ್ತಿ ಖರೀದಿಸಿದ್ದಾರೆ. ಇದರಿಂದಾಗಿ ನಾವು ಭುಮಿ ಕಳೆದುಕೊಂಡಿದ್ದೇವೆ. ನಮಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ರೈತರು ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಆದರೂ, ಸರ್ಕಾರವಾಗಲೀ, ಅಧಿಕಾರಿಗಳಾಗಲೀ ಸ್ಪಂದಿಸಿಲ್ಲವೆಂದು ರೈತ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ರೈತಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ನೇತೃತ್ವದಲ್ಲಿ ಶುಕ್ರವಾರ ಮೈಸೂರಿನ ಎಸ್‌ಪಿ ಕಚೇರಿಗೆ ಕಾಲ್ನಡಿಗೆ ಜಾಥಾ ಆರಂಭಿಸಿದ್ದರು. ಜಾಥಾ ಕಡಕೊಳ ತಲುಪುವಷ್ಟರಲ್ಲಿ ರೈತರನ್ನು ಭೇಟಿ ಮಾಡಿದ ಮೈಸೂರು ಗ್ರಾಮಾಂತರ ಡಿವೈಎಸ್‌ಪಿ ಕರೀಮ್ ರಾವತ್ ಮತ್ತು ಇನ್‌ಸ್ಪೆಕ್ಟರ್‌ ಶೇಖರ್ ಸಭೆ ನಡೆಸುವುದಾಗಿ ಮನವೊಲಿಸಿ ಕಡಕೊಳ ಉಪ ಪೊಲೀಸ್ ಠಾಣೆಗೆ ರೈತ ಮುಖಂಡರನ್ನು ಕರೆದೊಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಠಾಣೆಯಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಪೊಲೀಸರು, “ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಬೇನಾಮಿ ಆಸ್ತಿ ಖರೀದಿದಾರರ ವಿರುದ್ಧ ಎಫ್‌ಐಅರ್‌ ದಾಖಲಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಪೊಲೀಸರ ಮನವೊಲಿಕೆಯಿಂದ ಕಾಲ್ನಡಿಗೆ ಜಾಥಾವನ್ನು ರೈತರು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಚಂದ್ರಶೇಖರ್ ಮೇಟಿ, ಉಗ್ರ ನರಸಿಂಹ ಗೌಡ, ಬೊಕ್ಕಳ್ಳಿ ನಂಜುಂಡಸ್ವಾಮಿ, ಪಿ ಮರಂಕಯ್ಯ, ಮಂಡಕಳ್ಳಿ ಮಹೇಶ್, ಶ್ರೀಮತಿ ನೇತ್ರಾವತಿ, ರಾಘವೇಂದ್ರ, ಚಂದ್ರಶೇಖರ, ಮಹೇಶ್,ಮುದ್ದು ರಾಜು,ಜೆ, ಸ್ವಾಮಿ, ಚಲುವರಾಜು, ಇನ್ನು ಹಲವಾರು ಮುಖಂಡರು ಪಾಲ್ಗೊಂಡಿದ್ದರು,

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...