ಮೈಸೂರು | ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ

Date:

ಪ್ರತಿಯೊಬ್ಬರು ಕಡ್ಡಾಯವಾಗಿ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ಇದರಿಂದ ವಂಚನೆಗೆ ಒಳಗಾಗದೇ ಜಾಗೃತವಾಗಿರಬಹುದು ಎಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್ ಹೇಳಿದರು.

ಮೈಸೂರು ನಗರದ ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದಿಂದ ಹಮ್ಮಿಕೊಂಡಿದ್ದ ಗ್ರಾಹಕ ಜಾಗರಣ ಪಾಕ್ಷಿಕ 2023ರ ಗ್ರಾಹಕರ ಹಿತ ಚಿಂತನ ಸಭೆಯಲ್ಲಿ ಮಾತನಾಡಿದರು.

“ಯಾವುದೇ ವಸ್ತುವನ್ನು ಖರೀದಿಸಿದರೆ ನಾವು ಗ್ರಾಹಕರಾಗುತ್ತೇವೆ. ಆದರೆ ಕಾನೂನಿನ ದೃಷ್ಠಿಯಿಂದ ಗ್ರಾಹಕರಾಗಬೇಕಾದರೆ ಗ್ರಾಹಕರು ತೆಗೆದುಕೊಳ್ಳುವ ಸರಕು ಮತ್ತು ಸೇವೆಗೆ ರಸೀದಿ ತೆಗೆದುಕೊಂಡಾಗ ಮಾತ್ರ ನಾವು ಕಾನೂನು ಬದ್ಧ ಗ್ರಾಹಕರಾಗುತ್ತೇವೆ. ಅವರಿಗೆ ಕಾನೂನಿನ ರಕ್ಷಣೆ ಸಿಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಹಕರಾದ ಮೇಲೆ ಅವರಿಗೆ ವಿಶೇಷವಾದ ಹಕ್ಕುಗಳು ಕೂಡ ಬರುತ್ತವೆ. ತಾನು ತೆಗೆದುಕೊಂಡ ಸರಕು ಅಥವಾ ಸೇವೆಗಳಿಂದ ಉಂಟಾದ ದೋಷ, ನ್ಯೂನ್ಯತೆ ಮತ್ತು ಅಪಾಯ ಉಂಟಾದರೆ ಅವರ ವಿರುದ್ಧ ರಕ್ಷಣೆ ಪಡೆಯಬಹುದು. ತಾನು ತೆಗೆದುಕೊಂಡ ವಸ್ತುವಿನ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ಅದರ ಶಕ್ತಿ ಸಾಮರ್ಥ್ಯ, ಗುಣಮಟ್ಟ, ಶ್ರೇಷ್ಠತೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳವ ಹಕ್ಕು ಇರುತ್ತದೆ. ಮೋಸ, ವಂಚನೆ, ಸೇವಾ ನ್ಯೂನ್ಯತೆ ಶೋಷಣೆಗೆ ಒಳಗಾಗಿದ್ದರೆ ಅದರ ವಿರುದ್ಧ ರಕ್ಷಣೆ ಪಡೆದುಕೊಳ್ಳುವ ಹಕ್ಕು ಇರುತ್ತದೆ” ಎಂದು ಜಾಗೃತಿ ಮೂಡಿಸಿದರು.

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ರಾಜ್ಯ ಸಂಚಾಲಕ ಡಾ ಜಿ ವಿ ರವಿಶಂಕರ್ ಮಾತನಾಡಿ, “ಪ್ರತಿ ವರ್ಷದಂತೆ ಗ್ರಾಹಕ ಸಂರಕ್ಷಣಾ ಕಾಯ್ದೆ ಡಿಸೆಂಬರ್ 24ರಂದು ಜಾರಿಗೆ ಬಂದ ದಿನ. ಈ ದಿನವನ್ನು ದೇಶಾದ್ಯಂತ ರಾಷ್ಟ್ರೀಯ ಗ್ರಾಹಕ ದಿನವೆಂದು ಆಚರಿಸುತ್ತೇವೆ. ಗ್ರಾಹಕ ಸಂರಕ್ಷಣಾ ಕಾಯ್ದೆ ಜಾರಿಗೆ ತರುವಲ್ಲಿ ನಮ್ಮ ಗ್ರಾಹಕ ಪಂಚಾಯತ್ ಕಾರ್ಯಕರ್ತರ ಶ್ರಮ ಹಾಗೂ ಅಂದು ತೆಗೆದುಕೊಂಡಂತಹ ಗ್ರಾಹಕ ಆಂದೋಲನಾತ್ಮಕ ನಿರ್ಧಾರಗಳು ಮತ್ತು ಚಟುವಟಿಕೆಗಳೇ ಕಾರಣವಾಗಿತ್ತು. ಇದರ ಸ್ಮರಣಾರ್ಥ ಈ ಸುವರ್ಣ ಮಹೋತ್ಸವ ವರ್ಷದ ಸಂದರ್ಭದಲ್ಲಿ ನಾವೆಲ್ಲರೂ ಸೇರಿ ಹೆಚ್ಚೆಚ್ಚು ಗ್ರಾಹಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಜ.26ರಿಂದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ

ಇದೇ ಸಂದರ್ಭದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್, ರಾಜ್ಯ ಸಂಚಾಲಕ ಡಾ ಜಿ ವಿ ರವಿಶಂಕರ್, ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಉಪಾಧ್ಯಕ್ಷ ಜಯ ಕುಮಾರ್, ದೊರೆಸ್ವಾಮಿ, ಶಿವಕುಮಾರ್, ಎಂ ವಿ ನಾಗೇಂದ್ರ ಬಾಬು, ಶ್ರೀಕಾಂತ್ ಕಶ್ಯಪ್, ಯೋಗೇಶ್ ಕುಮಾರ್, ಬೈರತಿ ಲಿಂಗರಾಜು ಸೇರಿದಂತೆ ಇತರರು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...