ಮೈಸೂರು | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ; ಎಸ್‌ಡಿಪಿಐ ಆರೋಪ

Date:

ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮುಸ್ಲಿಂ ಸಮುಧಾಯಕ್ಕೆ ಕಾಂಗ್ರೆಸ್‌ ನೀಡಿದ್ದ ಯಾವುದೇ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಡೇರಿಸಿಲ್ಲ. ಅವರು ಸಮುದಾಯಕ್ಕೆ ವಂಚನೆ ಮಾಡಿದ್ದಾರೆ. ಇಬ್ಬರೂ ನುಡಿದಂತೆ ನಡೆದಿಲ್ಲ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದರು.

ಕಾಂತರಾಜು ವರದಿ ಜಾರಿ ಮಾಡಬೇಕು. ಮುಸ್ಲಿಂ ಸಮುದಾಯಕ್ಕೆ 2ಬಿ ಮೀಸಲಾತಿಯನ್ನು ಶೇ.8ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿ ಮೈಸೂರಿನಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ಮುಸ್ಲಿಂ ಮತ್ತು ದಲಿತ ಸಮುದಾಯ ಪ್ರಮುಖ ಕಾರಣವಾಗಿದೆ. ಚುನಾವಣೆ ವೇಳೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ಮೊದಲ ಕ್ಯಾಬಿನೆಟ್ನಲ್ಲೇ ಬಿಜೆಪಿ ರದ್ದುಪಡಿಸಿದ್ದ 2ಬಿ ಮೀಸಲಾತಿ ಪುನರ್ ಪ್ರತಿಷ್ಠಾಪನೆ ಮಾಡುವುದಾಗಿ ಹೇಳಿದ್ದರು. ಈಗ 10 ಕ್ಯಾಬಿನೆಟ್‌ ಮೀಟಿಂಗ್‌ಗಳು ನಡೆದರೂ ಅದರ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಕೇಳಿದರೆ ಪ್ರಕರಣ ನ್ಯಾಯಾಲಯದಲ್ಲಿದೆ ಎನ್ನುತ್ತೀರಿ. ಆದರೇ, ಮತಾಂತರ ನಿಷೇದ ಕಾಯ್ದೆ ಪ್ರಕರಣವೂ ನ್ಯಾಯಾಲಯದಲ್ಲಿತ್ತು. ಅದನ್ನು ಸಂಪುಟ ಸಭೆಗೆ ತಂದು ಕಾಯ್ದೆ ರದ್ದು ಮಾಡಿದ್ದು ಹೇಗೆ? ಅದೇ ರೀತಿ ಇದನ್ನೂ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ 30 ವರ್ಷಗಳಿಂದ ನೀಡಲಾಗಿದ್ದ 2ಬಿ ಮೀಸಲಾತಿ ಪುನರ್ ಪ್ರತಿಷ್ಠಾಪಿಸುವಂತೆ ಕಾಂಗ್ರೆಸ್ ಸರ್ಕಾರದಲ್ಲಿರುವ ಇಬ್ಬರು ಮುಸ್ಲಿಂ ಮಂತ್ರಿಗಳು ಸೇರಿದಂತೆ 9 ಶಾಸಕರಿಗೆ ಕೇಳುವ ಧೈರ್ಯ ಇಲ್ಲದಿರುವುದು ನಾಚಿಕೆಗೇಡು. ಅವರೆಲ್ಲರೂ ನಾಮರ್ಧರು ಎಂದು” ಕಿಡಿಕಾರಿದರು.

“ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಕಾಂತರಾಜು ವರದಿ ಅಂಗೀಕರಿಸದೆ, ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿ ವರದಿ ಅಂಗೀಕರಿಸಲಿಲ್ಲ ಎಂದು ಆರೋಪಿಸುವ ಸಿಎಂ, ಆ ವೇಳೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು. ಯಾವ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಮಾಡಲಾಗಿತ್ತು ಎಂದು ಬಹಿರಂಗ ಮಾಡಲಿ. ಹೆಚ್ಡಿಕೆ ಸಿದ್ದರಾಮಯ್ಯ ಮೇಲೆ, ಸಿದ್ದರಾಮಯ್ಯ ಹೆಚ್ಡಿಕೆ ಮೇಲೆ ಆರೋಪ ಮಾಡುತ್ತಾ ಮುಸ್ಲಿಂ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ನಿಮಗೆ ದಮ್ಮು, ತಾಕತ್ತು ಇದ್ದರೆ ಕಾಂತರಾಜು ವರದಿ ಅಂಗೀಕರಿಸಿ ಅದಕ್ಕೆ ಅನುಗುಣವಾಗಿ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಸಮುದಾಯಕ್ಕೆ ಸೂಕ್ತ ಸೌಲಭ್ಯ ಕಲ್ಪಿಸಿ” ಎಂದು ಅಬ್ದುಲ್ ಮಜೀದ್ ಸವಾಲು ಹಾಕಿದರು.

“ಒಂದು ವೇಳೆ ಕಾಂತರಾಜು ವರದಿ ಅಂಗೀಕರಿಸಿ ಸಮುದಾಯಗಳಿಗೆ ಅನುಕೂಲ ಮಾಡಿದ್ದಲ್ಲಿ ಮುಸ್ಲಿಂ ತುಷ್ಠೀಕರಣ ಎಂದು ಬಿಜೆಪಿ ಐಟಿ ಸೆಲ್ ಗುಲ್ಲೆಬ್ಬಿಸುತ್ತದೆ ಎಂಬ ಭಯ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಕಾಡುತ್ತಿದೆ. ಆದರೇ, ಜನ ಜಾಗೃತರಾಗಿದ್ದಾರೆ. ಕಳೆದ ಬಾರಿ ಕೋಮುವಾದಿ ಸರ್ಕಾರದಿಂದ ತೀವ್ರ ಅನ್ಯಾಯಕ್ಕೆಒಳಗಾಗಿದ್ದ ಮುಸ್ಲಿಂ ಮತ್ತು ದಲಿತ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿತ್ತು. ಮುಂದಿನ ಚುನಾವಣೆಯಲ್ಲಿ ನೀವು ಈ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸದಿದ್ದಲ್ಲಿ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂಬುದು ನೆನಪಿರಲಿ” ಎಂದು ಎಚ್ಚರಿಕೆ ನೀಡಿದರು.

“ಬಿಹಾರದಲ್ಲಿ ಜಾತಿ ಗಣತಿ ವರದಿ ಪ್ರಕಟವಾಗಿದೆ. ಕಾಂಗ್ರೆಸ್ ಕೂಡ ತಾನು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿ ಮಾಡಿಸುವುದಾಗಿ ಹೇಳಿದೆ. ಆದರೇ ರಾಜ್ಯದಲ್ಲಿ ಈಗಾಗಲೇ ವರದಿ ತಯಾರಾಗಿದೆ. ಇದನ್ನು ಅಂಗೀಕರಿಸಿ ತುಳಿತಕ್ಕೆ ಒಳಗಾದ ಸಮುದಾಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಬೇಕು. ಅಲ್ಲಿಯ ತನಕವೂ ಎಸ್ಡಿಪಿಐ ರಾಜ್ಯವ್ಯಾಪಿ ಜನ ಜಾಗೃತಿ ಮೂಡಿಸಿ ಹೋರಾಟ ನಡೆಸುತ್ತದೆ” ಎಂದು ಮಜೀದ್ ಹೇಳಿದರು.

ಪ್ರತಿಭಟನೆಯಲ್ಲಿ ದೇವನೂರು ಪುಟ್ಟನಂಜಯ್ಯ, ಹರಿಹರ ಆನಂದಸ್ವಾಮಿ, ಮೌಲಾನ ನೂರುದ್ದೀನ್, ರಫತ್ ಖಾನ್,ತನ್ವೀರ್ ಪಾಷ, ಅಲ್ತಾಫ್ ಅಹಮದ್, ಸ್ವಾಮಿ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...