ಮೈಸೂರು | ರೈಲ್ವೆ ನಿಲ್ದಾಣಕ್ಕೆ ಮತ್ತೊಂದು ಪ್ರವೇಶ ದ್ವಾರ ನಿರ್ಮಾಣ; ನೈಋತ್ಯ ರೈಲ್ವೆ ಚಿಂತನೆ

Date:

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು ರೈಲ್ವೆ ನಿಲ್ದಾಣಕ್ಕೆ ಮೂರನೇ ಪ್ರವೇಶ ದ್ವಾರವನ್ನು ನಿರ್ಮಿಸಲು ಚಿಂತನೆ ನಡೆಸಿದೆ.

200 ಕೋಟಿ ರೂ.ಗಳ ಈ ಯೋಜನೆಯನ್ನು ಮುಖ್ಯ ಪ್ರವೇಶದ್ವಾರದಲ್ಲಿನ ದಟ್ಟಣೆಯನ್ನು ನಿವಾರಿಸಲು ಮತ್ತು ಪ್ರಯಾಣಿಕರಿಗೆ ಸೌಲಭ್ಯಗಳನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾಗಿದೆ. ಮೈಸೂರು ಮತ್ತು ಬೆಂಗಳೂರು ನಡುವೆ ಡಬಲ್ ಟ್ರ್ಯಾಕ್ ಹಾಕಿರುವುದರಿಂದ ಕಳೆದ ದಶಕದಲ್ಲಿ ಪ್ರಯಾಣಿಕರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗಿರುವುದರಿಂದ ಈ ಯೋಜನೆ ಅತ್ಯಗತ್ಯ.

ನಗರವು ವೇಗವಾಗಿ ಬೆಳೆಯುತ್ತಿರುವುದರಿಂದ, ಮೈಸೂರು ರೈಲ್ವೆ ಜಂಕ್ಷನ್ ಮತ್ತು ಇತರ ಸ್ಥಳಗಳ ನಡುವೆ, ಮುಖ್ಯವಾಗಿ ಬೆಂಗಳೂರು ನಡುವೆ ಜನರ ಚಲನೆ ಪ್ರತಿವರ್ಷ ಹೆಚ್ಚುತ್ತಿದೆ. ಪ್ರಸ್ತುತ ದಿನಗಳಲ್ಲಿ ನಿತ್ಯವೂ ಸುಮಾರು 50,000 ಮಂದಿ ಪ್ರಯಾಣಿಕರು ಮೈಸೂರು ರೈಲ್ವೆ ನಿಲ್ದಾಣದಿಂದ ಇತರ ಸ್ಥಳಗಳಿಗೆ ನಿರ್ಗಮಿಸುತ್ತಿದ್ದಾರೆ. ರಾಮನಗರ, ಬಿಡದಿ ಮತ್ತು ಕೆಂಗೇರಿಯ ಹಲವು ಗಾರ್ಮೆಂಟ್ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಹೆಚ್ಚಿನ ಸಂಖ್ಯೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಮಹಿಳೆಯರು ಮೈಸೂರಿನಿಂದ ಪ್ರತಿದಿನ ಪ್ರಯಾಣಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಯಾಣಿಕರಿಂದ ಮೈಸೂರು-ಬೆಂಗಳೂರು ರೈಲುಗಳಿಗೆ ಭಾರೀ ಬೇಡಿಕೆ ಇರುವುದರಿಂದ, ಜನದಟ್ಟಣೆಯನ್ನು ಕಡಿಮೆ ಮಾಡಲು ಕೆಆರ್‌ಎಸ್‌ ರಸ್ತೆಯ ವಾಣಿ ವಿಲಾಸ ವಾಟರ್ ವರ್ಕ್ಸ್ (ವಿವಿಡಬ್ಲ್ಯೂಡಬ್ಲ್ಯೂ) ನಿಂದ ಮೈಸೂರು ರೈಲ್ವೆ ನಿಲ್ದಾಣಕ್ಕೆ ಮೂರನೇ ಪ್ರವೇಶ ದ್ವಾರವನ್ನು ನಿರ್ಮಿಸಲು ವಿಭಾಗ ಯೋಜಿಸುತ್ತಿದೆ.

“ಮೈಸೂರು ರೈಲ್ವೆ ನಿಲ್ದಾಣವು ಎರಡು ಪ್ರವೇಶದ್ವಾರಗಳನ್ನು ಹೊಂದಿದ್ದು, ಮೂರನೇ ಪ್ರವೇಶದ್ವಾರವನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಮತ್ತು ಯಶವಂತಪುರ ರೈಲ್ವೆ ನಿಲ್ದಾಣಗಳ ಮಾದರಿಯಲ್ಲಿ ಯೋಜಿಸಲಾಗಿದೆ. ಶಾಪಿಂಗ್ ಮಾಲ್, ಕೆಫೆಟೇರಿಯಾ ಮತ್ತು ಸೂಪರ್ ಮಾರ್ಟ್ ಸೇರಿದಂತೆ ಇತರ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಹೈಟೆಕ್ ಸೌಲಭ್ಯಗಳೊಂದಿಗೆ ವಿಮಾನ ನಿಲ್ದಾಣದ ಟರ್ಮಿನಲ್ ಮಾದರಿಯಲ್ಲಿ ಹೊಸ ಪ್ರವೇಶದ್ವಾರವನ್ನು ವಿನ್ಯಾಸಗೊಳಿಸಲಾಗುವುದು” ಎಂದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

“ವಿವಿಡಬ್ಲ್ಯೂಡಬ್ಲ್ಯೂ ಕಡೆಯಿಂದ ಮೂರನೇ ಪ್ರವೇಶ ದ್ವಾರ ನಿರ್ಮಿಸಲು ವಿಭಾಗವು ರೈಲ್ವೆ ಸಚಿವಾಲಯಕ್ಕೆ ಪ್ರಸ್ತಾವನೆ ಕಳುಹಿಸಿದೆ. ದೆಹಲಿ ಮೂಲದ ಸಂಸ್ಥೆಯೊಂದು ಮೈಸೂರು ರೈಲ್ವೆ ನಿಲ್ದಾಣದ ಮೂರನೇ ಪ್ರವೇಶ ದ್ವಾರ ನಿರ್ಮಾಣ ಸೇರಿದಂತೆ ಮೇಲ್ದರ್ಜೆಗೇರಿಸಲು ನೀಲನಕ್ಷೆ ಸಿದ್ಧಪಡಿಸಿದೆ” ಎಂದು ಮೈಸೂರು ವಿಭಾಗದ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ಹೇಳಿದರು.

“ವಿವಿಡಬ್ಲ್ಯೂಡಬ್ಲ್ಯೂ ಬದಿಯ ಬಳಿ ಶಿಥಿಲಗೊಂಡ ವಸತಿಗೃಹಗಳನ್ನು ನೆಲಸಮಗೊಳಿಸಿ ಮೈಸೂರು ರೈಲ್ವೆ ನಿಲ್ದಾಣ ವಿಸ್ತರಿಸಬೇಕಾಗಿರುವುದರಿಂದ ಇದು ತಾಂತ್ರಿಕ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿದೆ. ಮೂರನೇ ಪ್ರವೇಶ ದ್ವಾರ ನಿರ್ಮಾಣ ಸೇರಿದಂತೆ ರೈಲ್ವೆ ನಿಲ್ದಾಣವನ್ನೂ ಮೇಲ್ದರ್ಜೆಗೇರಿಸುವುದು ಇನ್ನೂ ಅಂತಿಮಗೊಂಡಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೌಹಾರ್ದತೆ ಸಾರುವ ಸುಗ್ಗಿ ಹಬ್ಬ ‘ಎಳ್ಳ ಅಮಾವಾಸ್ಯೆ’

ಸಿಎಫ್‌ಟಿಆರ್‌ಐ ಎದುರು ಎರಡನೇ ಪ್ರವೇಶ ದ್ವಾರವನ್ನು ತೆರೆದ ಬಳಿಕವೂ ಪ್ರಯಾಣಿಕರಿಗೆ ಸಹಾಯವಾಗಿದೆ. ಮೈಸೂರು ವಿಭಾಗದ ರೈಲ್ವೆ 750 ಕೋಟಿ ರೂ.ಗಳ ವೆಚ್ಚದಲ್ಲಿ ಪಿಎಂ ಗತಿ ಶಕ್ತಿ ಯೋಜನೆಯಡಿ ರೈಲ್ವೆ ನಿಲ್ದಾಣದ ಪಾರಂಪರಿಕ ರಚನೆಗೆ ಧಕ್ಕೆಯಾಗದಂತೆ ಮರುನಿರ್ಮಾಣ ಮತ್ತು ಪುನರಾಭಿವೃದ್ಧಿ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಮೂರನೇ ಪ್ರವೇಶ ದ್ವಾರವನ್ನು ನಿರ್ಮಿಸುವ ಯೋಜನೆಯು ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣದ ಭಾಗವಾಗಿದೆ. ಮೂರನೇ ಪ್ರವೇಶ ದ್ವಾರವನ್ನು ಎರಡನೇ ಪ್ರವೇಶ ದ್ವಾರದೊಂದಿಗೆ ಸಂಪರ್ಕಿಸಲು ಅಧಿಕಾರಿಗಳು ಯೋಜಿಸಿದ್ದಾರೆ. ಏಕೆಂದರೆ ಇದು ರೈಲ್ವೆ ನಿಲ್ದಾಣದಲ್ಲಿ ಪಾರ್ಕಿಂಗ್ ದಟ್ಟಣೆಯನ್ನು ಕಡಿಮೆ ಮಾಡಲು ನಗರ ರೈಲ್ವೆ ಅಧಿಕಾರಿಗಳಿಗೆ ಸಹಾಯ ಮಾಡುವುದಲ್ಲದೆ ಹೆಚ್ಚಿನ ರೈಲು ಸಂಚಾರಕ್ಳಕೂ ಅನುಕೂಲವಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...