ಮೈಸೂರು | ʼಆದಿತ್ಯ ಅಧಿಕಾರಿ ಆಸ್ಪತ್ರೆʼ ಬಂದ್​​ಗೆ ಜಿಲ್ಲಾಧಿಕಾರಿ ಆದೇಶ

Date:

ಮೈಸೂರಿನ ಗೋಕುಲಂ ಬಡಾವಣೆಯಲ್ಲಿರುವ ʼಆದಿತ್ಯ ಅಧಿಕಾರಿ ಆಸ್ಪತ್ರೆʼಗೆ ಬೀಗ ಹಾಕುವಂತೆ ಮತ್ತು ವೈದ್ಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಕೂಡಲೇ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ.

ರವಿಗೌಡ ದೊಡ್ಡಪ್ಪ ಶಿವಣ್ಣ ಎಂಬುವರು 2016ರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಶಿವಣ್ಣರ ಅವರನ್ನು ಮೊದಲು ಬೇರೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2017ರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆದಿತ್ಯ ಅಧಿಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ಆಪರೇಷನ್‌ಗಾಗಿ ನಾಲ್ಕು ತಿಂಗಳು ಚಿಕಿತ್ಸೆ ನೀಡಲಾಗಿತ್ತು. ಆಪರೇಷನ್ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಮೈಸೂರಿನ ರವಿಗೌಡ ಎಂಬುವರು ಆರೋಗ್ಯ ಇಲಾಖೆಯ ಜಾಗೃತಕೋಶದ ಜಾಗೃತಾಧಿಕಾರಿಗೆ ದೂರು ನೀಡಿದ್ದರು. ವೈದ್ಯರ ನಿರ್ಲಕ್ಷ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಆಸ್ಪತ್ರೆಯನ್ನು ಬಂದ್​ ಮಾಡಿಸಬೇಕೆಂದು ದೂರಿನಲ್ಲಿ ದಾಖಲಿಸಿದ್ದರು. ಈ ಸಂಬಂಧ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಡಾ.ಚಂದ್ರಶೇಖರ್ ವಿರುದ್ಧ ತನಿಖೆ ನಡೆಸಲು ಆದೇಶಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸ್ಟೆಲ್‌ಗಳಲ್ಲಿ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಬೆಂವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ತನಿಖೆ ವೇಳೆ ವೈದ್ಯ ಚಂದ್ರಶೇಖರ್ ಐದು ಅಂಶಗಳ ಲೋಪ ಎಸಗಿರುವುದು ಸಾಬೀತಾಗಿತ್ತು. ಡಾ.ಚಂದ್ರಶೇಖರ್ ಅನಸ್ತೇಷಿಯ ವೈದ್ಯರಲ್ಲ. ಅವರು ಅನಸ್ತೇಷಿಯಾ ವಿಷಯದಲ್ಲಿ ವಿದ್ಯಾರ್ಹತೆ ಹೊಂದಿಲ್ಲ. ಅನಧಿಕೃತವಾಗಿ ಬಿಎಎಂಎಸ್ ವ್ಯಾಸಂಗ ಮಾಡಿರುವವರನ್ನು ನೇಮಕ ಮಾಡಿಕೊಂಡಿದ್ದಾರೆ. ರವಿಗೌಡ ದೊಡ್ಡಪ್ಪ ಶಿವಣ್ಣ ಸಾವಿಗೆ ಕಾರಣವಾಗಿರುವುದು. ಈ ಹಿನ್ನೆಲೆಯಲ್ಲಿ ಮೃತ ಕುಟುಂಬಸ್ಥರಿಗೆ ₹15.60 ಲಕ್ಷ  ಪರಿಹಾರ ನೀಡುವಂತೆ 2023ರ ಆಗಸ್ಟ್​ 8 ರಂದು ಆದೇಶ ಹೊರಡಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...