ಮೈಸೂರು | ದಸರಾ ಆಹಾರ ಮೇಳ; ಆದಿವಾಸಿಗಳಿಗೆ ಅಧಿಕಾರಿಗಳಿಂದ ತೊಂದರೆ

Date:

ದಸರಾ ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಅಧಿಕಾರಿಗಳು ಬಿಡುತ್ತಿಲ್ಲ. ಅಧಿಕ ಬಾಡಿಕೆ ಕಟ್ಟಬೇಕೆಂದು ತೊಂದರೆ ಕೊಡುತ್ತಿದ್ದಾರೆ ಎಂದು ಪ್ರಕೃತಿ ಆದಿವಾಸಿ ಫೌಂಡೇಶನ್ ಟ್ರಸ್ಟ್‌ ಅಧ್ಯಕ್ಷ ಕೃಷ್ಣಯ್ಯ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, “ಅರಣ್ಯ ರಕ್ಷಣೆಯಲ್ಲಿ ನಾವು ಇಲಾಖೆಗಳಿಗೆ ಸಹಾಯ ಮಾಡುತ್ತೇವೆ. ಆದರೆ, ವರ್ಷಕ್ಕೊಮ್ಮೆ ಆಹಾರ ಮೇಳಕ್ಕೆ ಬಂದಾಗ ಹೆಚ್ಚು ಬಾಡಿಗೆ ದರ ವಿಧಿಸುವುದು ಸರಿಯಾದ ನಡೆಯಲ್ಲ. 2014ರಿಂದ ದಸರಾ ಆಹಾರ ಮೇಳದಲ್ಲಿ ಮಳಿಗೆ ಹಾಕಿಕೊಳ್ಳುತ್ತಿದ್ದೇವೆ. ಅಂದಿನಿಂದಲೂ ಯಾರೂ ಬಾಡಿಗೆ ಕೇಳಿಲ್ಲ. ಅದರೆ ಈ ವರ್ಷ ಮಳಿಗೆ ಹಾಕಿಕೊಳ್ಳಲು ಒಂದು ಲಕ್ಷ ರೂ. ಬಾಡಿಗೆ ಕೇಳುತ್ತಿದ್ದಾರೆ” ಎಂದು ಆರೋಪಿಸಿದರು.

“ಅನುಮತಿ ಇಲ್ಲದೇ ನಿಯಮ ಉಲ್ಲಂಘಿಸಿ ಆಹಾರ ಮೇಳದಲ್ಲಿ ಮಳಿಗೆ ತೆರೆದಿದ್ದಾರೆ ನಮ್ಮ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದೆ.  ಎಚ್‌.ಡಿ.ಕೋಟೆ ತಾಲೂಕಿನ ವಿವಿಧ ಹಾಡಿಗಳ 50 ಮಂದಿ ದಸರಾದಲ್ಲಿ ಮೈಸೂರಿಗೆ ಬಂದು ಬುಡಕಟ್ಟು ಆಹಾರವನ್ನು ನಗರದವರಿಗೆ ಪರಿಚಯಿಸುತ್ತಿದ್ದಾರೆ. ಶೆಡ್‌ ಹಾಕಿಕೊಳ್ಳುವುದಕ್ಕೆ 2 ಲಕ್ಷ ರೂ. ಬೇಕು. ಆಹಾರ ಸಾಮಗ್ರಿ ಖರೀದಿಸಲು 1 ಲಕ್ಷ ರೂ. ಬೇಕು. ಈಗ ಬಾಡಿಗೆ 1 ಲಕ್ಷ ರೂ. ಕೇಳಿದರೆ, ನಾವು ಎಲ್ಲಿಗೆ ಹೋಗಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ನಮಗೆ ಎರಡು ಸ್ಟಾಲ್ ಕೊಡುತ್ತಿದ್ದರು. ಬಾಡಿಗೆಯನ್ನೇನು ಕೇಳುತ್ತಿರಲಿಲ್ಲ. ಆಹಾರ ಮೇಳದಲ್ಲಿ ಬುಡಕಟ್ಟು ಸಮುದಾಯಗಳಾದ ಜೇನುಕುರುಬ, ಎರವ, ಸೋಲಿಗ, ಡೋಂಗ್ರಿ ಗ್ರೆಸಿಯಾ, ರಾಮನಗರದ ಇರುಳಿಗ ಜನರು ಬರುತ್ತಾರೆ. ಬಂದ ಲಾಭದಲ್ಲಿ ಹಂಚಿಕೊಳ್ಳುತ್ತೇವೆ. ಕಳೆದ ದಸರಾದಲ್ಲಿ ಏನೂ ಆದಾಯ ಬರಲಿಲ್ಲ. 2019ರಲ್ಲಿ ₹1 ಲಕ್ಷ ಲಾಭ ಇತ್ತು. ಅದರಿಂದ ಸಮುದಾಯದವರಿಗೆ ರಗ್ಗು, ಸೊಳ್ಳೆ ಪರದೆ ಕೊಟ್ಟಿದ್ದೆವು. ಲಾಭವನ್ನೂ ಸಮುದಾಯದವರಿಗೆ ಖರ್ಚು ಮಾಡುತ್ತೇವೆ. ಈಗ ಬಾಡಿಗೆ ಕೇಳುತ್ತಿರುವುದರಿಂದ ನೋವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ‘

“ಸ್ಥಳಕ್ಕೆ ಮುಡಾ ಎಇಇ ಸಂಪತ್‌ ಕುಮಾರ್‌ ಹಾಗೂ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರೂ ಬಂದಿದ್ದರು. ಆದಿವಾಸಿಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಲು ಹೋದರೆ, ಆಹಾರ ಮೇಳ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕಿ ಕುಮುದಾ ಅವರಲ್ಲಿ ಕೇಳಿ ಎನ್ನುತ್ತಾರೆ. ಹಾಗಾಗಿ ಸಚಿವ ಮಹದೇವಪ್ಪ ಅವರಲ್ಲಿ ಮನವಿ ಸಲ್ಲಿಸುತ್ತೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...