ಮೈಸೂರು ದಸರಾ | ಕವಿತೆಗೆ ಭಾಷೆಯ ಅಂತರವಿಲ್ಲ: ಡಾ. ಎಚ್.ಸಿ ಮಹದೇವಪ್ಪ

Date:

ಭಾಷೆ ಎನ್ನುವುದು ಒಂದು ಸಂಪರ್ಕ ಸೇತುವೆ. ಇದನ್ನು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ನೋಡಲು ಸಾಧ್ಯವಿಲ್ಲ. ಸಾಹಿತ್ಯಕ್ಕೆ ಭಾಷೆಯ ಅಂತರವಿಲ್ಲ ಸಾಹಿತ್ಯದ ಅಂಶಗಳು ಯಾವ ಭಾಷೆಯಲ್ಲಿದ್ದರೂ ಅರ್ಥ ಒಂದೇ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ಹೇಳಿದ್ದಾರೆ.

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ಉರ್ದು ಕವಿಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಭಾಷೆ ಎನ್ನುವುದು ನಮ್ಮ ಸಾಂಸ್ಕೃತಿಕ ಹಿನ್ನೆಲೆ ಮತ್ತು ಚರಿತ್ರೆಯನ್ನು ತಿಳಿಸುವಂತಹ ಒಂದು ಸಂಪರ್ಕ ಸಾಧನ. ಕವಿತೆ ಕವಿಗೂ ವ್ಯತ್ಯಾಸವಿಲ್ಲ. ಹಾಗೆಯೇ ರವಿ ಕಾಣದನ್ನು ಕವಿ ಕಂಡ ಎನ್ನುವ ಹಾಗೆ ಕವಿಯು ಯಾವ ಭಾಷೆಯನ್ನು ಬಳಸಿದರು ಆತನ ಸಾಹಿತ್ಯದ ಭಾವನೆ ಒಂದೇ ಆಗಿರುತ್ತದೆ. ಪ್ರಸ್ತುತವಾಗಿ ಜಾತಿ ಧರ್ಮಗಳ ವಿರುದ್ಧದ ಹೋರಾಟದಲ್ಲಿ ಸಮಾಜವು ಸಿಲುಕಿದೆ. ಇದನ್ನು ಸರಿದೂಗಿಸಿಕೊಂಡು ಹೋಗಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಾಧ್ಯವಾಗಿದೆ. ಪರಸ್ಪರ ಬೆರೆಯುವುದು ಮಾನವೀಯ ಮೌಲ್ಯಗಳನ್ನು ತಿಳಿದುಕೊಳ್ಳಲು ಮತ್ತು ಇತಿಹಾಸವನ್ನು ತಿಳಿಯಲು ಈ ರೀತಿಯ ಕವಿ ಗೋಷ್ಠಿಗಳನ್ನು ಹೆಚ್ಚು ಆಯೋಜಿಸಬೇಕು” ಎಂದರು.

“ಸಾಹಿತ್ಯಕ್ಕೆ ಸಮಾಜದ ಸಮಸ್ಯೆಗಳ ಕುರಿತು ಹಾಗೂ ಸ್ನೇಹ ಸೌಹಾರ್ದ, ಬಾತೃತ್ವ ಮನೋಭಾವದ ಸಂದೇಶವನ್ನು ಇಡೀ ಸಮುದಾಯಕ್ಕೆ ಈ ಕವಿಗೋಷ್ಠಿಯ ಮೂಲಕ ತಿಳಿಯುವಂತಾಗಲಿ. ದಸರೆಯ ಉತ್ಸವ ಯಾವುದೇ ಧರ್ಮಕ್ಕೆ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಜನರಲ್ಲಿರುವ ಪ್ರತಿಭೆ, ಆಸಕ್ತಿ ಅನುಭವ, ಇವುಗಳನ್ನು ಗುರುತಿಸಿ ಬೆಳಕಿಗೆ ತರುವಂತಹ ಕೆಲಸವನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಮುದಾಯಗಳ ನಡುವೆ ಸಹೋದರತ್ವ ಮನೋಭಾವ ಸಾಂಸ್ಕೃತಿಕತೆಯ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುವಂತಹ ಕೆಲಸವನ್ನು ಈ ಕವಿಗೋಷ್ಠಿ ಮಾಡಲಿ” ಎಂದ ಅವರು ಕವಿಗೋಷ್ಠಿಯಲ್ಲಿದ್ದ ಎಲ್ಲ ಕವಿಗಳಿಗೂ ಶುಭಾಶಯ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಮಾತನಾಡಿದ ನ್ವೀರ್ ಸೇಟ್, “ಮೈಸೂರು ರಾಜರು ಕಲೆ ಮತ್ತು ಸಾಹಿತ್ಯಕ್ಕೆ ನೀಡುತ್ತಿದ್ದ ಕೊಡುಗೆಯನ್ನು ಈಗಿನ ದಸರಾ ಮಹೋತ್ಸವದಲ್ಲೂ ಕೂಡ ನಿರ್ವಹಿಸಿಕೊಂಡು ಬಂದಿದ್ದೇವೆ. ದಸರಾದ ಕವಿಗೋಷ್ಠಿಯಲ್ಲಿ ಉರ್ದು ಕವಿಗೋಷ್ಠಿ ವಿಭಿನ್ನ ಕಾರ್ಯಕ್ರಮವಾಗಿದೆ. ಹೆಚ್ ಸಿ ಮಹದೇವಪ್ಪ ರವರು
ಉರ್ದು ಭಾಷೆಗೆ ಉತ್ತಮ ಪ್ರಾಮುಖ್ಯತೆ ನೀಡುತ್ತಿದ್ದು ಇದರ ಕುರಿತಂತೆ ಈ ಹಿಂದೆಯೂ ಕೂಡ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಈ ಕವಿ ಗೋಷ್ಠಿಗೆ ವಿವಿಧ ರಾಜ್ಯಗಳಿಂದ ಖ್ಯಾತ ಕವಿಗಳು ಆಗಮಿಸಿದ್ದು ಈ ಗೋಷ್ಠಿಯು ವಿಶಿಷ್ಟವಾದ ಮತ್ತು ವಿನೂತನವಾದ ಕಾರ್ಯಕ್ರಮವಾಗಿದೆ” ಎಂದರು

ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಡಾ.ದಾಸೇಗೌಡ, ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಎಸ್ ವಿಜಯ್ ಕುಮಾರಿ ಕರಿಕಲ್ ,ನಿವೃತ್ತ ಪ್ರೊಫೆಸರ್ ಮುಜಾಫರ್ ಅಸ್ಸಾದಿ, ಬಾಲಿವುಡ್ ನಟರಾದ ರಜಾ ಮುರಾದ್, ಖ್ಯಾತ ಉರ್ದು ಕವಿಗಳಾದ ಬ್ರಾರ್ ಖಾಶೀಫ್,‌ ಜಮೀಲ್ ಅಸ್ಕರ್, ಕಾರ್ಯಕ್ರಮದಲ್ಲಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...