ಮೈಸೂರು | ಡಾ. ವಿಜಯ ದಬ್ಬೆ ಸ್ಮರಣಾರ್ಥ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆ

Date:

ಮೈಸೂರಿನ ಸಮತಾ ಅಧ್ಯಯನ ಕೇಂದ್ರವು ಡಾ. ವಿಜಯ ದಬ್ಬೆ ಅವರ ಸ್ಮರಣಾರ್ಥ 20ರಿಂದ 35 ವಯೋಮಾನದ ವಿದ್ಯಾರ್ಥಿ ಮತ್ತು ಯುವಜನರಿಗೆ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

ಕೇಂದ್ರವು ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ, ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಕವನ ಸ್ಪರ್ಧಿಸಬಯಸುವವರು ಎರಡು ಕವನಗಳನ್ನು ಕಳಿಸಬೇಕು. ಲಲಿತ ಪ್ರಬಂಧ ಸ್ಪರ್ಧೆಗೆ ಒಂದು ಪ್ರಬಂಧವನ್ನು ಕಳಿಸಬೇಕು ಎಂದು ಕೇಂದ್ರದ ಅಧ್ಯಕ್ಷೆ ಸಬಿಹಾ ಭೂಮಿಗೌಡ ತಿಳಿಸಿದ್ದಾರೆ.

ಅಭ್ಯರ್ಥಿಗಳು ಕಳುಹಿಸುವ ಕವನ ಹಾಗೂ ಪ್ರಬಂಧಗಳು ಈ ಮೊದಲು ಎಲ್ಲಿಯೂ ಪ್ರಸಾರ ಅಥವಾ ಪ್ರಕಟ ಆಗಿರಬಾರದು. ಪ್ರಬಂಧಕ್ಕೆ ಗರಿಷ್ಟ ಪದ ಮಿತಿ 2000 ಪದಗಳು. ವಯಸ್ಸಿನ ಖಚಿತತೆಗೆ ಎಸ್ಎಸ್ಎಲ್‌ಸಿ ಅಂಕಪಟ್ಟಿ ಅಥವಾ ಆಧಾರ್ ಕಾರ್ಡ್ ಲಗತಿಸಬೇಕು. ಕವನ ಪ್ರಬಂಧಗಳನ್ನು ಹಾಳೆಯ ಒಂದು ಮಗ್ಗಲಲ್ಲಿ ಸ್ಪಷ್ಟವಾಗಿ ಬರೆದು ಅಥವಾ ವಾಟ್ಸಪ್ ಮಾಡಿ. ಪ್ರತ್ಯೇಕ ಹಾಳಿಯಲ್ಲಿ ಹೆಸರು, ವಿಳಾಸ, ಫೋನ್ ಸಂಖ್ಯೆ, ಇಮೇಲ್ ವಿವರ ನಮೂದಿಸಿ ಜ. 29, 2024ರ ಒಳಗೆ, ಶ್ರೀಮತಿ ವಿಜಯ ರಾವ್. ಮನೆ ನಂಬರ್ 861, 14ನೇ ಮೇನ್ ವಿಜಯನಗರ ಮೊದಲನೇ ಹಂತ, ಮೈಸೂರು. ಪಿನ್ 570017 ಈ ವಿಳಾಸಕ್ಕೆ ಕಳುಹಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ಸ್ಪರ್ಧೆಗಳಿಗೆ ಒಂದೇ ಮೊತ್ತದ ಪ್ರಥಮ 5,000 ರೂ, ದ್ವಿತೀಯ 3000 ರೂ, ತೃತೀಯ ರೂಪಾಯಿ 2000 ರೂ, ಪ್ರತ್ಯೇಕ ಬಹುಮಾನವಿರುತ್ತದೆ. ವಿಜೇತರು ಮತ್ತು ತೀರ್ಪುಗಾರರ ಮೆಚ್ಚುಗೆ ಪಡೆಯುವ ತಲಾ ಹತ್ತು ಸ್ಪರ್ಧಿಗಳಿಗೆ ಮೇ ತಿಂಗಳ ಕೊನೆಯ ವಾರದಲ್ಲಿ ಒಂದಿನ ಸಾಹಿತ್ಯ ಕಮ್ಮಟ ಆಯೋಜಿಸಲಾಗುವುದು ಎಂದು ಸಮತಾ ಅಧ್ಯಯನ ಕೇಂದ್ರವು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...