ಹಿಂದು ರಾಷ್ಟ್ರವಾಗಿಸುವುದನ್ನು ತಡೆಯದಿದ್ದರೆ ಭಾರತ ನಾಶ: ಚಿಂತಕ ರಾಮಚಂದ್ರ ಗುಹಾ 

Date:

ಹಿಂದೂ ರಾಷ್ಟ್ರವನ್ನಾಗಿಸುವ ಮನುವಾದಿಗಳ ಗುರಿಯನ್ನು ತಡೆಯದೆ ಹೋದರೆ, ಭಾರತ ನಾಶವಾಗಲಿದೆ ಎಂದು ಲೇಖಕ ಹಾಗೂ ಪ್ರಗತಿಪರ ಚಿಂತಕ ರಾಮಚಂದ್ರ ಗುಹಾ ಹೇಳಿದರು.

ಮೈಸೂರಿನ ಮಾನಸಗಂಗೋತ್ರಿಯ ಗಾಂಧಿಭವನದಲ್ಲಿ ಸೋಮವಾರದಂದು ನಡೆದ “ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ” ಕುರಿತ ಸಂವಾದದಲ್ಲಿ ಮಾತನಾಡಿದರು.

“ಬಾಬಾ ಸಾಹೇಬರ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಧರ್ಮ, ಭಾವನೆಗಳು, ಆಚರಣೆಯ ಭಕ್ತಿ ರಾಜಕೀಯವಾಗಿಸುತ್ತ ಹೋದಂತೆಲ್ಲ ಸರ್ವಾಧಿಕಾರಕ್ಕೆ ಅಣಿ ಮಾಡಿಕೊಟ್ಟಂತೆ, ಇದು ಸಮಾಜಕ್ಕೆ ಕಂಟಕವಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಕಾಲಘಟ್ಟಕ್ಕೆ ಅಂಬೇಡ್ಕರ್ ಅವರ ಸಂವಿಧಾನ, ಸಂವಿಧಾನದ ಆಶಯಗಳು ಪೂರಕವಾಗಿವೆ. ಇದು ಸಮಾಜಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇದರಿಂದ ಸಮಾಜದ ಏಳಿಗೆ ಸಾಧ್ಯ, ಎಲ್ಲ ಸಮುದಾಯಕ್ಕೆ ನ್ಯಾಯ ಒದಗಿಸಲು ಸಾಧ್ಯ” ಎಂದು ನುಡಿದರು.

“ಗಾಂಧಿಗೆ ಅಸ್ಪೃಶ್ಯತೆ ನಿವಾರಣೆ ಅನ್ನುವುದು ಕಾರ್ಯಕ್ರಮ ಎನಿಸಿರಲಿಲ್ಲ, ಅದು ಹೋರಾಟವಾಗಿತ್ತು. ಭಾರತದಲ್ಲಿನ ಅಸ್ಪೃಶ್ಯತೆಯನ್ನು ತೊಡೆದು ಹಾಕುವುದು ಮುಖ್ಯ ಗುರಿಯಾಗಿತ್ತು. ಗಾಂಧಿ ಹಾಗೂ ಅಂಬೇಡ್ಕರ್‌ ಅವರ ಚಿಂತನೆಗಳು ಭಿನ್ನವಾಗಿದ್ದರೂ ಕೂಡ ಈ ದೇಶದ ಶೋಷಿತರ ಪರವಾದ ನಿಲುವಿನ ದಿಕ್ಕಿನಲ್ಲಿಯೇ ದೇಶದ ಒಳಿತನವೇ ಸಾಗಿತ್ತು” ಎಂದು ಹೇಳಿದರು.

ಹಿರಿಯ ಸಾಹಿತಿ, ನಾಡಿನ ಸಾಕ್ಷಿಪ್ರಜ್ಞೆ ದೇವನೂರ ಮಹಾದೇವ ಮಾತನಾಡಿ, “ಮೊದಲಿಗೆ ಗಾಂಧಿ ಸನಾತನ ಧರ್ಮ ನನ್ನ ಧರ್ಮ ಎನ್ನುತ್ತಿದ್ದರು. ನಿಧಾನವಾಗಿ ಸಹನೆ ಮತ್ತು ಪ್ರೀತಿ ನನ್ನ ಧರ್ಮ ಎಂಬ ದೃಢ ನಿಲುವಿಗೆ ಬಂದರು. ನಮಗೆ ಇಷ್ಟವಿಲ್ಲದ್ದನ್ನೂ ಸಹಿಸುವುದು, ಎಲ್ಲರನ್ನೂ ಪ್ರೀತಿಸುವುದು ನಿಜವಾದ ಉದಾತ್ತ ಧರ್ಮವೇ ತಾನೆ? ಅಂಬೇಡ್ಕರ್- ಬುದ್ಧನ ಕಂಪ್ಯಾಷನ್ ಅಂದರೆ ಕಾರುಣ್ಯ ನನ್ನ ದೇವರು ಅಂದರು. ಇದೂ ಅಂತಿಮ ಉದಾತ್ತ ಚಿಂತನೆ. ಈ ನೆಲೆಯಲ್ಲಿ ಇಬ್ಬರ ನಿಲುವೂ ಒಂದೇ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಬಸ್‌ ಸೇವೆ ಕಲ್ಪಿಸಲು ಆಗ್ರಹ

“ಯುವ ಮನಸುಗಳು ಓದಬೇಕು, ಅಭ್ಯಸಿಸಬೇಕು, ಸರಿ ತಪ್ಪುಗಳನ್ನು ಅವಲೋಕಿಸಬೇಕು. ಭಿನ್ನಾಭಿಪ್ರಾಯಗಳ ಅರಿವನ್ನು ಅರಿಯದೆ ಕಿತ್ತಾಡುವುದು, ಅರಿಯದೆ ಅರಿವಿಲ್ಲದಂತೆ ಮಾತನಾಡುವುದು ಸರಿಯಲ್ಲ. ಮಹನೀಯರ ಬಗ್ಗೆ ಅರಿವು ಮೂಡಿಸಿಕೊಂಡು ಸಮಾಜದ ಸ್ವಾಸ್ತ್ಯ ಕಾಪಾಡುವಂತಹ ಕೆಲಸವಾಗಬೇಕು” ಎಂದು ಆಶಯದ ಮಾತುಗಳನ್ನಾಡಿದರು.

guha devanur vivek

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಎಸ್ ನರೇಂದ್ರ ಕುಮಾರ್‌, ಸಾಹಿತಿ ವಿವೇಕ್ ಶಾನಭಾಗ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...