ಮೈಸೂರು | ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿ, ಕೂಡಲೇ ಪರಿಹರಿಸಬೇಕು: ಲೋಕಾಯುಕ್ತ

Date:

ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕಾರಣವಿಲ್ಲದೆ ವಿಳಂಬ ಮಾಡುವುದಾಗಲಿ, ಕಚೇರಿಯಿಂದ ಕಚೇರಿಗೆ ಅಲೆಸುವುದಾಗಲಿ ಮಾಡದೆ ಪ್ರಾಮಾಣಿಕವಾಗಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಎಚ್ಚರಿಸಿದರು.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆ ಹಾಗೂ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಾರ್ವಜನಿಕರು ಏನಾದರೂ ನಮಗೆ ದೂರು ನೀಡಿದರೆ ನಿಮಗೆ ಖಂಡಿತ ತೊಂದರೆಯಾಗುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ “ಎಂದು ಸಾರ್ವಜನಿಕರ ಪರವಾಗಿ ಅಧಿಕಾರಿಗಳಿಗೆ ಚಾಟಿ ಬೀಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕರು ನೀಡಿದ ದೂರುಗಳನ್ನು ಸ್ವೀಕರಿಸಿ ಅವರ ಅಹವಾಲುಗಳನ್ನು ಕೇಳಿ ತಿಳಿದುಕೊಂಡು ಸ್ಥಳದಲ್ಲೇ ಇದ್ದ ಅಧಿಕಾರಿಗಳ ಮುಖಾಂತರ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು.

“ಜಮೀನುಗಳಿಗೆ ತೆರಳುವ ಸರ್ಕಾರಿ ಓಣಿ ಒತ್ತುವರಿ, ನಿವೇಶನಗಳ ಒತ್ತುವರಿ, ಆಶ್ರಯ ಮನೆಗಳಿಗೆ ಬಿಲ್ ಆಗದೇ ಇರುವುದು, ನಗರ ಸಭೆಯಲ್ಲಿ ಕಡತನಾಪತ್ತೆ ಹಾಗೂ ಖಾತೆ ಮಾಡಿಕೊಡುವುದರಲ್ಲಿ ಅಕ್ರಮ ಎಸಗಿರುವ ಬಗ್ಗೆ ಸೇರಿದಂತೆ ಹಲವು ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ವಿಚಾರಣೆ ನಡೆಸಿ ಅವುಗಳನ್ನು ಕೂಡಲೇ ಸರಿಪಡಿಸಬೇಕು” ಎಂದು ತಾಕೀತು ಮಾಡಿದರು.

ಇದೇ ಸಂದರ್ಭ ಇಲಾಖಾವಾರು ಸರ್ಕಾರದ ಜನಪ್ರಿಯ ಯೋಜನೆಗಳಲ್ಲೊಂದಾದ ಸಕಾಲದಲ್ಲಿ ವಿಲೇವಾರಿ ಆಗದಿರುವ ಅರ್ಜಿಗಳ ಬಗ್ಗೆ ಪ್ರಶ್ನಿಸಿ ಅವುಗಳನ್ನು ಕೂಡಲೇ ಇತ್ಯರ್ಥ ಪಡಿಸುವಂತೆಯೂ ಅಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಒಂದೇ ವರ್ಷದಲ್ಲಿ 800 ಅಸ್ವಾಭಾವಿಕ ಮರಣ ಪ್ರಕರಣಗಳು ದಾಖಲು; ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ

“ಸರ್ಕಾರಿ ಕಚೇರಿ ಹಾಗೂ ಅಧಿಕಾರಿಗಳಿಂದ ಯಾವುದೇ ತೊಂದರೆ ಹಾಗೂ ವಿಳಂಬವಾಗಲಿ ನಮಗೆ ದೂರು ನೀಡಿ” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸನೂರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕರುಗಳಾದ ಉಮೇಶ್, ಲೋಕೇಶ್, ರೂಪಶ್ರೀ, ರವಿಕುಮಾರ್ ಸಿಬ್ಬಂದಿಗಳಾದ ಗುರುಪ್ರಸಾದ್, ಮೋಹನ್ ಕುಮಾರ್, ಕಾಂತರಾಜು, ನೇತ್ರಾವತಿ ,ಶೇಖರ್, ಪರಶುರಾಮ್, ದಿನೇಶ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...