ಮೈಸೂರು | ವರುಣಾದಲ್ಲಿ ಒಳಚರಂಡಿ ಕಾಮಗಾರಿ; 11ನೇ ಶತಮಾನದ ಜೈನ ಶಿಲ್ಪ ಪತ್ತೆ

Date:

ವರುಣಾ ಪಟ್ಟಣದ ಅಂಬೇಡ್ಕರ್ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿಗಾಗಿ ಪೌರಕಾರ್ಮಿಕರು ಗುಂಡಿ ಅಗೆಯುತ್ತಿದ್ದ ವೇಳೆ ಜೈನ ಧರ್ಮಕ್ಕೆ ಸೇರಿದ ಮೂರು ಶಿಲ್ಪಗಳು ಪತ್ತೆಯಾಗಿವೆ.

ಹತ್ತಿರದಲ್ಲಿ ಯಾವುದೇ ಶಾಸನಗಳಿಲ್ಲ. ಆದ್ದರಿಂದ ಇದನ್ನು ಗುರುತಿಸುವ ಕಾರ್ಯವು ತಜ್ಞರಿಗೆ ಹೆಚ್ಚು ಸವಾಲಾಗಿದ್ದು, ಮೂರು ಪುರಾತತ್ವ ಕಲಾಕೃತಿಗಳ ಹೆಚ್ಚಿನ ತನಿಖೆಗಾಗಿ ನಗರದ ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಿಸಲಾಗಿರುವುದಾಗಿ ವರದಿಯಾಗಿದೆ.

“ಜೆಸಿಬಿ ಬಳಸಿ ಭೂಮಿಯನ್ನು ಅಗೆಯುವಾಗ, ಮೂರು ವಸ್ತುಗಳು ಸುಮಾರು ಮೂರು ಅಡಿ ಆಳದಲ್ಲಿ ಕಂಡುಬಂದಿವೆ. ಕೂಡಲೇ ಎಲ್ಲ ಉತ್ಖನನ ಕಾರ್ಯವನ್ನು ನಿಲ್ಲಿಸಲಾಯಿತು. ಬಳಿಕ ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಶಿಲ್ಪಗಳು ಕ್ರಿ.ಶ 11ನೇ ಶತಮಾನಕ್ಕೆ ಸೇರಿದ್ದಾಗಿದ್ದು, ಗಂಗ ಮತ್ತು ಹೊಯ್ಸಳ ರಾಜವಂಶಗಳ ಕಾಲದಲ್ಲಿ, ವರುಣ, ವರಕೋಡು ಮತ್ತು ವಾಜಮಂಗಲ ಮೈಸೂರಿನ ಪ್ರಮುಖ ಜೈನ ಕೇಂದ್ರಗಳಾಗಿದ್ದವು. ಈ ಮೂರು ವಿಗ್ರಹಗಳು ಆ ಅವಧಿಗೆ ಸೇರಿದವುಗಳಾಗಿವೆ” ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನವಲಿ ಜಲಾಶಯ ನಿರ್ಮಾಣಕ್ಕೆ ಆಂಧ್ರ, ತೆಲಂಗಾಣದೊಂದಿಗೆ ಚರ್ಚೆ: ಡಿಸಿಎಂ ಡಿ ಕೆ ಶಿವುಕುಮಾರ್

ಕರ್ನಾಟಕ ಪುರಾತತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕಿ ಮಂಜುಳಾ ಸಿ ಎನ್ ಅವರು ಸ್ಥಳಕ್ಕೆ ಭೇಟಿ ನೀಡಿ, ಶಿಲ್ಪಗಳ ಸಂರಕ್ಷಣೆಗಾಗಿ ವಸ್ತುಸಂಗ್ರಹಾಲಯಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೂರು ವಿಗ್ರಹಗಳಲ್ಲಿ ಒಂದು ಕೂಷ್ಮಾಂಡಿನಿ ದೇವಿಯದ್ದಾಗಿದ್ದರೆ, ಇತರ ಎರಡು ಜೈನ ತೀರ್ಥಂಕರರದ್ದಾಗಿವೆ. ಒಂದು ವಿಗ್ರಹದ ಕಾಲುಗಳು ಮತ್ತು ತೋಳುಗಳು ಮುರಿದಿರುವುದು ಕಂಡುಬಂದರೆ, ಒಂದು ವಿಗ್ರಹವು ಕೇವಲ ತಲೆಯನ್ನು ಒಳಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...