ಮೈಸೂರು | ʼನನ್ನ ಅರಿವಿನ ಪ್ರವಾದಿʼ ಪುಸ್ತಕ ಬಿಡುಗಡೆ

Date:

ಭರವಸೆಗಳೆಲ್ಲ ಹುಸಿಯಾಗಿ, ನಿರಾಶೆಯ ಮೊತ್ತವೇ ಆವರಿಸಿಕೊಂಡಿದೆ ಎನ್ನುವಂತಹ ಸಂದರ್ಭದಲ್ಲೂ ಮನುಷ್ಯನೊಳಗೊಂದು ಭರವಸೆಯ ಕಿಡಿ ಮಿನುಗುತ್ತದಲ್ಲ, ಅಂಥದೊಂದು ಆಸೆ ಭರವಸೆಯ ಮಿನುಗಿನ ಕೃತಿ ‘ನನ್ನ ಅರಿವಿನ ಪ್ರವಾದಿ’ ಎಂದು ಸಾಹಿತಿ ಹಾಗೂ ಚಿಂತಕ ಯೋಗೇಶ್ ಮಾಸ್ಟರ್ ಹೇಳಿದರು.

ಮೈಸೂರಿನ ಹೋಟೆಲ್ ಪ್ರೆಸಿಡೆಂಟ್‌ನಲ್ಲಿ ಸಮಾನತೆಯ ಸಮಾಜದ ಶಿಲ್ಪಿ, ಪ್ರವಾದಿ ಮಹಮ್ಮದ್ (ಸ) ರಾಜ್ಯವ್ಯಾಪಿ ಸೀರತ್ ಅಭಿಯಾನದ ಅಂಗವಾಗಿ ಶನಿವಾರ ಜಮಾಅತೆ ಇಸ್ಲಾಮಿ ಹಿಂದ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನನ್ನ ಅರಿವಿನ ಪ್ರವಾದಿ ಕೃತಿಯ ಉದ್ದೇಶವೂ, ಪ್ರವಾದಿ ಮುಹಮ್ಮದರೆಂಬ ಅಪೂರ್ವ ಹಣತೆಯ ಬೆಳಕಿನಲ್ಲಿ, ನಮ್ಮನ್ನು ನಮಗೇ ಕಾಣಿಸುವ ಹಂಬಲವಾಗಿದೆ. ಅಂತರಂಗ ಹಾಗೂ ಬಹಿರಂಗ ಶುದ್ಧಿಯುಳ್ಳ ಮಹಾತ್ಮರ ರೂಪದಲ್ಲಿ ಪ್ರವಾದಿ ಮುಹಮ್ಮದರನ್ನು ಲೇಖಕನೊಬ್ಬನ ಸಾಮಾಜಿಕ ಹೊಣೆಗಾರಿಕೆಯ ರೂಪದಲ್ಲಿ ನೋಡಬಹುದಾದ ಈ ಕೃತಿಯಲ್ಲಿ ಮುಖ್ಯವಾಗಿ ಎರಡು ಉದ್ದೇಶಗಳಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಸ್ಲಾಂ ಬಗ್ಗೆ ಇಲ್ಲಸಲ್ಲದ ವಿಷಯಗಳನ್ನು ಪ್ರಚಾರ ಮಾಡಿ, ‘ಇಸ್ಲಾಮೋಫೋಬಿಯಾ’ವನ್ನು ಉಂಟು ಮಾಡುವ ಒಂದು ವರ್ಗದ ಪ್ರಯತ್ನಗಳಿಗೆ ಪ್ರತಿಕ್ರಿಯೆಯ ರೂಪದಲ್ಲಿ, ಮುಸಲ್ಮಾನ ಧರ್ಮದ ಅಂತರ್ಜಲದಂತಿರುವ ಜೀವನ ಮೌಲ್ಯಗಳನ್ನು ಜನರ ಗಮನಕ್ಕೆ ತರುವುದು ಈ ಕೃತಿ ರಚನೆಯ ಮೊದಲ ಉದ್ದೇಶವಾಗಿದೆ. ಎರಡನೆಯದು, ಧಾರ್ಮಿಕ ಸಂಗತಿಗಳ ಬಗ್ಗೆ ಆಸಕ್ತಿ ಇಲ್ಲದೆ ಹೋದರೂ, ಜೀವನವನ್ನು ಹಸನುಪಡಿಸಲು ಬೇಕಾದ ಆದರ್ಶಗಳನ್ನು ಸಹೃದಯನೊಬ್ಬ ಎಲ್ಲ ಧರ್ಮಗಳಿಂದಲೂ ಸ್ವೀಕರಿಸುವುದು ಸಾಧ್ಯವಿದೆ ಎನ್ನುವುದು, ಈ ಎರಡೂ ಕಾರಣಗಳಿಂದಾಗಿ ಈ ಕೃತಿ ಮುಖ್ಯವಾಗಿದೆ” ಎಂದು ತಿಳಿಸಿದರು.

“ಹಿಂದೂ, ಕ್ರೈಸ್ತ, ಬೌದ್ಧ, ಜೈನ ಧರ್ಮಗಳು ಸೇರಿದಂತೆ ಹಲವು ಧರ್ಮಗಳಲ್ಲಿನ ಸದಾಶಯಗಳು ಇಸ್ಲಾಂ ಧರ್ಮದಲ್ಲೂ, ಪ್ರವಾದಿಯ ಬೋಧನೆಯಲ್ಲೂ ಇರುವುದನ್ನು ಈ ಕೃತಿಯ ಮೂಲಕ ತರಲಾಗಿದೆ. ಇತರ ಧರ್ಮಗಳಂತೆಯೇ ಇಸ್ಲಾಂ ಧರ್ಮ ಕೂಡ ಸದಾಶಯಗಳ ಮಟ್ಟಿಗೆ ಭಿನ್ನವಲ್ಲ ಎನ್ನುವುದನ್ನು ಓದುಗರಿಗೆ ವಿವರಿಸಿದ್ದು, ಮುಸ್ಲಿಂ ಧರ್ಮದ ಕುರಿತ ಅಪವ್ಯಾಖ್ಯಾನಗಳನ್ನು ಹೋಗಲಾಡಿಸುವ ಪ್ರಯತ್ನ ಇದಾಗಿದೆ. ಇಸ್ಲಾಂ ಧರ್ಮದ ಅನುಸರಣೆ ಮಾಡದೆಯೂ, ಮುಹಮ್ಮದರನ್ನು ಅರಿಯುವುದರಿಂದ ನಮ್ಮ ಬದುಕಿನ ಸತ್ವ ಹಾಗೂ ಮೌಲ್ಯ ಹೆಚ್ಚುತ್ತದೆ” ಎಂದು ಪುನರುಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗುತ್ತಿಗೆ ಪೌರಕಾರ್ಮಿಕರ ಕಾಯಮಾತಿಗೆ ಆಗ್ರಹ; ಡಿ.1ರಂದು ರಾಜ್ಯಾದ್ಯಂತ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಎನ್ ಆರ್ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ಆದಿ ಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ,‌ ಜಮಾಅತೆ ಇಸ್ಲಾಮ್ ಮುಖಂಡ ಮೊಹಮ್ಮದ್ ಕುಂಞಿ, ಮರ್ಚೆಂಟ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಡ್ಡಿಗೆರೆ ಗೋಪಾಲ್, ಅಸದುಲಾ ಸೇರಿದಂತೆ ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...