ಮೈಸೂರು | ಮಹಿಳೆಯನ್ನು ಬಲಿ ಪಡೆದಿದ್ದ ಹುಲಿ ಸೆರೆ; ಕಾರ್ಯಾಚರಣೆ ಯಶಸ್ವಿ

Date:

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಅರಣ್ಯ ವಲಯದ ಬಳ್ಳೂರುಹುಂಡಿಯಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ 10 ವರ್ಷದ ಗಂಡು ಹುಲಿ ಮಂಗಳವಾರ ಬೆಳಿಗ್ಗೆ ಸೆರೆಯಾಗಿದೆ.

ಬಳ್ಳೂರುಹುಂಡಿ ಗ್ರಾಮದ ಕಲ್ಲಹಾರಖಂಡಿ ಎಂಬ ಸ್ಥಳದಲ್ಲಿ ಹಸುವಿನ ಕಳೇಬರ ತಿನ್ನಲು ಬಂದಾಗ ಅರಿವಳಿಕೆ ತಜ್ಞ ಡಾ.ವಾಸೀಂ ಅವರು ನೀಡಿದ ಅರಿವಳಿಕೆಗೆ ಹುಲಿ ಬಿದ್ದಿದೆ. ಬಲೆ ಹಾಕಿ ಹಿಡಿದು, ಮೈಸೂರಿನ ಪುನರ್ ವಸತಿ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಹಸುವನ್ನು ಕೊಂದಿದ್ದ ಜಾಗದಲ್ಲಿ ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿತ್ತು. ಕೊಂದಿದ್ದ ಹಸುವನ್ನು ತಿನ್ನಲು ಹುಲಿ ಬರುವ ನಿರೀಕ್ಷೆಯಲ್ಲಿ ಬೋನು ಇರಿಸಿದ್ದರು. ಅದರಲ್ಲಿ ಡಾ. ವಾಸೀಂ ಹಾಗೂ ಅರಣ್ಯ ಸಿಬ್ಬಂದಿ ಬೋನಿನ ಒಳಗೆ ಕಾಯ್ದು ಕುಳಿತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸತ್ತ ಜಾನುವಾರು ತಿನ್ನಲು ಬಂದಾಗ ಅರೆವಳಿಕೆ ನೀಡಿ ಸೆರೆ ಹಿಡಿಯಲಾಗಿದೆ” ಎಂದು ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ತಿಳಿಸಿದ್ದಾರೆ.

ಹುಲಿಯ ಸೆರೆಗೆ ಅರಣ್ಯ ಇಲಾಖೆಯು ಮೂರು ದಿನಗಳಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಸಾಕಾನೆಗಳಾದ ಪಾರ್ಥಸಾರಥಿ, ರೋಹಿತ, ಹಿರಣ್ಯ ಜೊತೆಗೆ ಅರಣ್ಯ ಇಲಾಖೆಯ 12 ಅಧಿಕಾರಿಗಳು ಹಾಗೂ 195 ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ನಾಗಣಾಪುರ, ಡೋರನಕಟ್ಟೆ, ವೆಂಕಟಗಿರಿ ಹಾಗೂ ವಡೆಯನಪುರ ಕಾಲನಿಗಳ ತಲಾ 25 ಮಂದಿ ಗಿರಿಜನರೂ ನರಹಂತಕ ಹುಲಿಯ ಸೆರೆಗೆ ಶ್ರಮಿಸಿದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅಕ್ರಮವಾಗಿ ನಿವೇಶನ ಮಾರಾಟ; ಖಾಲಿ ಜಾಗದಲ್ಲಿ ಗುಡಿಸಲು ಹಾಕಿ ಸ್ಥಳೀಯರ ಧರಣಿ

ವಿಶೇಷ ಹುಲಿ ಸಂರಕ್ಷಣಾ ದಳ, ಚಿರತೆ ಕಾರ್ಯಪಡೆ ಹಾಗೂ ಆನೆ ಕಾರ್ಯಪಡೆಗಳ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿದ್ದರು. 50 ಸಿ–1 ಕ್ಯಾಮೆರಾ ಹಾಗೂ 5 ಜಿಎಸ್‌ಎಂ ಕ್ಯಾಮೆರಾಗಳು, ಅಗತ್ಯ ಔಷಧಿ, 10 ವಾಹನಗಳನ್ನು ಬಳಸಲಾಗಿತ್ತು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ. ಪರಮೇಶ್‌, ಕೆ ಆರ್ ನಾರಾಯಣ, ಡಿ ಶ್ರೀನಿವಾಸ, ಅಮೃತ ಮಾಯಪ್ಪನವರ ಹಾಗೂ ಪಶು ವೈದ್ಯಾಧಿಕಾರಿ ವಾಸೀಂ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...