ಮೈಸೂರು | ಸಂಚಾರ ನಿಯಮ ಉಲ್ಲಂಘನೆ; ಕ್ರಮಕ್ಕೆ ಮುಂದಾದ ಪೊಲೀಸರು

Date:

ಸಾರ್ವಜನಿಕ ರಸ್ತೆಯಲ್ಲಿ ಸ್ಟಂಟ್‌ ಮಾಡುವ ಮೂಲಕ ಅಪಾಯಕಾರಿ ಚಾಲನೆ ಮಾಡುತ್ತಿದ್ದ ಆಟೋ ಚಾಲಕನ ವಿರುದ್ಧ ಪ್ರಲರಣ ದಾಖಲಿಸಿದ್ದ ಮೈಸೂರು ನಗರದ ವಿವಿ ಪುರಂ ಪೊಲೀಸರು ಆಟೋ ಚಾಲಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ನಗರ ಪೊಲೀಸರು ಬಲವಾದ ಸಂದೇಶ ಕಳುಹಿಸಿದ್ದು, “ಸಂಚಾರ ನಿಯಮಗಳನ್ನು ನಿರ್ಲಕ್ಷಿಸುವ ಮತ್ತು ರಸ್ತೆ ಸಂಚರಿಸುವ ಇತರ ವಾಹನ ಸವಾರರಿಗೆ ಕುತ್ತು ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

“ಈ ಹಿಂದೆ, ಸ್ಕೂಟರ್‌ಗಳಲ್ಲಿ ಸ್ಟಂಟ್ ಮಾಡಿ ನಂತರ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ ದ್ವಿಚಕ್ರ ವಾಹನ ಸವಾರರು, ವಿಶೇಷವಾಗಿ ಹದಿಹರೆಯದವರು ಮತ್ತು ಯುವಕರ ಮೇಲೆ ಕ್ರಮ ಕೈಗೊಳ್ಳಲಾಗಿತ್ತು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪುತ್ರನ ವಿರುದ್ಧವೂ ಈ ಅಪರಾಧಕ್ಕಾಗಿ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರನ್ನು ಸಂಚಾರ ಪೊಲೀಸರು ಬಿಡುವುದಿಲ್ಲ. ಆದರೂ ಇತ್ತೀಚೆಗೆ, ದ್ವಿಚಕ್ರ ವಾಹನ ಸವಾರರು ಸಂಖ್ಯೆಯನ್ನು ಮರೆಮಾಚಲು ಮಡಚಬಹುದಾದ ರೀತಿಯಲ್ಲಿ ನೋಂದಣಿ ಸಂಖ್ಯೆ ಫಲಕಗಳನ್ನು ಬದಲಾಯಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ. ಕಣ್ಗಾವಲು ಕ್ಯಾಮೆರಾಗಳ ಮೂಲಕ ಪೊಲೀಸರು ವಾಹನ ಸಂಖ್ಯೆಯನ್ನು ವೀಕ್ಷಿಸುವುದನ್ನು ಮತ್ತು ಪ್ರಕರಣ ದಾಖಲಿಸುವುದರಿಂದ ತಪ್ಪಿಸಿಕೊಳ್ಳಲು ನೋಂದಣಿ ಫಲಕ ಮುಚ್ಚಲು ಕೆಲವು ವಸ್ತುಗಳನ್ನು ಬಳಸುತ್ತಿದ್ದಾರೆ” ಎಂದು ಉಪ ಪೊಲೀಸ್ ಆಯುಕ್ತ (ಸಂಚಾರ ಮತ್ತು ಅಪರಾಧ) ಎಸ್ ಜಾಹ್ನವಿ ತಿಳಿಸಿದ್ದಾರೆ.

“ಆಟೋ ಚಾಲಕರು ಸಮವಸ್ತ್ರ ಧರಿಸದೆ ತಮ್ಮ ವಾಹನಗಳನ್ನು ಓಡಿಸುತ್ತಿದ್ದಾರೆ. ಕೆಲವರು ತಮ್ಮ ವೈಯಕ್ತಿಕ ವಿವರಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ನಗರ ಪೊಲೀಸರು ನೀಡುವ ವಿಶಿಷ್ಟ ಗುರುತಿನ ಸಂಖ್ಯೆಗಳನ್ನು ತೆಗೆದುಹಾಕಿದ್ದಾರೆ. ಅಂತಹ ವಾಹನ ಸವಾರರನ್ನು ನಿಗ್ರಹಿಸಲು ಮತ್ತು ಅವರನ್ನು ಸಾಲಿನಲ್ಲಿ ತರಲು ನಗರ ಪೊಲೀಸರು ವಿಶೇಷ ಅಭಿಯಾನ ಪ್ರಾರಂಭಿಸುತ್ತಾರೆ” ಎಂದು ತಿಳಿಸಿದರು.

“ವಾಹನ ಸವಾರರನ್ನು ಶಿಸ್ತುಬದ್ಧಗೊಳಿಸಲು ನಾವು ವಿವಿಧ ಹಂತಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸುತ್ತೇವೆ. ತ್ರಿವಳಿ ಸವಾರಿ, ಹೆಲ್ಮೆಟ್ ಇಲ್ಲದೆ ಸವಾರಿ, ಏಕಮುಖ ಸಂಚಾರ ನಿಯಮ ಉಲ್ಲಂಘನೆ ಮತ್ತು ವಾಹನಗಳನ್ನು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆಯಂತಹ ಉಲ್ಲಂಘನೆಗಳನ್ನು ಪರಿಶೀಲಿಸಲಾಗುವುದು” ಎಂದು ಡಿಸಿಪಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಾಂಗ್ರೆಸ್‌ ನಾಯಕಿ ವೀಣಾ ಕಾಶಪ್ಪನವರ ಕಾರು ಅಪಘಾತ

“ಅಪರಾಧಗಳನ್ನು ತಡೆಗಟ್ಟಲು ವಾಹನ ಸವಾರರು ಮತ್ತು ನಿವಾಸಿಗಳಿಗೆ ಅರಿವು ಮೂಡಿಸಲು ನಗರ ಪೊಲೀಸರು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಈ ನಡುವೆ ದ್ವಿಚಕ್ರ ಮತ್ತು ನಾಲ್ಕು ಚಕ್ರದ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುವುದನ್ನು ತಡೆಯಲು ನಿಯಮಿತವಾಗಿ ವಾಹನ ತಪಾಸಣೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...