ಮೈಸೂರು | ಮನೆ ಬದಲಿಸಿದಾಗ ‘ಗೃಹಜ್ಯೋತಿ’ ವಿವರ ನವೀಕರಿಸಲು ಸಾಧ್ಯವಾಗುತ್ತಿಲ್ಲ; ಬಾಡಿಗೆದಾರರ ಅಳಲು

Date:

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಅಡಿ ವೈಯಕ್ತಿಕ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ಒದಗಿಸುತ್ತಿದೆ. ಈ ಯೋಜನೆ ಪ್ರಾರಂಭವಾಗಿ ಸುಮಾರು ಆರು ತಿಂಗಳು ಕಳೆದರೂ, ಬಾಡಿಗೆದಾರರು ಮನೆಗಳನ್ನು ಸ್ಥಳಾಂತರಿಸುವಾಗ ಸಂಪರ್ಕ ವಿವರಗಳನ್ನು ನವೀಕರಿಸಲು ಕಷ್ಟಪಡುತ್ತಿದ್ದಾರೆ.

“ಆಧಾರ್ ಕಾನೂನುಬದ್ಧ ದಾಖಲೆಯಾಗಿರುವುದರಿಂದ, ಬಾಡಿಗೆದಾರರು ಪದೇ ಪದೆ ಅರ್ಜಿಯ ವಿವರಗಳನ್ನು ನವೀಕರಿಸಲು ಸಾಧ್ಯವಾಗುವುದಿಲ್ಲ. ಇದರಿಂದ ಗೃಹಜ್ಯೋತಿ ಯೋಜನೆ ಪ್ರಯೋಜನ ಕಳೆದುಕೊಳ್ಳಲು ಕಾರಣವಾಗಬಹುದು” ಎಂದು ಮೈಸೂರಿನ ಸೆಸ್ಕಾಂ ಅಧಿಕಾರಿಗಳು ಎಚ್ಚರಿಸಿದ್ದಾರೆ.

“ತಮ್ಮ ಖಾತೆ ಮತ್ತು ಸಂಪರ್ಕ ವಿವರಗಳನ್ನು ಆನ್‌ಲೈನ್‌ನಲ್ಲಿ ಮಾರ್ಪಡಿಸಲು ಸಾಧ್ಯವಾಗುತ್ತಿಲ್ಲ. ನಾನು ನವೆಂಬರ್ 2023ರಲ್ಲಿ ಮತ್ತೊಂದು ಮನೆಗೆ ಸ್ಥಳಾಂತರಗೊಂಡೆ. ಹೊಸದಾಗಿ ಬಾಡಿಗೆಗೆ ಪಡೆದ ಮನೆಯಲ್ಲಿ, ನನ್ನ ಸಂಖ್ಯೆಯನ್ನು ಹಿಂದಿನ ಮನೆಯ ಖಾತೆ ಸಂಖ್ಯೆಗೆ ಲಿಂಕ್ ಮಾಡಿದ್ದರಿಂದ ಪ್ರಯೋಜನ ಪಡೆಯಲು ನಾನು ನನ್ನ ಹೆಂಡತಿಯ ಆಧಾರ್ ಸಂಖ್ಯೆಯನ್ನು ಬಳಸಿದೆ. ಹಿಂದಿನ ಮನೆಯಲ್ಲಿ, ಹೊಸ ಬಾಡಿಗೆದಾರನು ನನ್ನ ಆಧಾರ್ ದಾಖಲೆಯ ಆಧಾರದ ಮೇಲೆ ಉಚಿತ ವಿದ್ಯುತ್ ಪಡೆಯುತ್ತಿದ್ದಾನೆ” ಎಂದು ಇತ್ತೀಚೆಗೆ ತಮ್ಮ ಮನೆಯನ್ನು ಸ್ಥಳಾಂತರಿಸಿದ ಬಾಡಿಗೆದಾರ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಯೋಜನೆಯನ್ನು ಪ್ರಾರಂಭಿಸಿದ ನಂತರ ನೂರಾರು ಕುಟುಂಬಗಳು ತಮ್ಮ ಮನೆಗಳನ್ನು ಬದಲಾಯಿಸಿವೆ. ಆದರೆ ಕೆಲವರು ಮಾತ್ರ ವಿವರಗಳನ್ನು ನವೀಕರಿಸಲು ಕಚೇರಿಗಳನ್ನು ಸಂಪರ್ಕಿಸುತ್ತಿದ್ದಾರೆ. ನಮ್ಮ ಹೆಚ್ಚಿನ ಸಿಬ್ಬಂದಿಗೆ ಕಾರ್ಯವಿಧಾನದ ಬಗ್ಗೆ ತಿಳಿದಿಲ್ಲ” ಎಂದು ಅಧಿಕಾರಿಯೊಬ್ಬರು ವಿವರಿಸಿದರು.

“ಹೊಸ ಬಾಡಿಗೆದಾರರಿಗೆ ಉಂಟಾಗುತ್ತಿರುವ ಗೃಹಜ್ಯೋತಿ ಯೊಜನೆಯ ದೋಷವನ್ನು ಕೂಡಲೇ ಸರಿಪಡಿಸಬೇಕು. ತಾಂತ್ರಿಕ ದೋಷದಿಂದಾಗಿ ಯಾವುದೇ ಗ್ರಾಹಕರಿಗೆ ಗೃಹ ಜ್ಯೋತಿಯ ಪ್ರಯೋಜನಗಳನ್ನು ನಿರಾಕರಿಸಿದರೆ, ಸಮಸ್ಯೆ ಬಗೆಹರಿಯುವವರೆಗೆ ಸರ್ಕಾರವು ವಿದ್ಯುತ್‌ ಬಿಲ್ ಮೊತ್ತವನ್ನು ಮರುಪಾವತಿಸಬೇಕು. ಜತೆಗೆ ಆಡಳಿತವು ಆದಷ್ಟು ಬೇಗ ಪರಿಹಾರ ಕಂಡುಹಿಡಿಯಬೇಕು” ಎಂದು ಇಂಧನ ತಜ್ಞ ಅನಿಲ್ ಕುಮಾರ್ ನಾಡಿಗೇರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಡಗೌಡರ ಕುಟುಂಬದ ಹೆಚ್ಚುವರಿ ಭೂಮಿ ಪಡೆಯುವ ಪ್ರಕರಣ; 100 ದಿನ ಪೂರೈಸಿದ ಧರಣಿ

“ಸಾರ್ವಜನಿಕರು ಹತ್ತಿರದ ಸೆಸ್ಕ್ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಹೊಸ ಸಂಪರ್ಕ ವಿವರಗಳನ್ನು ನವೀಕರಿಸಬಹುದು. ಈ ಉದ್ದೇಶಕ್ಕಾಗಿ ಆನ್‌ಲೈನ್ ಆಯ್ಕೆಯನ್ನೂ ಕೂಡ ಒದಗಿಸಲಾಗಿದೆ” ಎಂದು ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಸಿ ಎನ್ ಶ್ರೀಧರ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...