ಮೈಸೂರು | ಮಹಾನಗರ ಪಾಲಿಕೆಯಿಂದ 310 ಕೋಟಿ ರೂ. ತೆರಿಗೆ ಸಂಗ್ರಹ

Date:

  • ತೆರಿಗೆ ಪಾವತಿಸಲು ದೀರ್ಘ ಸರತಿ ಸಾಲಿನಲ್ಲಿ ನಿಂತಿರುವ ನಿವಾಸಿಗಳು
  • ತೆರಿಗೆ ಸಂಗ್ರಹಕ್ಕೆ ನಿವಾಸಗಳು, ವಾಣಿಜ್ಯ ಸಂಸ್ಥೆಗಳಿಗೆ ಅಧಿಕಾರಿಗಳ ಭೇಟಿ

ಮೈಸೂರು ಮಹಾನಗರ ಪಾಲಿಕೆ ಯೋಜಿತ ಅಂಕಿಅಂಶಗಳಿಗಿಂತ ಹೆಚ್ಚಿನ ತೆರಿಗೆ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದೆ. 2022-23ನೇ ಸಾಲಿನಲ್ಲಿ 260 ಕೋಟಿ ರೂ.ಗಳ ಯೋಜಿತ ಯೋಜನೆಗೆ ಬದಲಾಗಿ ಮಹಾನಗರ ಪಾಲಿಕೆ 310 ಕೋಟಿ ರೂ.ಗಳನ್ನು ಸಂಗ್ರಹಿಸಿದೆ.

ಮೈಸೂರಿನ ನಾಗರಿಕರು ತಮ್ಮ ಆಸ್ತಿ ತೆರಿಗೆ ಪಾವತಿಸಲು ದೀರ್ಘ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇದಕ್ಕೆ ಎಂಸಿಸಿ ಘೋಷಿಸಿದ ಶೇ.5ರಷ್ಟು ರಿಯಾಯಿತಿ ಒಂದು ಕಾರಣವಾಗಿದೆ. ಜನರು ಆನ್‌ಲೈನ್ ಮೂಲಕ ತಮ್ಮ ತೆರಿಗೆಗಳನ್ನು ಪಾವತಿಸುತ್ತಿದ್ದಾರೆ. ಇದು ತೆರಿಗೆ ಸಂಗ್ರಹಕ್ಕೆ ದೊಡ್ಡ ಉತ್ತೇಜನವಾಗಿದೆ. ನಗರದಲ್ಲಿ ಸುಮಾರು 30-34 ಪ್ರತಿಶತದಷ್ಟು ತೆರಿಗೆ ಆನ್‌ಲೈನ್ ಪಾವತಿಗಳಿಂದ ಸಂಗ್ರಹವಾಗಿದೆ.

“ಕಂದಾಯ ಅಧಿಕಾರಿಗಳ ಪ್ರಯತ್ನದಿಂದಾಗಿ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ” ಎಂದು ಎಂಸಿಸಿ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರಿಗಳು ತೆರಿಗೆ ಸಂಗ್ರಹಿಸಲು ನಿವಾಸಗಳು ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸುವ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸಿದ್ದರು. ತೆರಿಗೆ ಪಾವತಿಸಲು ಮೈಸೂರಿನ ಜನರೂ ಕೂಡ ಅಧಿಕಾರಿಗಳೊಂದಿಗೆ ಸಹಕರಿಸಿದ್ದಾರೆ. ಇದರಿಂದಾಗಿ ನಾವು ನಿರೀಕ್ಷೆಗಿಂತ ಹೆಚ್ಚಿನ ತೆರಿಗೆ ಸಂಗ್ರಹಿಸಲು ಸಾಧ್ಯವಾಗಿದೆ” ಎಂದು ಹೇಳಿದರು.

ಜಾಹೀರಾತಿನಿಂದ 64 ಕೋಟಿ ರೂ. ಸಂಗ್ರಹ

“ಒಟ್ಟು 310 ಕೋಟಿ ರೂ.ಗಳ ತೆರಿಗೆಯಲ್ಲಿ 169 ಕೋಟಿ ರೂ.ಗಳು ಆಸ್ತಿ ತೆರಿಗೆಯಿಂದ, 64.71 ಕೋಟಿ ರೂ. ಜಾಹೀರಾತು ಮೂಲಕ, 93.09 ಕೋಟಿ ರೂ. ನೀರಿನ ತೆರಿಗೆ ಮೂಲಕ, 14.41 ಕೋಟಿ ರೂ. ನಗರ ಮತ್ತು ಪಟ್ಟಣ ಯೋಜನಾ ಯೋಜನೆಯಿಂದ, 3.52 ಕೋಟಿ ರೂ. ವಾಣಿಜ್ಯ ಕಟ್ಟಡಗಳ ಬಾಡಿಗೆಯಿಂದ, 7.50 ಕೋಟಿ ರೂ. ವ್ಯಾಪಾರ ಪರವಾನಗಿಗಳಿಂದ ಮತ್ತು 32.07 ಕೋಟಿ ರೂ.ಗಳನ್ನು ಇತರ ತೆರಿಗೆಗಳಿಂದ ಸಂಗ್ರಹಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ-ಬೆಂಗಳೂರು ಮಾರ್ಗದಲ್ಲಿ ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ಸಂಚರಿಸುವ ನಿರೀಕ್ಷೆ

ತೆರಿಗೆ ಸಂಗ್ರಹಿಸುವಲ್ಲಿ ಅಧಿಕಾರಿಗಳ ಪ್ರಯತ್ನಗಳು ಫಲ ನೀಡಿವೆ. ಕಂದಾಯ ನಿರೀಕ್ಷಕರೊಂದಿಗೆ (ಆರ್‌ಐ) ಹಲವಾರು ಸಭೆಗಳನ್ನು ನಡೆಸಿ ಅದರ ಪ್ರಗತಿಯನ್ನು ಪರಿಶೀಲಿಸಿದ್ದೇನೆ. ಸಮಯಕ್ಕೆ ಸರಿಯಾಗಿ ತೆರಿಗೆ ಸಂಗ್ರಹಿಸುವಂತೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ” ಎಂದು ಮೇಯರ್ ಶಿವಕುಮಾರ್ ತಿಳಿಸಿದರು.

“ವಲಯ ಕಚೇರಿಗಳಲ್ಲಿ ನೂಕುನುಗ್ಗಲಂತಹ ಸ್ಥಿತಿ ತಪ್ಪಿಸಲು ತೆರಿಗೆ ಸಂಗ್ರಹಕ್ಕಾಗಿ ಹೊಸ ಕೌಂಟರ್‌ಗಳನ್ನು ತೆರೆಯುವ ಬಗ್ಗೆ ಎಂಸಿಸಿ ಯೋಚಿಸುತ್ತಿದೆ” ಎಂದು ಶಿವಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...