ಮೈಸೂರು | ಅಧಿಕಾರಿಗಳ ಯಡವಟ್ಟು; ಬದುಕಿರುವ ವೃದ್ಧೆಗೆ ಮರಣ ಪ್ರಮಾಣ ಪತ್ರ

Date:

  • ಆಸ್ತಿ ಕಬಳಿಸಲು ವಿದೇಶದಲ್ಲಿರುವ ವ್ಯಕ್ತಿಗೂ ಡೆತ್ ಸರ್ಟಿಫಿಕೇಟ್
  • ಕಂದಾಯ ಇಲಾಖೆ ಅಧಿಕಾರಿಗಳಿಂದ ಯಡವಟ್ಟು ಆರೋಪ

ಜೀವಂತ ಇರುವಾಗಲೇ ಅಜ್ಜಿ ಮತ್ತು ಮತ್ತೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮರಣ ಪತ್ರ ನೀಡಿರುವ ಪ್ರಕರಣ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.

ನಂಜನಗೂಡು ತಾಲೂಕಿನ ಗೀಕಹಳ್ಳಿ ಗ್ರಾಮದ ಬಸಮ್ಮ ಎಂಬ ಅಜ್ಜಿಗೆ ಜೀವಂತವಿದ್ದರೂ ಮರಣ ದೃಢೀಕರಣ ಪತ್ರವನ್ನು ಸೃಷ್ಟಿ ಮಾಡಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಬಸಮ್ಮ 1981ರ ಮಾರ್ಚ್‌ 15ರಲ್ಲೇ ಮರಣ ಹೊಂದಿದ್ದಾರೆ ಎಂದು ಮರಣ ಪ್ರಮಾಣ ಪತ್ರವನ್ನು ಕಂದಾಯ ಇಲಾಖೆಯಿಂದ ನೀಡಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಚಂದ್ರಶೇಖರ್ ಎಂಬ ವ್ಯಕ್ತಿಯ ಪಿತ್ರಾರ್ಜಿತ ಆಸ್ತಿಯನ್ನು ಕಬಳಿಕೆ ಮಾಡಲು ವಿದೇಶದಲ್ಲಿರುವ ಚಂದ್ರಶೇಖರ್ ಅವರು ಬದುಕಿದ್ದರೂ ಡೆತ್ ಸರ್ಟಿಫಿಕೇಟ್ ಮಾಡಿ ಪೌತಿ ಖಾತೆ ಸೃಷ್ಟಿ ಮಾಡಿದ್ದಾರೆ ಎಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಳ್ಳೂರು ಗ್ರಾಮದ ಸರ್ವೇ ನಂ. 442 ರಲ್ಲಿ 01.26 ಹಾಗೂ 444 ರಲ್ಲಿ 01.30 ಗುಂಟೆ ಜಮೀನನ್ನು ಕೃಷ್ಣೇಗೌಡ, ಶಿವಮಲ್ಲೇಗೌಡ ಎಂಬುವರಿಗೆ ಅಕ್ರಮವಾಗಿ ಪೌತಿ ಖಾತೆ ಬದಲಾವಣೆ ಮಾಡಿಕೊಡಲಾಗಿದೆ. 2022ನೇ ಸಾಲಿನಲ್ಲಿ ಖಾತೆ ಬದಲಾಯಿಸಿರುವ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್, ಕಸಭಾ ಹೋಬಳಿ ರಾಜಸ್ವ ನಿರೀಕ್ಷಕ ಪ್ರಕಾಶ್, ತಹಶೀಲ್ದಾರ್‌ ಶಿವಮೂರ್ತಿ ಹಾಗೂ ಶಿರಸ್ತೇದಾರ್ ಶ್ರೀನಾಥ್ ವಿರುದ್ಧ ಆರೋಪ ಕೇಳಿಬಂದಿದೆ.

ಇನ್ನೂ ಬಸಮ್ಮನ ಹೆಸರಲ್ಲಿ ಸರ್ವೇ ನಂ. 140/2 ರಲ್ಲಿ 01 ಎಕರೆ ಜಮೀನು ಪೌತಿ ಖಾತೆ ಮಾಡಲಾಗಿದ್ದು, 2022ರ ಜು.19 ರಂದು ಎರಡು ಪ್ರಕರಣಗಳಲ್ಲಿ ನಕಲಿ ವಂಶ ವೃಕ್ಷ ದೃಢೀಕರಣ ಪತ್ರ ಸೃಷ್ಟಿಸಿ, ಮತ್ತೊಬ್ಬರಿಂದ ನಾವೇ ಬಸಮ್ಮನ ಹೆಣ್ಣು ಮಕ್ಕಳು ಎಂದು ಪೌತಿ ಖಾತೆಗೆ ಅರ್ಜಿಯನ್ನು ಹಾಕಿಸಿದ್ದಾರೆ.‌ ಆದರೆ, ಶಿವಮ್ಮ, ರತ್ನಮ್ಮ ಎಂಬುವರು ಬಸಮ್ಮನ ಹೆಣ್ಣು ಮಕ್ಕಳೇ ಅಲ್ಲ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ಎಸ್‌ಎಫ್‌ಐ ಆಗ್ರಹ

ಶಿವಮ್ಮ, ಮತ್ತು ರತ್ನಮ್ಮ ಎಂಬ ಮಹಿಳೆಯರು ಬೇರೆ ಜನಾಂಗದವರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ. ಗ್ರಾಮಸ್ಥರನ್ನು ಕೇಳಿಲ್ಲ ಜಮೀನಿನ ಸ್ಥಳ ಪರಿಶೀಲನೆ ಮಾಡಿಲ್ಲ. ಹಣದಾಸೆಗೆ ದಾಖಲೆಗಳನ್ನು ಸೃಷ್ಟಿಸಿ, ಪರಿಶೀಲಿಸದೆ ಅಂದಿನ ತಹಶೀಲ್ದಾರ್ ಶಿವಮೂರ್ತಿ ಸಹಿ ಹಾಕಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ತಹಶೀಲ್ದಾರ್ ಶಿವಮೂರ್ತಿ, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್, ಕಸಬಾ ರಾಜಸ್ವ ನಿರೀಕ್ಷಕ ಪ್ರಕಾಶ್ ಹಾಗೂ ಶಿರಸ್ತೇದಾರ್ ಶ್ರೀನಾಥ್ ಅವರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು. ಇಂತಹ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು ಎಂದು ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್ ಒತ್ತಾಯಿಸಿದ್ದಾರೆ.

ನಗರ್ಲೆ ಎಂ ವಿಜಯಕುಮಾರ್ ನೀಡಿದ ದೂರಿನಂತೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...