ಮೈಸೂರು | ದಸಂಸದಿಂದ ‘ಸಾಂವಿಧಾನಿಕ ಪ್ರಜಾಪ್ರಭುತ್ವ-ಸಮಕಾಲೀನ ಸವಾಲು’ ಕುರಿತು ವಿಚಾರ ಸಂಕಿರಣ

Date:

ಮೈಸೂರು ಜಿಲ್ಲೆ ನಂಜನಗೂಡು ಅಂಬೇಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಸಂಯೋಜಕ ಶಾಖೆಯ ವತಿಯಿಂದ “ಸಾಂವಿಧಾನಿಕ ಪ್ರಜಾಪ್ರಭುತ್ವ ಮತ್ತು ಸಮಕಾಲೀನ ಸವಾಲುಗಳು” ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು.

ನಗಾರಿ ಬಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಸಂಸ ರಾಜ್ಯ ಸಂಸ್ಥಾಪಕ ಸಂಯೋಜಕ ವಿ ನಾಗರಾಜ್, “ಬಾಬಾ ಸಾಹೇಬರ ಸಂವಿಧಾನ ಎಲ್ಲರಿಗೂ ಸಮಾನತೆ ಕಲ್ಪಿಸಿದೆ. ಆದರೆ ಸಮಾನತೆ ಎಲ್ಲಿದೆ? ಯಾರಲ್ಲಿ ಸಮಾನತೆ ಇದೆ. ಸಮಾಜದಲ್ಲಿ ಎಲ್ಲ ಜಾತಿ ಧರ್ಮಗಳ ನಡುವೆ ಸಮಾನತೆ ಇದೆಯೇ ಅಂದ್ರೆ ಖಂಡಿತ ಇಲ್ಲ. ಈಗಲೂ ಮೇಲು-ಕೀಳು ಅನ್ನುವ ಅಮಾನವೀಯ ನಡಾವಳಿಗಳಿಂದ ಬೇಸತ್ತು, ಬಸವಳಿದಿದ್ದೇವೆ. ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕನ್ನು ನೀಡಿದೆ. ಆದರೆ, ಮೇಲ್ವರ್ಗದವರ ಷಡ್ಯಂತ್ರದಿಂದ ದಲಿತರಿಗೆ ಸಿಗಬೇಕಿದ್ದ ರಾಜಕೀಯ ಸ್ಥಾನಮಾನ, ಮೀಸಲಾತಿ ಎಲ್ಲವನ್ನೂ ಕಳೆದುಕೊಂಡಿದ್ದೇವೆ” ಎಂದು ವಿಷಾದ ವ್ಯಕ್ತಪಡಿಸಿದರು.

dss 4

ಮಾನಸ ಗಂಗೋತ್ರಿ ಪ್ರಾಧ್ಯಾಪಕರಾದ ಡಾ ಆನಂದ್ ಮಾತನಾಡಿ, “ಇತಿಹಾಸ ಗಮನಿಸುವುದೇ ಆದರೆ ಇದುವರೆಗೆ ಶೋಷಣೆಯಿಂದಲೇ ಕೂಡಿದೆ. ಇದುವರೆಗೂ ಬದಲಾಗಲೇ ಇಲ್ಲ. ಮನುಷ್ಯರನ್ನು ಮನುಷ್ಯರಂತೆ ಕಾಣಲೇ ಇಲ್ಲ. ಸಮಾಜದಲ್ಲಿ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಎಲ್ಲಿ ನೋಡಿದರೂ, ಯಾವುದರಲ್ಲೂ ತಾರತಮ್ಯ. ಜನರನ್ನ ಮೇಲು ,ಕೀಳು ಎಂಬರ್ಥದಲ್ಲಿ ಅಳೆಯುವುದು, ಕಾಣುವುದು ಇಂದಿನ ಸಮಾಜದ ದುರಂತ. ಬಾಬಾ ಸಾಹೇಬರು ಸಹ ಇದರಿಂದ ನೋವುಂಡವರು. ಇದನ್ನೆಲ್ಲ ತೊಲಗಿಸಿ ಸಮಾಜದಲ್ಲಿ ಸಮಾನರಾಗಿ ಎಲ್ಲರೂ, ಎಲ್ಲ ಹಕ್ಕುಗಳನ್ನು ಅನುಭವಿಸಬೇಕು. ಸಮಾನರಾಗಿ ಬದುಕಬೇಕು ಎಂದು ಸಂವಿಧಾನ ನೀಡಿದರು. ಆದರೆ ಇವತ್ತಿನ ಪರಿಸ್ಥಿತಿ ತದ್ವಿರುದ್ಧವಾಗಿದೆ. ಇಂತಹ ಕೆಟ್ಟ ಪರಿಸ್ಥಿತಿಯನ್ನು ಹೋಗಲಾಡಿಸಿ ಬಾಬಾ ಸಾಹೇಬರ ಆಶಯಗಳನ್ನು ಅನುಷ್ಠಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತುಮಕೂರು | ಬಂಡೆಕಲ್ಲು, ನೀರಿನ ಮಧ್ಯೆ 12 ಗಂಟೆ ಕಳೆದಿದ್ದು ಹೇಗೆ? ಬದುಕುಳಿದ ವಿದ್ಯಾರ್ಥಿನಿ ಹೇಳಿದ್ದು ಹೀಗೆ..

ನಗರಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ, ವಿದ್ಯಾಸಾಗರ,ಹರಕು ಕುಮಾರ್, ಮಹದೇವಸ್ವಾಮಿ, ಕಾರ್ಯ ಬಸವಣ್ಣ,ಕುಮಾರ್ ಕಳಲೆ, ಸೋಮಣ್ಣ, ಬೆಳಗೆರೆ ಕೃಷ್ಣ, ಮಲ್ಕೊಂಡೆ ಪುಟ್ಟ ಬುದ್ಧಿ, ಮಲ್ಕೊಂಡೆ ಕೃಷ್ಣಮೂರ್ತಿ, ಚಿಕ್ಕಣ್ಣ, ಶಿವರಾಜು, ಸಿದ್ದರಾಜು, ಮಹದೇವಸ್ವಾಮಿ ಶಂಕರ್ ಪುರ, ಮಹದೇವಸ್ವಾಮಿ, ರವಿ ಮೊದಲಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...