ಬೀದರ್‌ | ನಾಡಹಬ್ಬ ದಸರಾ : ಬೀದರ್‌ – ಬೆಂಗಳೂರು ನಡುವೆ ಮೂರು ವಿಶೇಷ ರೈಲು

Date:

ನಾಡಹಬ್ಬ ದಸರಾ ಪ್ರಯುಕ್ತ ಬೀದರ ಲೋಕಸಭಾ ಕ್ಷೇತ್ರದ ಸಾರ್ವಜನಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರಿನಿಂದ ಬೀದರಗೆ ಅ.20 ರಿಂದ 24 ವರೆಗೆ 3 ವಿಶೇಷ ರೈಲುಗಳು ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ವಿಶೇಷ ರೈಲುಗಳ ಸದುಪಯೋಗ ಪಡೆದುಕೊಳ್ಳಲು ಕೇಂದ್ರ ಸಚಿವ ಭಗವಂತ ಖೂಬಾ ಜನತೆಯಲ್ಲಿ ವಿನಂತಿಸಿಕೊಂಡಿದ್ದಾರೆ.

ಅ. 20  (ಶುಕ್ರವಾರ) ಗಾಡಿ ಸಂಖ್ಯೆ 06521 ಯಶವಂತಪುರದಿಂದ ಬೀದರಗೆ ಹೊರಡಲಿದೆ. ಮರುದಿನ ಅ. 21 (ಶನಿವಾರ) ಗಾಡಿ ಸಂಖ್ಯೆ 06522 ಬೀದರನಿಂದ ಯಶವಂತಪುರಕ್ಕೆ ಹೊರಡಲಿದೆ. ಅ.21  (ಶನಿವಾರ) ಗಾಡಿ ಸಂಖ್ಯೆ 06523 ಯಶವಂತಪುರದಿಂದ ಬೀದರಗೆ, ಮರುದಿನ 22ನೇ ಅಕ್ಟೋಬರ್ (ರವಿವಾರ) ಗಾಡಿ ಸಂಖ್ಯೆ 06524 ಬೀದರನಿಂದ ಯಶವಂತಪುರಗೆ ಚಲಿಸಲಿದೆ .ಅ.23 (ಸೊಮುವಾರ) ಗಾಡಿ ಸಂಖ್ಯೆ 06505 ಯಲಹಂಕದಿಂದ ಬೀದರ, 24ನೇ ಅಕ್ಟೋಬರ್ (ಮಂಗಳವಾರ) ಗಾಡಿ ಸಂಖ್ಯೆ 06506 ಬೀದರನಿಂದ ಯಶವಂತಪುರವರೆಗೆ 3 ವಿಶೇಷ ರೈಲುಗಳು ಚಲಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 20 ಹಾಗೂ 21 ರಂದು ಹೊರಡುವ ರೈಲುಗಳು ಯಶವಂತಪುರದಿಂದ ರಾತ್ರಿ 11:15ಕ್ಕೆ ಹೊರಟು,
ಯಲಹಂಕ, ಧರ್ಮವರಂ, ಮಂತ್ರಾಲಯಂ, ವಾಡಿ, ಸೇಡಂ, ಕಲಬುರಗಿ, ತಾಜಸುಲ್ತಾನಪೂರ, ಕಮಲಾಪೂರ ಮಾರ್ಗವಾಗಿ ಹುಮನಾಬಾದಗೆ ಬೆಳಿಗ್ಗೆ10:49ಕ್ಕೆ ತಲುಪಿ, ಬೀದರಗೆ ಮ. 12:15ಕ್ಕೆ ತಲುಪಲಿವೆ. ಅ. 23ರಂದು ಹೊರಡುವ ರೈಲು ಮಾತ್ರ ಯಲಹಂಕದಿಂದ ರಾತ್ರಿ 11:30ಕ್ಕೆ ಬಿಟ್ಟು ಮರುದಿನ ಬೀದರಗೆ ಮ. 12:15ಕ್ಕೆ ತಲುಪಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲಾ ರೈಲುಗಳು ಬಂದ ದಿನವೇ ಮ.02:30ಕ್ಕೆ ಬೀದರನಿಂದ ಹೊರಟು, ಹುಮನಾಬಾದಗೆ ಮ.03.00 ಗಂಟೆಗೆ ತಲುಪಿ, ಬಂದ ಮಾರ್ಗವಾಗಿಯೇ ಮರುದಿನ ನಸುಕಿನ ಜಾವ ಯಶವಂತಪುರಕ್ಕೆ 04:00 ಗಂಟೆಗೆ ತಲುಪಲಿವೆ. ನಮ್ಮ ಮನವಿಗೆ ಸಾರ್ವಜನಿಕರ  ಅನುಕೂಲಕ್ಕಾಗಿ ಹಬ್ಬಕ್ಕೆ 3 ವಿಶೇಷ ರೈಲುಗಳು ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಹಾಗೂ ರೈಲ್ವೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಸಾರ್ವಜನಿಕರ ಪರವಾಗಿ ಕೇಂದ್ರ ಸಚಿವ ಭಗವಂತ ಖೂಬಾ ಧನ್ಯವಾದ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | 82ರ ಇಳಿ ವಯಸ್ಸಿನಲ್ಲೂ ಆರದ ಉತ್ಸಾಹ; ಸ್ವತಃ ಖರ್ಚಿನಲ್ಲೇ ಊರಿನ ರಸ್ತೆ ದುರಸ್ತಿ

ರೈಲ್ವೆ ಇಲಾಖೆಯ ನಿಯಮಾವಳಿಗಳನ್ವಯ ಬಂದ್ ಆಗಿದ್ದ ಹುಮನಾಬಾದ ರಿಸರ್ವೇಷನ್ ಟಿಕೆಟ್ ಕೌಂಟರ್ ಕೂಡ ಸಾರ್ವಜನಿಕರ ಇಚ್ಛೆಯಂತೆ ಬರುವ ಎರಡು ದಿನದೊಳಗೆ ಪುನರ್ ಪ್ರಾರಂಭವಾಗಲಿದೆ. ಹಾಗೂ ಕಮಲಾಪುರದಲ್ಲಿಯೂ ಹೊಸದಾಗಿ ರಿಸರ್ವೇಷನ್ ಟಿಕೆಟ್ ಕೌಂಟರ್ ಪ್ರಾರಂಭಿಸಲಾಗುತ್ತಿದೆ ೇ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...