ಮಂಡ್ಯ | ನಾಗಮಂಗಲ ಗಲಾಟೆ: ಜಿಲ್ಲಾಡಳಿತದಿಂದ ಶಾಂತಿ ಸಭೆ

Date:

ಹಬ್ಬ ಇವತ್ತೇ ಮುಗಿಯಲಿಲ್ಲ. ಮುಂದೆಯೂ ಕೂಡ ಮಾಡಬೇಕು. ಆದ್ದರಿಂದ ನಾಗಮಂಗಲದಲ್ಲಿ ಶಾಂತಿ ಹಾಗೂ ಸೌಹಾರ್ದತೆಯ ಕಡೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಶನಿವಾರ ನಾಗಮಂಗಲ ಪಟ್ಟಣದ ಜಯಮ್ಮ ಕೃಷ್ಣಪ್ಪ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ವಿವಿಧ ಸಮುದಾಯದ ಯುವಜನರು ಸಮಿತಿ ರಚಿಸಿಕೊಂಡು ಧಾರ್ಮಿಕ ಕಾರ್ಯಕ್ರಮಗಳು, ಮೆರವಣಿಗೆ ನಡೆದ ಸಂದರ್ಭದಲ್ಲಿ ಯಾವುದೇ ಬೀದಿಯಲ್ಲಿ ಸಾಗಿದರೂ ಯಾವುದೇ ಗಲಭೆಯಾಗದಂತೆ ಸೌಹಾರ್ದತೆ ಮೆರೆಯಬೇಕು. ತಾಲೂಕು ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನನಗೆ ಐವತ್ತು ವರ್ಷ. ಇಷ್ಟು ವರ್ಷ ಇತಿಹಾಸದಲ್ಲಿ ಹಿಂದು ಮುಸ್ಲಿಮ್ ಗಲಾಟೆ ನಾನಂತು ನೋಡಿಲ್ಲ. ನಮ್ಮಲ್ಲಿ ಎಲ್ಲರೂ ಇವತ್ತು ದುಡಿದು ಬದುಕು ಮಾಡುವವರು. ಇಂತಹ ಘಟನೆಗಳು ಮುಂದೆ ಆಗಬಾರದು. ಜನರು ಸೌಹಾರ್ದತೆಯಿಂದ ಬದುಕು ಸಾಗಿಸಲು ಅವಕಾಶ ಮಾಡಿಕೊಡಿ ಎಂದು ಮಹಮ್ಮದ್ ಹೇಳಿದರು.

ಮಂಡ್ಯ ಕೃಷಿ ಪ್ರಧಾನ ಜಿಲ್ಲೆ ನಡೆದಿರುವ ಘಟನೆ ದುರದೃಷ್ಟಕರ. ನಾವು ಪ್ರಜೋದನೆಗೆ ಒಳಗಾಗುವುದು ಬೇಡ. ಕುವೆಂಪು ಹೇಳಿದಂತೆ ಎಲ್ಲರು ಒಟ್ಟಾಗಿ ಬಾಳೋಣ. ಯಾರು ನಿಜವಾದ ಕಾರಣಕರ್ತರು ಅವರಿಗೆ ದಂಡನೆ ಕೊಡಿಸಿ. ಆ ದಾರಿಯಲ್ಲಿ ಇರುವ ಸಿಸಿ ಪರಿಶೀಲಿಸಿ ಅಮಾಯಕರನ್ನು ಬಿಟ್ಟುಬಿಡಿ ಎಂದು ನಾಗರಾಜು ಭೀಮನಹಳ್ಳಿ ಹೇಳಿದರು.

ತಲವಾರು ಮೂಲಕ ಅಟ್ಯಾಕ್ ಮಾಡಿದರು ಎಂಬಿತ್ಯಾದಿ ಪದ ಬಳಕೆ ಮಾಡಿ ಅತಿರೇಕವಾಗಿ ತೋರಿಸುವುದು ಬೇಡ. ಮಾಧ್ಯಮದವರು ಏನು ನಡೆದಿದೆ ಅದನ್ನು ಮಾತ್ರ ತೋರಿಸಿ. ಟಿಆರ್‌ಪಿ ಹೆಚ್ಚಿಸಿಕೊಳ್ಳಲು ಇಲ್ಲದನ್ನು ಬಿಂಬಿಸಬೇಡಿ ಎಂದು ಸುಹೇಲ್ ಮನವಿ ಮಾಡಿದರು.

ಇಲ್ಲಿಗೆ ಸಾಕು ಬಿಟ್ಟುಬಿಡೋಣ. ನಾವು ಹಬ್ಬ ಮಾಡಲು ಪೊಲೀಸರು ಬೇಕ. ನಾಳೆ ನೀವು ಮೀಲಾದ್ ಮಾಡಬೇಕು. ನೀವು ಹಬ್ಬ ಮಾಡುವಾಗ ನಾವು ಜೈಕಾರ ಹಾಕಬೇಕು. ನಾವು ಹಬ್ಬದ ಮಾಡುವಾಗ ನೀವು ಜೈಕಾರ ಹಾಕಿಕೊಂಡು ಹಬ್ಬ ಮಾಡಿದರೆ ನಮ್ಮ ನಡುವೆ ಬೇಳೆ ಬೇಯಿಸಿಕೊಳ್ಳುವವರಿಗೆ ಬರಲು ಆಗುವುದಿಲ್ಲ. ಈಗ ಸುಟ್ಟಿರುವ ಅಂಗಡಿಗಳಲ್ಲಿ ನಿಮ್ಮದಾದರೆ ಒಳಗಿರುವ ಬೈಕು, ಬಟ್ಟೆ ನಮ್ದು. ನೀವು, ನಾವು ಮಾನಸು ಮಾಡಿದರೆ ಮಾತ್ರ ಶಾಂತಿ ಸಾಧ್ಯ ಎಂದು ಸುಭಾಷ್ ಹೇಳಿದರು.

ಹಿಂದು- ಮುಸ್ಲಿಮರು ತಮ್ಮ ನಡುವೆ ಇರುವ ಕಿಡಿಗೇಡಿಗಳನ್ನು ಹತ್ತಿಕ್ಕಬೇಕು. ಪ್ರಚೋದನೆಗೆ ಒಳಗಾಗಬಾರದು. ಸಾಮರಸ್ಯದಿಂದ ಬಾಳೋಣ. ಗಣೇಶ ಹಬ್ಬವನ್ನು ಎಲ್ಲಾ ಜನಾಂಗದವರು ಸೇರಿ ಆಚರಿಸೋಣ ಎಂದು ಡಿಎಸ್‌ಎಸ್‌ನ ಶ್ರೀನಿವಾಸ್ ಆಗ್ರಹಿಸಿದರು.

ಶಾಂತಿ ಸಭೆಗೆ ಮಾಧ್ಯಮದವರ ಪ್ರವೇಶ ನಿರಾಕರಿಸಲಾಗಿತ್ತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್‌ಪಿ ಬಾಲದಂಡಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಅಧಿಕಾರಿಗಳು ಹಾಗೂ ಹಿಂದೂ-ಮುಸ್ಲಿಂ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...