ನಾಗಮಂಗಲ | ಹಿಟ್‌ ಆ್ಯಂಡ್ ರನ್‌ ಕೇಸ್; ಅಪರಾಧಿಗೆ ಜೈಲು, ₹8,000 ದಂಡ

Date:

ಹಿಟ್‌ ಆ್ಯಂಡ್ ರನ್‌ ಮಾಡಿ ಗರ್ಭಿಣಿಯ ಸಾವಿಗೆ ಕಾರಣವಾಗಿದ್ದ ಅಪರಾಧಿಗೆ ನಾಗಮಂಗಲ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಒಂದು ವರ್ಷ 11 ತಿಂಗಳು ಜೈಲು ಶಿಕ್ಷೆ ಹಾಗೂ ₹8,000 ದಂಡ ವಿಧಿಸಿ ಆದೇಶಿಸಿದೆ.

2014ರ ಮೇ 16ರಂದು ಪಟ್ಟಣದ ಬೆಳ್ಳೂರು ಕ್ರಾಸ್ ಬಳಿಯ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಮನೋಜ ಎಂಬಾತ ಹಿಟ್ ಆ್ಯಂಡ್ ರನ್ ಮಾಡಿದ್ದ. ಕೆಂಪಮ್ಮ ಹಾಗೂ ಅವರ ಗರ್ಭಿಣಿ ಪುತ್ರಿ ಶ್ರುತಿ ಅವರು ಬಿ ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಲು ಆಟೋದಲ್ಲಿ ಹೋಗುತ್ತಿದ್ದಾಗ ಮನೋಜ ಕಾರನ್ನು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆದಿದ್ದ. ಇದರಿಂದಾಗಿ ಆಟೋ ಮಗುಚಿ ಗರ್ಭಿಣಿ ಶ್ರುತಿ ಮೃತಪಟ್ಟಿದ್ದು, ಆಟೋ ಚಾಲಕ ಮಂಜಪ್ಪ ಮತ್ತು ಕೆಂಪಮ್ಮ ಅವರಿಗೂ ಗಾಯಗಳಾಗಿದ್ದವು.

ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್ ಎಸ್ ಶಿವರಾಜು ಅವರು ಶಿಕ್ಷೆ ಪ್ರಕಟಿಸಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಡ್ಯ | ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...