ಮಂಡ್ಯ | ನಗರಕೆರೆಗೆ ಅನುದಾನ ನಿರಂತರ; ಅಭಿವೃದ್ಧಿ ಮಾತ್ರ ಶೂನ್ಯ; ಕಾಮಗಾರಿಗಳ ಮುಖವಾಡ ಬಿಚ್ಚಿಟ್ಟ ಮಳೆ!

Date:

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡ ಗ್ರಾಮಗಳಲ್ಲಿ ನಗರಕೆರೆ ಕೂಡ ಒಂದು. ಇಲ್ಲಿ 21 ಸದಸ್ಯರು ಇರುವ ಗ್ರಾಮ ಪಂಚಾಯಿತಿ ಕೂಡ ಇದೆ. ತಾಲೂಕಿನ ರಾಜಕೀಯದಲ್ಲಿ ಹೆಸರು ಮಾಡಿದವರು ತುಂಬಾ ಜನ ಈ ಗ್ರಾಮದಲ್ಲಿ ಇದ್ದಾರೆ. ಆದರೂ ಊರಿನ ಅಭಿವೃದ್ಧಿ ಮರೀಚಿಕೆಯಾಗಿದೆ.

ಇಲ್ಲಿ ಪ್ರಸ್ತಾಪಿಸಲು ಹೊರಟ ವಿಚಾರಕ್ಕೆ ಮಾದರಿಯಾಗಿ ನಗರಕೆರೆ ಗ್ರಾಮದ ಹೆಸರು ತೆಗೆದುಕೊಳ್ಳಲಾಗಿದೆ ಅಷ್ಟೇ. ರಾಮನಗರ ಹಾಗೂ ಮಂಡ್ಯ ಜಿಲ್ಲೆಯ ಎಲ್ಲಾ ಗ್ರಾಮಗಳಿಗೂ ಇದು ಅನ್ವಯಿಸುತ್ತದೆ.

ಕಳೆದ ಒಂದು ವರ್ಷದಿಂದ ಹಲವು ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಹೆಸರಿನಲ್ಲಿ ಕಾಮಗಾರಿಗಳು ನಡೆಯುತ್ತಿದೆ. ಈ ಗ್ರಾಮದಲ್ಲಿ ನೀರು ಪ್ರತಿ ದಿನವೂ ಬರುತ್ತಿತ್ತು, ಏರ್ಪಾಡು ಕೂಡ ಚೆನ್ನಾಗಿಯೇ ಇತ್ತು. ಅವಶ್ಯಕತೆ ಇಲ್ಲದಿದ್ದರೂ ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡದೆ, ಕೇಂದ್ರ ಸರ್ಕಾರದಿಂದ ಹಣ ಬಂದಿದೆ ಎಂಬ ಒಂದೇ ಕಾರಣಕ್ಕೆ ಕಾಮಗಾರಿ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ನಗರಕೆರೆ ರಸ್ತೆ

ಊರಲ್ಲಿ ಚೆನ್ನಾಗಿದ್ದ ರಸ್ತೆಗಳನ್ನು ಬಗೆದು ಹಾಳು ಮಾಡಿದ್ದಾರೆ. ವರ್ಷದಿಂದ ನಡೆಯುತ್ತಿರುವ ಕೆಲಸ ಎಷ್ಟು ಉಪಯೋಗ ಆಯ್ತು ಅನ್ನುವುದು ಮಾತ್ರ ಪ್ರಶ್ನಾರ್ಹ. ಆದರೆ ಜನರಿಗೆ ಅಭಿವೃದ್ಧಿಯ ಹೆಸರಿನಲ್ಲಿ ರೋಸು ಹಿಡಿದಿದೆ. ಆದರೂ ಜನ ಪ್ರಶ್ನೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

ಊರಿನಲ್ಲಿ ಅರ್ಧಕ್ಕೆ ಅರ್ಧ ರಸ್ತೆಗಳು ಮಣ್ಣಿನ ರಸ್ತೆಗಳು, ಸರಾಗವಾಗಿ ನೀರು ಹರಿದು ಹೋಗುವ ಚರಂಡಿ ವ್ಯವಸ್ಥೆ ಇಲ್ಲ. ಜನರಿಗೆ ಅವಶ್ಯಕತೆ ಇರುವ ಕೆಲಸಗಳು ಇಲ್ಲಿ ಪಂಚಾಯಿತಿಯ ಚುನಾಯಿತರಿಂದ ಹಿಡಿದು ಶಾಸಕ, ಸಂಸದರವರೆಗೂ ಬೇಡವಾಗಿದೆ.

ಕಳೆದ ಎರಡು ತಿಂಗಳುಗಳಿಂದ ಸಣ್ಣ ಮಳೆ ಬರುತ್ತಿದೆ, ಒಂದೇ ಒಂದು ದೊಡ್ಡ ಮಳೆ ಬಂದಿಲ್ಲ. ಗದ್ದೆಗಳಲ್ಲಿ ಭತ್ತದ ಹೊಟ್ಲು ಹಾಕಲು ಆಗಿಲ್ಲ. ಆದರೆ ಊರಿನಲ್ಲಿ ರಸ್ತೆಗಳಲ್ಲಿ ಭತ್ತದ ನಾಟಿ ಮಾಡಬಹುದು. ಅಷ್ಟು ಹಾಳಾಗಿ ಹೋಗಿವೆ. ಆದರೂ ಪಂಚಾಯಿತಿ ಅಧಿಕಾರಿಗಳು ಇತ್ತ ತಿರುಗಿ ನೋಡಿಲ್ಲ.

ನಗರಕೆರೆ ರಾಜಕೀಯವಾಗಿ ಪ್ರಭಾವ ಹೊಂದಿರುವ ಊರಾದ್ದರಿಂದ ವರ್ಷ ವರ್ಷವೂ ಲಕ್ಷ ಇಲ್ಲವೇ ಕೋಟಿಗಳ ಲೆಕ್ಕದಲ್ಲಿ ಅನುದಾನ ಬರುತ್ತದೆ. ಜನರ ಬದುಕು ಹಸನಾಗಿದೆಯಾ ಅಂತ ನೋಡಿದರೆ ಫಲಿತಾಂಶ ಶೂನ್ಯ ಎಂಬಂತಾಗಿದೆ.

ನಗರಕೆರೆ 3

ನಗರಕೆರೆಯ ನಿವಾಸಿ ರಾಮಕೃಷ್ಣ ಎಂಬುವವರು ಈ ದಿನ.ಕಾಮ್‌ ಜೊತೆಗೆ ಮಾತನಾಡಿ, “ಕಳೆದ ಎರಡು ತಿಂಗಳುಗಳಿಂದ ಸಣ್ಣ ಮಳೆ ಬರುತ್ತಿದೆ. ಒಂದೇ ಒಂದು ದೊಡ್ಡ ಮಳೆ ಬಂದಿಲ್ಲ. ಗದ್ದೆಗಳಲ್ಲಿ ಭತ್ತದ ಹೊಟ್ಲು ಹಾಕಲು ಆಗಿಲ್ಲ. ಆದರೆ ಊರಿನಲ್ಲಿ ರಸ್ತೆಗಳಲ್ಲಿ ಭತ್ತದ ನಾಟಿ ಮಾಡಬಹುದು. ಅಷ್ಟು ಹಾಳಾಗಿ ಹೋಗಿವೆ. ಆದರೂ ಪಂಚಾಯಿತಿ ಅಧಿಕಾರಿಗಳು ಇತ್ತ ತಿರುಗಿ ನೋಡಿಲ್ಲ. ಊರಿನ ರಸ್ತೆ, ಚರಂಡಿಗಳು ತೀರ ಹದಗೆಟ್ಟಿವೆ. ಜನರು ಓಡಾಡದಂತಾಗಿದೆ. ಇಂತ ತುರ್ತು ಕಾಮಗಾರಿಗಳಿಗೆ ಹಣ ಬಳಸದೇ ಬೇಡದ ಜಲ ಜೀವನ್ ಮಿಷನ್ ಕಾಮಗಾರಿಗೆ ಬಳಸಿದ್ದಾರೆ” ಎಂದು ದೂರಿದರು.

“ನಗರಕೆರೆ ರಾಜಕೀಯವಾಗಿ ಪ್ರಭಾವ ಹೊಂದಿರುವ ಊರಾದ್ದರಿಂದ 2021-22 ನೇ ಸಾಲಿನಲ್ಲಿ 11,846,88 ರೂ , 2022-23 ನೇ ಸಾಲಿನಲ್ಲಿ 13,028,683 ರೂ ಹಾಗೂ 2023-24 ನೇ ಸಾಲಿನಲ್ಲಿ 93,58,700 ರೂಗಳು ಪಂಚಾಯಿತಿ ಖಾತೆಯಲ್ಲಿ ಇರುವುದನ್ನು ತೋರಿಸುತ್ತಿದೆ. ವರ್ಷ ವರ್ಷವೂ, ಲಕ್ಷ ಇಲ್ಲವೇ ಕೋಟಿಗಳ ಲೆಕ್ಕದಲ್ಲಿ ಅನುದಾನ ಬರುತ್ತದೆ. ಜನರ ಬದುಕು ಹಸನಾಗಿದೆಯಾ ಅಂತ ನೋಡಿದರೆ ಫಲಿತಾಂಶ ಶೂನ್ಯ” ಎಂದರು.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಓ ಶೇಖ್ ತನ್ವೀರ್ ಆಸಿಫ್, ಮದ್ದೂರು ತಾಲೂಕು ಪ್ರಭಾರ ಇಓ ರವಿ ಹಾಗೂ ನಗರಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿಲ್ಪ ಜಯಲಿಂಗು ಅವರಿಗೆ ಕರೆ ಮಾಡಲಾಯಿತಾದರೂ, ಮಾತಿಗೆ ಸಿಗಲಿಲ್ಲ.

ನಗರಕೆರೆ 1

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಂಜಿತ ಜಿ.ಕೆ ಈ ದಿನ.ಕಾಮ್ ಜೊತೆಗೆ ಮಾತನಾಡಿ “ನಗರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ವಾಸ್ತವ ಸ್ಥಿತಿಯನ್ನು ಸಾಮಾನ್ಯ ಸಭೆಯಲ್ಲಿ ಇಟ್ಟು ನಿರ್ಣಯ ಮಾಡಿ ಅನುದಾನ ಕೋರಿ ಮದ್ದೂರು ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು ಹಾಗೂ ಸಂಸದರಿಗೆ ಪತ್ರ ಬರೆಯುತ್ತೇವೆ” ಎಂದರು.

ಕೋಟಿಗಳ ಲೆಕ್ಕದಲ್ಲಿ ಅನುದಾನ ಬಂದರು ಊರಿನ ಮೂಲಭೂತ ಸೌಕರ್ಯಗಳು ಸರಿಯಾಗಿಲ್ಲ. ಊರಿನ ಶಾಲೆಯ ಅಡುಗೆ ಮನೆ ಸೋರುತ್ತಿದೆ, ಶೌಚಾಲಯದ ಗೋಡೆಗೆ ಊರೆ ಕೊಟ್ಟು ನಿಲ್ಲಿಸಿದ್ದಾರೆ. ವರ್ಷ ವರ್ಷ ಶಾಲೆಗೆ ಮಕ್ಕಳ ದಾಖಲಾತಿ ಕಡಿಮೆ ಆಗುತ್ತಿದೆ. ಇದರ ಕಡೆಗೆ ಗ್ರಾಮ ಸರಕಾರದ ಗಮನವಿಲ್ಲ. ಜನರ ಬದುಕು ಹಸನಾಗಲಿಲ್ಲ. ಹಾಗಾದರೆ, ಬಂದ ಅನುದಾನ ಯಾರ ಜೇಬನ್ನು ತುಂಬುತ್ತಿವೆ? ಸಣ್ಣ ಮಳೆಗಳು ಅಭಿವೃದ್ಧಿಯ ಗುಣಮಟ್ಟವನ್ನು ಸಾರ್ವಜನಿಕರ ಎದುರು ತೊಳೆದಿಡುತ್ತಿವೆ.

Untitled 24
ನಗರಕೆರೆ ಜಗದೀಶ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...