ಸೌಜನ್ಯ ಪ್ರಕರಣ: ಓದುಗರಿಗೆ ದ್ರೋಹ ಬಗೆದ ‘ಹೆಗ್ಗಡೆವಾಣಿ’ಗೆ ನಾಗರಿಕ ಸೇವಾ ಟ್ರಸ್ಟ್ ಪತ್ರ

Date:

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ದಾಖಲೆ ಸಮೇತವಾಗಿ ಸುದ್ದಿ ಕಳುಹಿಸಿದರೂ ಕೂಡಾ ಪ್ರಕಟಿಸದೆ ಉದಯವಾಣಿ ಪತ್ರಿಕೆಯು ಓದುಗರಿಗೆ ದ್ರೋಹ ಬರೆಯುತ್ತಿದೆ. ಪತ್ರಿಕೆಯ ಹೆಸರ ಪಕ್ಕದಲ್ಲೇ ‘ಹೆಗ್ಗಡೆವಾಣಿ’ ಎಂದು ಬರೆಯಬಹುದು ಎಂದು ನಾಗರಿಕ ಸೇವಾ ಟ್ರಸ್ಟ್ ಹೇಳಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಧರ್ಮಸ್ಥಳಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ನಾಗರಿಕ ಸೇವಾ ಟ್ರಸ್ಟ್ ಮತ್ತು ಸತ್ಯಮೇವ ಜಯತೇ ಸಂಘಟನೆಗಳ ಒಕ್ಕೂಟ-ಕರ್ನಾಟಕ ಜಂಟಿಯಾಗಿ ಉದಯವಾಣಿ ದೈನಿಕ ಸಂಪಾದಕರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವರದಿಗಾರರಿಗೆ ಪತ್ರ ಬರೆದಿದೆ.

ಇದನ್ನು ಓದಿದ್ದೀರಾ? ಸೌಜನ್ಯ ಪ್ರಕರಣ | ಅಣ್ಣಪ್ಪ ಬೆಟ್ಟದಲ್ಲಿ ಸೌಜನ್ಯ ತಾಯಿ, ಆರೋಪ ಹೊತ್ತವರು ಮುಖಾಮುಖಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮೆರಡು ಜಿಲ್ಲೆಯ (ದಕ್ಷಿಣ ಕನ್ನಡ, ಉಡುಪಿ) ಪ್ರಮುಖ ದೈನಿಕ ಉದಯವಾಣಿ. ಓದುಗರಿಗೆ ಎಲ್ಲಾ ಸುದ್ದಿಗಳನ್ನು ನೀಡುವುದು ಪತ್ರಿಕಾ ಧರ್ಮ. ಅದು ನೀವು ಮಾಡುವ ಉಪಕಾರವೇನಲ್ಲ. ಹೆಗ್ಗಡೆಯವರ ಸುದ್ದಿಗಳನ್ನು ಕಾಲಂ ಗಟ್ಟಲೆ ಪೋಟೋಸಹಿತ ರಾಜ್ಯಮಟ್ಟದ ವರದಿಯಾಗಿ ಪ್ರಕಟಿಸುವ ನೀವು ನಾಗರಿಕ ಸೇವಾ ಟ್ರಸ್ಟ್‌ನ ವರದಿಗಳನ್ನು ವರದಿಗಳನ್ನು ಪ್ರಕಟಿಸುತ್ತಿಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ.

“ನಾವು ಹೆಗ್ಗಡೆಯವರ ಅಕ್ರಮಗಳನ್ನು ದಾಖಲೆ ಸಹಿತ ಬಯಲಿಗೆಳೆಯುತ್ತಿರುವ ಕಾರಣದಿಂದಾಗಿ, ಹೆಗ್ಗಡೆಯವರು ನಿಮಗೆ ಕೋಟಿಗಟ್ಟಲೆ ರೂಪಾಯಿಯ ಜಾಹೀರಾತು ನೀಡುವ ಕಾರಣದಿಂದಾಗಿ ನಮ್ಮ ಸುದ್ದಿಗಳನ್ನು ಪ್ರಕಟಿಸುತ್ತಿಲ್ಲ. ಪದೇ ಪದೇ ನೆನಪಿಸಿದಾಗ ಬೆಳ್ತಂಗಡಿ-ಬಂಟ್ವಾಳಕ್ಕೆ ಸೀಮಿತವಾದ ಸುದಿನದಲ್ಲಿ ಒಂದು ಸಣ್ಣ ಸುದ್ದಿ ಪ್ರಕಟಿಸಲಾಗುತ್ತದೆ. ಸುದ್ದಿಯನ್ನು ಜನರಿಗೆ ತಲುಪಿಸದಿರುವುದು ನೀವು ಮಾಡುವ ದ್ರೋಹ” ಎಂದು ದೂರಲಾಗಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ನ್ಯಾಯಾಲಯ

“ನಿಮ್ಮ ಪತ್ರಿಕೆಗೆ ಬ್ರೇಕೆಟ್‌ನಲ್ಲಿ ಹೆಗ್ಗಡೆವಾಣಿ ಎಂದು ಹಾಕಿದರೆ ಸೂಕ್ತವಲ್ಲವೇ” ಎಂದು ಪತ್ರದಲ್ಲಿ ಕುಟುಕಲಾಗಿದೆ. “ಉಜಿರೆಯಿಂದ ಧರ್ಮಸ್ಥಳಕ್ಕೆ ನಾಲ್ಕು ಸಾವಿರ ಮಂದಿಯ ಪಾದಯಾತ್ರೆ ನಿಮ್ಮ ಪತ್ರಿಕೆಯಲ್ಲಿ 25 ಸಾವಿರವೆಂದು ಪ್ರಕಟಿಸಲಾಗುತ್ತದೆ. ಆದರೆ ಧರ್ಮಸ್ಥಳದ ದಲಿತರ ಮುರುಕು ಮನೆಗಳ ದುಃಸ್ಥಿತಿ ನಿಮ್ಮ ಕಣ್ಣಿಗೆ ಕಾಣುವುದಿಲ್ಲ” ಎಂದು ಉದಯವಾಣಿಯನ್ನು ನಾಗರಿಕ ಸೇವಾ ಟ್ರಸ್ಟ್ ಪತ್ರ ಟೀಕಿಸಿದೆ.

“ಹೆಗ್ಗಡೆಯವರ ಬೀಡು ಚಿತ್ರೀಕರಿಸುವ ನಿಮಗೆ ಸೌಜನ್ಯಾಳ ಕುಟುಂಬದ ಗೋಳು ಕೇಳುವುದಿಲ್ಲ. ಧರ್ಮಸ್ಥಳದಲ್ಲಾದ ನೂರಾರು ಎಕರೆ ಅತಿಕ್ರಮಣ ಕಾಣುವುದಿಲ್ಲ. ನಾವು ಆಧಾರ ಸಹಿತ ನಿಮಗೆ ಕಳುಹಿಸಿದ ವರದಿ ಕಸದ ಬುಟ್ಟಿಗೆ ಸೇರುತ್ತದೆ. ಈ ವಿಚಾರದಲ್ಲಿ ನೀವು ಪಶ್ಚಾತ್ತಾಪ ಪಡಬೇಕಾದ ಕಾಲ ದೂರವಿಲ್ಲ, ನೆನೆಪಿರಲಿ” ಎಂದು ಪತ್ರದಲ್ಲಿ ಬರೆಯಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...