ಬೀದರ್‌ ವಿವಿಗೆ ಡಾ.ಅಂಬೇಡ್ಕರ್‌ ಹೆಸರಿಡಿ

Date:

2022ರಲ್ಲಿ ಆರಂಭವಾದ ಬೀದರ್ ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿಡಬೇಕೆಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ವಿಶ್ವವಿದ್ಯಾಲಯ ಅನುಷ್ಠಾನ ಸಮಿತಿ ಒತ್ತಾಯಿಸಿದೆ.

ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ರಾಜ್ಯಪಾಲರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ʼಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ (ಕೆ) ಸ್ನಾತ್ತಕೋತ್ತರ ಕೇಂದ್ರಕ್ಕೆ ನೂತನ ವಿಶ್ವವಿದ್ಯಾಲಯ ಎಂದು ಘೋಷಣೆಯಾಗಿದ್ದು, ನಮಗೆ ಸಂತೋಷದ ವಿಷಯ. ಮುಖ್ಯವಾಗಿ ಭಾರತದ ಎಲ್ಲ ವಿಶ್ವವಿದ್ಯಾಲಯಗಳ ಅಧಿನಿಯಮದ ಮೂಲ ಬಾಂಬೆ ವಿಶ್ವವಿದ್ಯಾಲಯವಾಗಿದ್ದು, ಈ ಅಧಿನಿಯಮದ ಕಾನೂನು ರೂಪಿಸಿದ್ದು ಡಾ.ಅಂಬೇಡ್ಕರ್ ಅವರಾಗಿದ್ದಾರೆ. ಹಾಗಾಗಿ ನಮ್ಮ ಜಿಲ್ಲೆಗೆ ಹೊಸದಾಗಿ ಘೋಷಣೆಯಾಗಿರುವ ವಿಶ್ವವಿದ್ಯಾಲಯಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವಿಶ್ವವಿದ್ಯಾಲಯ ಎಂದು ಹೆಸರಿಡುವಂತೆ ಜಿಲ್ಲೆಯ ಪ್ರಗತಿಪರ ಚಿಂತಕರು, ವಿದ್ಯಾರ್ಥಿಗಳ ಬೇಡಿಕೆಯಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೇಡಿಕೆ ಕುರಿತು 2024ರಲ್ಲಿ ಪತ್ರಿಕಾ ಹೇಳಿಕೆ ಮುಖಾಂತರ ಮನವಿ ಸಲ್ಲಿಸಲಾಗಿತ್ತು. ಆದರೆ ಅದನ್ನು ಪರಿಗಣಿಸಲಿಲ್ಲ. ಈ ಅಧಿವೇಶನದಲ್ಲಿ ಬೀದರ್‌ ವಿವಿಗೆ ಅಂಬೇಡ್ಕರ್‌ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಬೇಕೆಂದು ಪ್ರಸ್ತಾಪಿಸಬೇಕು. ಅಧಿವೇಶನ ಮುಗಿಯುವರೆಗೆ ಘೋಷಿಸಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೋಧಗಯಾ ಟೆಂಪಲ್‌ ಕಾಯ್ದೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ಈ ಸಮಿತಿಯ ಪ್ರಮುಖರಾದ ಮುಕೇಶ್ ಚೆಲವಾ, ಭೀಮರಾವ್‌ ಮಾಲಗತ್ತಿ, ಪೃಥ್ವಿರಾಜ ಮುಧೋಳಕರ್‌, ಸಿದ್ದಾರ್ಥ ಭಾವಿದೊಡ್ಡಿ, ಸಿದ್ದಾರ್ಥ ಕೊಗಟುನೋರ, ದೇವರಾಜ ಜಾಧವ, ನಿತೀಶ ಶಿಂಧೆ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...