ನರಗುಂದ | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

Date:

ಬಿಜೆಪಿ ಶಾಸಕರು ಬಾಯಲ್ಲಿ ಭಾರತಮಾತೆ, ಮನಸಲ್ಲಿ ಹೆಣ್ಮಕ್ಕಳ ವಿಷಯದಲ್ಲಿ ಕೊಳಕು ಮನಸ್ಥಿತಿ ಇದೆ. ಬಿಜೆಪಿಯ ರಾಜ ರಾಜೇಶ್ವರಿ ಕ್ಷೇತ್ರದ ರೌಡಿ ಶಾಸಕ ಮುನಿರತ್ನ ಅವನನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕಲು ಅನರ್ಹ ಶಾಸಕ ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ವಿಜಯ ಛಲವಾದಿ ಆಕ್ರೋಶ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಮುನಿರತ್ನ ಗುತ್ತಿಗೆದಾರನಿಗೆ ಅವಾಚ್ಯ ಶಬ್ದದಿಂದ ನಿಂದಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು.

ಬಿಬಿಎಂಪಿ ಕೆಲವು ಕಾಮಗಾರಿಗಳ ಕೆಲಸ ಮಾಡಿದ ಗುತ್ತಿಗೆದಾರರಿಂದ ಹತ್ತಿರ ಲಂಚ ಕೇಳುವುದು ಅಲ್ಲದೆ ಬೇರೆ ನಾಯಕರಿಗೆ ಅವಾಚ್ಯ ಶಬ್ದ ಕಾನೂನು ಬಾಹಿರ ಪದಬಳಕೆ ಮಾಡಿದ್ದಾರೆ. ಆ ಮೂಲಕ ಸಮಸ್ತ ದಲಿತರ ಭಾವನೆಗೆ ಧಕ್ಕೆ ಉಂಟು ಮಾಡಿರುವುದು ಅವರ ಪದಬಳಕೆಯಲ್ಲೇ ಗೊತ್ತಾಗುತ್ತದೆ. ರಾಜಕೀಯ ರಂಗದಲ್ಲಿ ಬಿಜೆಪಿಯು ಎಂದೂ ದಲಿತರ ಪರವಾಗಿಲ್ಲ ಎಂಬ ಸತ್ಯಾಂಶ ಗೊತ್ತಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 18 at 8.35.46 AM 1

ಬಿಜೆಪಿಯ ಅನೇಕ ನಾಯಕರು ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಾಗೂ ಅಂಬೇಡ್ಕರ್ ಬಗ್ಗೆ ದಲಿತರ ಬಗ್ಗೆ ತುಂಬಾ ತುಚ್ಛವಾಗಿ ಮಾತಾಡಿದ್ದನ್ನು ನೋಡಿದ್ದೇವೆ. ಅನಂತಕುಮಾರ್ ಹೆಗಡೆ, ಬಸನಗೌಡ ಯತ್ನಾಳ್ ಸೇರಿದಂತೆ ಇನ್ನೂ ಅನೇಕ ನಾಯಕರು ಮಾತನಾಡಿದ್ದನ್ನು ನೋಡಿದ್ದೇವೆ. ಈಗ ಮುನಿರತ್ನ ಅವರು ಕಾನೂನು ಬಾಹಿರ ಪದಬಳಕೆ ಅವರ ಸಂವಿಧಾನಿಕ ಹುದ್ದೆಗೆ ಗೌರವವಲ್ಲ. ಒಬ್ಬ ಒಕ್ಕಲಿಗ ಗುತ್ತಿಗೆದಾರರ ತಾಯಿ ಬಗ್ಗೆ ಹೆಂಡತಿ ಬಗ್ಗೆ ಆ ರೀತಿಯ ಪದಬಳಕೆ ಸಮಸ್ತ ಹೆಣ್ಣು ಕುಲಕ್ಕೆ ಅವಮಾನ. ಇದು ಖಂಡನೀಯ ಎಂದು ವಿಜಯ ಛಲವಾದಿ ಹೇಳಿದರು.

ಸರ್ಕಾರಕ್ಕೆ ಮತ್ತು ಕರ್ನಾಟಕ ಪೊಲೀಸ್ ಇಲಾಖೆಗೆ ಹೃತ್ಪೂರ್ವಕ ಧನ್ಯವಾದಗಳು ಹೇಳುತ್ತೇವೆ. ಕೆಲವೇ ಗಂಟೆಗಳಲ್ಲಿ ಆಂಧ್ರದ ಗಡಿಭಾಗದಲ್ಲಿ ಶಾಸಕನನ್ನು ಬಂಧಿಸಿ, ಜನಸಾಮಾನ್ಯರಲ್ಲಿ ಪೊಲೀಸ್ ಇಲಾಖೆ ಮೇಲೆ ಗೌರವ ಮತ್ತು ನಂಬಿಕೆಯನ್ನು ಹೆಚ್ಚು ಮಾಡಿದೆ ಎಂದರು.

ಜಾತಿ ನಿಂದನೆ ಮಾಡಿದ ಮುನಿರತ್ನ ಅವರು ಶಾಸಕ ಸ್ಥಾನದಲ್ಲಿ ಹಾಗೂ ಸಾರ್ವಜನಿಕ ಜೀವನದಲ್ಲಿ ಇರುವದು ಕರ್ನಾಟಕ ರಾಜಕೀಯಕ್ಕೆ ಕಳಂಕ. ಅವರನ್ನ ತಕ್ಷಣ ಶಾಸಕ ಸ್ಥಾನದಿಂದ ಸಭಾಧ್ಯಕ್ಷರು ವಜಾಗೊಳಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ರಾಯಚೂರು | ಜಿಲ್ಲೆಯಲ್ಲಿ ಕಾಂಗ್ರೆಸ್ ಬಣಗಳ ಗುದ್ದಾಟದಿಂದ ಉಪವಿಭಾಗಾಧಿಕಾರಿ ಮಹೆಬೂಬಿ ವರ್ಗಾವಣೆ?

ಮುನಿರತ್ನ ಅವರಂತೆ ಇನ್ನು ಗದಗ ಜಿಲ್ಲೆಯ ಕೆಲವು ಶಾಸಕರು ದಲಿತರ ಬಗ್ಗೆ ಹೀನಾಯ ಪದಬಳಕೆ ಮಾಡಿದ್ದು, ದಲಿತರ ಮನಸ್ಸಿಗೆ ಘಾಸಿ ಉಂಟು ಮಾಡಿತ್ತು. ಮುಂದಿನ ದಿನಗಳಲ್ಲಿ ದಲಿತರ ಬಗ್ಗೆ ಕೇವಲವಾಗಿ ಮಾತಾಡುವವರಿಗೆ ಮುನಿರತ್ನ ಅವರಿಗೆ ನೀಡುವ ಶಿಕ್ಷೆ ಪಾಠವಾಗಲಿ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...