ಪ್ರಧಾನಿ ಮೋದಿ ಶ್ರೀಕೃಷ್ಣಮಠದ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಸಹಿತ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಉಡುಪಿಗೆ ಆಗಮಿಸಿದ್ದಾರೆ. ಮಂಗಳೂರು ಏರ್ಪೋರ್ಟ್ನಿಂದ ಆದಿ ಉಡುಪಿಯ ಹೆಲಿಪ್ಯಾಡ್ಗೆ ಪ್ರಧಾನಿ ಬಂದಿದ್ದಾರೆ. ಬಿಗಿ ಭದ್ರತೆಯ ನಡುವೆ ಬನ್ನಂಜೆ ವೃತ್ತದಿಂದ ರೋಡ್ ಶೋ ಆರಂಭವಾಗಿದೆ. ಕಲ್ಸಂಕ ವೃತ್ತದವರೆಗೂ ನಡೆಯುವ ರೋಡ್ಶೋನಲ್ಲಿ ಪ್ರಧಾನಿಯನ್ನು ನೋಡಲು ಸಾವಿರಾರು ಜನರು ಆಗಮಿಸಿದ್ದಾರೆ. ಪ್ರಧಾನಿಗೆ ಹೂವಿನ ಹಾಕುವ ಮೂಲಕ ಸ್ವಾಗತ ಕೋರಲಾಗಿದೆ.

ಪ್ರಧಾನಿಯವರ ಇಂದಿನ ಕಾರ್ಯಕ್ರಮಗಳು
ಚಿನ್ನದ ಕವಚ ಅಳವಡಿಸಿರುವ ಕನಕನ ಕಿಂಡಿ ಲೋಕಾರ್ಪಣೆ, ಸ್ವರ್ಣ ಖಚಿತ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣದೇವರ ದರ್ಶನ, ಅಷ್ಟಮಠಾಧೀಶರೊಂದಿಗೆ ಪ್ರಧಾನಿ ಮೋದಿ ಮಾತುಕತೆ, ಮಠದಲ್ಲಿ ವೈದಿಕರಿಂದ ಉಪನಿಷತ್ತು, ವೇದ, ಗೀತೆ ಪಠಣ, ಗೀತಾ ಮಂದಿರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಗೀತಾ ಮಂದಿರದಲ್ಲಿ ನೂತನ ಅನಂತಪದ್ಮನಾಭ ದೇವರ ಪ್ರತಿಮೆ ಅನಾವರಣ, ಧ್ಯಾನ ಮಂದಿರದಲ್ಲಿ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ, ಗೀತಾ ಮಂದಿರದಲ್ಲೇ ಲಘು ಉಪಹಾರ ಸ್ವೀಕಾರ, ಮೋದಿಗಾಗಿ ತುಳುನಾಡಿನ ತಿಂಡಿಗಳ ಸಿದ್ಧತೆ, ಲಕ್ಷ ಕಂಠ ಭಗವದ್ಗೀತಾ ಸಮಾವೇಶದಲ್ಲಿ ಪ್ರಧಾನಿ ಭಾಗಿ, ನೆಲದ ಮೇಲೆ ಅಸೀನರಾಗಲಿರುವ ಪ್ರಧಾನಿ ಮೋದಿ, ಭಗವದ್ಗೀತೆಯ 10 ಶ್ಲೋಕಗಳ ಪಠಣ ಮಾಡಲಿರುವ ಮೋದಿ, ಬಳಕ ಮೋದಿ ಭಾಷಣ








