ʼನೆರೆಹೊರೆಯವರ ಹಕ್ಕುʼಗಳ ರಾಷ್ಟ್ರೀಯ ಅಭಿಯಾನ; ಸಂಬಂಧಗಳ ಬಲಪಡಿಸಲು ಜಮಾಅತೆ ಇಸ್ಲಾಮೀ ಹಿಂದ್ ಮನವಿ

Date:

ಮನುಷ್ಯ ಮೂಲತಃ ಸಂಘಜೀವಿ. ಕುಟುಂಬ, ಗ್ರಾಮ, ಸಮಾಜ ಎಲ್ಲದರ ಅಂತರಾಳದಲ್ಲಿ ಸಂಬಂಧ ಎಂಬ ನಂಟೇ ಮಾನವ ಸಮಾಜದ ಬುನಾದಿ. ವಿಭಿನ್ನ ಭಾಷೆ, ಧರ್ಮ, ಸಂಸ್ಕೃತಿಯ ಜನರು ಪಕ್ಕದಲ್ಲೇ ವಾಸಿಸುತ್ತಿದ್ದರೂ ನೆರೆಹೊರೆಯ ಸಂಬಂಧ ಮಾತ್ರ ಅತ್ಯಂತ ನಿಕಟ. ಆದರೆ ಇತ್ತೀಚಿನ ನಗರೀಕರಣ, ಖಾಸಗೀತನ ಮತ್ತು ವೇಗದ ಜೀವನಶೈಲಿಯಿಂದ ನೆರೆಹೊರೆಯ ಮೌಲ್ಯಗಳು ಕುಂದುತ್ತಿರುವ ಹಿನ್ನೆಲೆ ಈ ಸಂಬಂಧಗಳನ್ನು ಪುನಃ ಬಲಪಡಿಸುವ ಅಗತ್ಯ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್‌ ಸಂಘಟನೆಯು ನೆವಂಬರ್‌ 21ರಿಂದ 30ರವರೆಗೆ ದೇಶವ್ಯಾಪಿ “ಮಾದರಿ ನೆರೆಹೊರೆ, ಮಾದರಿ ಸಮಾಜ” ಎಂಬ ಅಭಿಯಾನ ಹಮ್ಮಿಕೊಂಡಿದೆ. ಸಮಾಜದಲ್ಲಿ ಸೌಹಾರ್ದ, ಸಹಅಸ್ತಿತ್ವ, ಪರಸ್ಪರ ಸಹಕಾರ ಮತ್ತು ಮಾನವೀಯತೆಯನ್ನು ವೃದ್ಧಿಸುವ ಉದ್ದೇಶವು ಅಭಿಯಾನ ರೂಪ ಪಡೆದಿದ್ದು, ಇದರಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಂಘಟನೆ ಮನವಿ ಮಾಡಿದೆ.‌

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿರುವ ಸಂಘಟನೆಯ ಮುಖಂಡರು, “ಇಸ್ಲಾಮಿಕ್ ಗ್ರಂಥಗಳಲ್ಲೂ ನೆರೆಹೊರೆಯವರ ಹಕ್ಕುಗಳಿಗೆ ಅತ್ಯಂತ ಮಹತ್ವ ನೀಡಲಾಗಿದೆ. ಪವಿತ್ರ ಕುರ್‌ಆನ್ ನಲ್ಲಿ ಆಪ್ತ ನೆರೆಹೊರೆಯವರಿಗೂ, ಅಪರಿಚಿತ ನೆರೆಹೊರೆಯವರಿಗೂ ಉತ್ತಮ ರೀತಿಯಲ್ಲಿ ವರ್ತಿಸಿರಿ (ಅನ್ನಿಸಾ: 36) ಎಂದು ತಿಳಿಸಲಾಗಿದೆ. ಪ್ರವಾದಿ ಮುಹಮ್ಮದ್ (ಸ)ರ ವಚನದಲ್ಲೂ ʼಯಾರ ಕಾರಣದಿಂದ ನೆರೆಹೊರೆಯವರು ಸುರಕ್ಷಿತವಾಗಿಲ್ಲವೋ, ಅವರು ಸತ್ಯ ವಿಶ್ವಾಸಿಯಲ್ಲʼ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಈ ಪವಿತ್ರ ಮಾರ್ಗದರ್ಶಕ ತತ್ವಗಳನ್ನು ಸಮಾಜದಲ್ಲಿ ಜಾಗೃತಿಗೊಳಿಸುವುದೂ ಈ ಅಭಿಯಾನದ ಪ್ರಮುಖ ಗುರಿಯಾಗಿದೆ” ಎಂದಿದ್ದಾರೆ.

WhatsApp Image 2025 11 20 at 9.30.17 PM

“ಅಭಿಯಾನದ ಅಂಗವಾಗಿ ದೇಶಾದ್ಯಂತ ಬೃಹತ್ ಪ್ರಮಾಣದ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪ್ರವಚನಗಳು, ಮೊಹಲ್ಲಾ ಸಭೆಗಳು, ಕರಪತ್ರ ವಿತರಣೆ, ಮನೆಮನೆಗೆ ಭೇಟಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಚಾರ ನಿಯಮ ಜಾಗೃತಿ ಸಮಾವೇಶಗಳು, ವಿದ್ಯಾರ್ಥಿ-ಯುವಕರ ರ್ಯಾಲಿಗಳು ಸೇರಿದಂತೆ ಮುಂತಾದ ವೈವಿಧ್ಯಮಯ ಚಟುವಟಿಕೆಗಳು ನಡೆಯಲಿವೆ. ನೆರೆಹೊರೆಯವರ ಮಧ್ಯೆ ಇರುವ ಅಂತರಗಳನ್ನು ಕಡಿಮೆ ಮಾಡಿ, ಸಮಾಜದಲ್ಲಿ ಸೌಹಾರ್ದ ಮತ್ತು ಪರಸ್ಪರ ಗೌರವವನ್ನು ಬೇರೂರಿಸುವುದು ಈ ಕಾರ್ಯಕ್ರಮದ ಮುಖ್ಯ ಧ್ಯೇಯ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕಲಬುರಗಿ | ಗುಲ್ಬರ್ಗಾ ವಿವಿಗೆ ಅಂಬೇಡ್ಕರ್ ಹೆಸರಿಡುವಂತೆ ದಸಂಸ ಆಗ್ರಹ

“ಈ ಅಭಿಯಾನದಲ್ಲಿ ವ್ಯಾಪಕವಾಗಿ ಜನತೆ, ವಿಶೇಷವಾಗಿ ಯುವಕರು ಮತ್ತು ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಲ್ಗೊಂಡರೆ, ಸಮಾಜದ ಒಳಗೆ ಪ್ರೀತಿ–ವಿಶ್ವಾಸದ ನಂಟುಗಳು ಮತ್ತಷ್ಟು ಬಲವಾಗಲಿವೆ” ಎಂದು ಜಮಾಅತೆ ಇಸ್ಲಾಮೀ ಹಿಂದ್ ಆಶಾಭಾವನೆ ವ್ಯಕ್ತಪಡಿಸಿದೆ. ಈ ಗಂಭೀರ ಸಾಮಾಜಿಕ ಅಭಿಯಾನಕ್ಕೆ ಎಲ್ಲಾ ಮಾಧ್ಯಮ ಮಿತ್ರರು ಸಹಕರಿಸಬೇಕೆಂದು ಸಂಘಟನೆಯು ಕಳಕಳಿ ಮನವಿ ಸಲ್ಲಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಾಧ್ಯಕ್ಷ ಡಾ. ಮುಹಮ್ಮದ್ ಸಾದ್ ಬೆಳ್ಳಾಮಿ, ರಾಜ್ಯ ಕಾರ್ಯದರ್ಶಿಗಳಾದ ಮೌಲಾನಾ ಅಬ್ದುಲ್ ಗಫಾರ್ ಹಾಮಿದ್ ಉಮ್ರ, ಮೌಲಾನಾ ವಹೀದುದ್ದೀನ್ ಖಾನ್ ಉಮ್ರ ಮದನಿ, ಜನಾಬ್ ಯೂಸುಫ್ ಕನ್ನಿ, ಮೌಲಾನಾ ಲಬೀದ್ ಶಾಫಿ ಹಾಗೂ ತಲಾ ಖಾನಂ ಉಪಸ್ಥಿತರಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...