ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಮಾದ; ಪ್ರಯಾಣಿಕರ ʼದಾರಿ ತಪ್ಪಿಸುವʼ ನಾಮಫಲಕ!

Date:

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಳವ­ಡಿಸುವ ಗ್ರಾಮಗಳ ಮಾರ್ಗ ಸೂಚನಾ ಫಲಕಗಳು ಅಪರಿಚಿತ ಪ್ರಯಾಣಿಕರಿಗೆ ಮಾರ್ಗಸೂಚಿ­ಯಾಗಿರಬೇಕು. ಆದರೆ, ಬೀದರ್‌-ವನಮಾರಪಳ್ಳಿ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಿರುವ ಭಾರತದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಅಳವಡಿಸಿರುವ ಗ್ರಾಮಗಳ ಮಾರ್ಗಸೂಚಿ ಫಲಕಗಳು ತಪ್ಪು ತಪ್ಪಾಗಿ ಬರೆದು ಪ್ರಯಾಣಕರಿಗೆ ದಿಕ್ಕು ತಪ್ಪಿಸುವಂತಾಗಿದೆ.

ಬೀದರ್‌ದಿಂದ ಔರಾದ ತಾಲೂಕಿನ ಗಡಿ ಗ್ರಾಮ ವನಮಾರಪಳ್ಳಿವರೆಗೆ ಸುಮಾರು 45 ಕಿ.ಮೀ. ರಾಷ್ಟ್ರೀಯ ಹೆದ್ದಾರಿ-161A ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದೆ. ಹೆದ್ದಾರಿ­ಯುದ್ದಕ್ಕೂ ಗ್ರಾಮಗಳ ಮಾರ್ಗಸೂಚಿ ಫಲಕಗಳನ್ನು ಅಳವಡಿಸಲಾಗಿದೆ. ಆದರೆ, ಕನ್ನಡ, ಇಂಗ್ಲೀಷ್‌ ಹಾಗೂ ಹಿಂದಿ ಭಾಷೆಯಲ್ಲಿ ಬರೆಯಲಾದ ಕೆಲ ಗ್ರಾಮಗಳ ಹೆಸರುಗಳು ತಪ್ಪು ತಪ್ಪಾಗಿವೆ. ಈ ಮಾರ್ಗಸೂಚಿ ಫಲಕಗಳು ಸಂಚರಿಸುವ ವಾಹನಗಳಿಗೆ ನಾಮಫಲಕದಲ್ಲಿದ್ದ ಊರುಗಳ ಹೆಸರುಗಳನ್ನು ನೋಡಿ ವಾಹನ ಸವಾರರು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಮೂರು ಭಾಷೆಯ ನಾಮಫಲಕಗಳಲ್ಲಿ ಲೋಪದೋಷ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್‌ ಗಡಿ ಜಿಲ್ಲೆ, ಅದರಲ್ಲೂ ಔರಾದ ತಾಲೂಕು ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದ ಗಡಿ ಹಂಚಿಕೊಂಡ ತಾಲೂಕು ಆಗಿರುವ ಕಾರಣಕ್ಕೆ ಕೆಲವು ಕಡೆ ಕನ್ನಡ, ಇಂಗ್ಲಿಷ್‌ ಜೊತೆಗೆ ಹಿಂದಿ ಭಾಷೆಯಲ್ಲಿ ಗ್ರಾಮಗಳ ಹೆಸರು ಬರೆಯಲಾಗಿದೆ. ಆದರೆ ಕನ್ನಡ ಸೇರಿದಂತೆ ಹಿಂದಿ ಹಾಗೂ ಇಂಗ್ಲೀಷ್‌ ಭಾಷೆಯ ಫಲಕಗಳಲ್ಲಿ ಲೋಪದೋಷಗಳಾಗಿದ್ದು ವಿಪರ್ಯಾಸವೇ ಸರಿ.

ಬೀದರ್ ತಾಲೂಕಿನ ಮರಖಲ ಗ್ರಾಮದ ಹೆಸರನ್ನು ʼಮಾರ್ಕಾಲ್‌ʼ ಮತ್ತು ʼಮರಕಲʼ ಎಂದು, ‘ಮುಸ್ತಾಪುರ’ ಗ್ರಾಮಕ್ಕೆ ʼಮಸ್ತಾಪುರʼ ಎಂದು, ʼಬೋರಾಳʼ ಗ್ರಾಮಕ್ಕೆ ‘ಬೋರಾಲ್’ ಎಂದು, ʼವನಮಾರಪಳ್ಳಿʼ ಗ್ರಾಮಕ್ಕೆ ‘ಕನಮಾರಪಳ್ಳಿʼ ಸೇರಿದಂತೆ ಹಲವು ಗ್ರಾಮಗಳ ಹೆಸರು ತಪ್ಪಾಗಿ ಬರೆಯಲಾಗಿದೆ. ಇನ್ನು ʼಹೊಸ ಸೋಲಾರ್‌ ಸಸ್ಯʼ, ʼನದಿಗʼ ಎಂದು ಮೇಲ್ನೋಟಕ್ಕೆ ಇಂಗ್ಲೀಷ್‌ ದಿಂದ ಕನ್ನಡಕ್ಕೆ ಭಾಷಾಂತರಿಸಿ ಬರೆದ ಫಲಕಗಳು ಅಲ್ಲಲ್ಲಿ ತಲೆಯೆತ್ತಿ ನಿಂತಿವೆ. ಕೆಲ ಕಡೆ ಗ್ರಾಮಗಳ ಮೂಲ ಹೆಸರೇ ನಾಪತ್ತೆಯಾದರೆ, ಇನ್ನು ಕೆಲವು ʼಅರ್ಥವಿಲ್ಲದʼ ನಾಮಪಲಕಗಳು ಪ್ರಯಾಣಕರನ್ನು ಗೊಂದಲ ಮೂಡಿಸಿವೆ.

ಬೋರ್ಡ್‌

“ಬೀದರ್‌-ವನಮಾರಪಳ್ಳಿ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಅಳವಡಿಸಿದ ಗ್ರಾಮಗಳ ನಾಮಫಲಕಗಳಲ್ಲಿ ಹಲವು ಲೋಪದೋಷಗಳಿವೆ ಎಂಬುದು ಗೊತ್ತಾಗಿದೆ. ಅದರಲ್ಲೂ ಕನ್ನಡ ಹೆಸರೇ ತಪ್ಪು ತಪ್ಪಾಗಿ ಬರೆದಿರುವುದು ಪ್ರಮಾದವೇ ಸರಿ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸರಿಪಡಿಸುವಂತೆ ತಿಳಿಸುವೆ” ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಈದಿನ.ಕಾಮ್‌ ಜೊತೆಗೆ ಮಾತನಾಡಿ ಹೇಳಿದರು.

“ಗ್ರಾಮಗಳ ನಾಮಫಲಕ ಸಿದ್ದಪಡಿಸುವಾಗ ಅಲ್ಲಿನ ಗ್ರಾಮಸ್ಥರಿಗೆ ಕೇಳಲಾಗಿದೆ. ಆದರೂ ಸರಿಯಾದ ತಿಳಿವಳಿಕೆ ಇಲ್ಲದ್ದ ಕಾರಣ ಈ ಪ್ರಮಾದ ಆಗಿರಬಹುದು. ತಪ್ಪುಗಳಾಗಿರುವ ಎಲ್ಲ ನಾಮಫಲಕಗಳು ಸರಿಪಡಿಸಿ ಸರಿಯಾದ ಹೆಸರಿನ ಮಾರ್ಗಸೂಚಿ ಫಲಕಗಳನ್ನು ಅಳವ­ಡಿಸಲಾಗುವುದು” ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ಈದಿನ.ಕಾಮ್‌ ಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತವಾಗುವುದಿಲ್ಲ, ಅಪಪ್ರಚಾರ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಹಿರಿಯ ಕನ್ನಡ ಹೋರಾಟಗಾರ ಬಸವರಾಜ ಶೆಟಕಾರ್‌ ಈದಿನ.ಕಾಮ್‌ ಜೊತೆಗೆ ಮಾತನಾಡಿ, “ರಾಷ್ಟ್ರೀಯ ಹೆದ್ದಾರಿ-161A ಬದಿಯಲ್ಲಿ ಅಳವಡಿಸಲಾದ ಗ್ರಾಮಗಳ ನಾಮಫಲಕಗಳಲ್ಲಿ ಹಲವು ಲೋಪದೋಷಗಳಿವೆ. ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತುಕೊಂಡು ತಪ್ಪಾಗಿ ಬರೆಯಲಾದ ನಾಮಫಲಕ ತೆರವುಗೊಳಿಸಿ ಸರಿಪಡಿಸಬೇಕು. ಇಲ್ಲದಿದ್ದರೆ ಲೋಪದೋಷವಿರುವ ನಾಮಫಲಕಗಳಿಗೆ ಮಸಿ ಬಳಿಯುವುದಾಗಿ ಎಚ್ಚರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...