ರಾಯಚೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ; ರೈತ ಸಂಘ ಆಕ್ರೋಶ

Date:

  • ಸೂರತ್ – ಚೆನೈ ಮಧ್ಯೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ
  • ಅಂಡರ್ ಪಾಸ್ ರಸ್ತೆ ನಿರ್ಮಿಸಿ ರೈತರ ಜಮೀನುಗಳಿಗೆ ತೆರಳಲು ಅನುಕೂಲ ಮಾಡಿಕೊಡಬೇಕು.

ಗ್ರಾಮೀಣ ಭಾಗದಲ್ಲಿ ಹಾದು ಹೋಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ರೈತರ ಜಮೀನುಗಳಿಗೆ ರಸ್ತೆ ಬಂದ್ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಚಿಕ್ಕಸೂಗೂರು ಬಳಿ ರೈತರು ಪ್ರತಿಭಟನೆ ನಡೆಸಿದರು.

“ಸೂರತ್ – ಚೆನೈ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಾಡುತ್ತಿರುವ ಅಶೋಕ್ ಬುಲ್ಡಿಕಾನ್ ಲಿಮಿಟೆಡ್ ಮತ್ತು ಭಾರತ ವಾಣಿಜ್ಯ ಈಸ್ಟರ್ನ್ ಪ್ರೈವೇಟ್ ಲಿಮಿಟೆಡ್ ಗುತ್ತಿಗೆದಾರರು ಸ್ಥಳಿಯ ರೈತರ ಜಮೀನುಗಳಿಗೆ ಹೋಗುವ ರಸ್ತೆಯನ್ನು ಬಂದ್ ಮಾಡಿದ್ದರಿಂದ ರೈತರು ತಮ್ಮ ಜಮೀನುಗಳಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ” ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

“ಮುಂಗಾರು ಬಿತ್ತನೆ ಮಾಡಬೇಕಾದ ರೈತರು ಇವರ ದಬ್ಬಾಳಿಕೆಯಿಂದ ಕೈಕಟ್ಟಿ ಕುಳಿತಿದ್ದಾರೆ, ಹೆದ್ದಾರಿ ರಸ್ತೆ ಹಾದು ಹೋಗಿದ್ದು, ಕೆಳ ಭಾಗದಲ್ಲಿ ಕೆಲವು ಕಡೆ ಅಂಡರ್ ಪಾಸ್ ರಸ್ತೆ ನಿರ್ಮಾಣ ಮಾಡಿದ್ದು ಅವೈಜ್ಞಾನಿಕವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಯಲ್ಲಿ ಅಂಡರ್ ಪಾಸ್ ರಸ್ತೆ ನಿರ್ಮಾಣ ಮಾಡಬೇಕು, ಆದರೆ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಿದ್ದಾರೆ. ಇದರಿಂದ ರೈತರು ಓಡಾಡಲು ತೊಂದರೆಗೆ ಸಿಲುಕಿದ್ದಾರೆ. ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಎರಡು ಬದಿಯಲ್ಲಿ ಅಂಡರ್ ಪಾಸ್ ರಸ್ತೆ ಮಾಡಬೇಕು, ರೈತರು ತಮ್ಮ ಜಮೀನಿಗೆ ಹೋಗಲು ಅನುಕೂಲ ಮಾಡಿಕೊಡಬೇಕು, ಇಲ್ಲದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನೆಯ ಮೇಲಿಂದ ಬಿದ್ದು ಮಹಿಳೆ ಸಾವು; ಕೊಲೆ ಶಂಕೆ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಬೂದಯ್ಯಸ್ವಾಮಿ, ಲಿಂಗಾರೆಡ್ಡಿ, ಬಸವರಾಜ ಪಾಟೀಲ್, ಗೋವಿಂದಪ್ಪ ನಾಯಕ, ಸಿದ್ದಯ್ಯ ಸ್ವಾಮಿ, ದೇವರಾಜ ನಾಯಕ, ಶಂಕ್ರಪ್ಪ ಗೌಡ, ತಿಮ್ಮಣ್ಣ ನಾಯಕ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...