ಮೈಸೂರು | ಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಮದ್ಯಪಾನ ಹಾವಳಿಯ ವಿರುದ್ಧ ದೇಶ ವ್ಯಾಪಿ ಪ್ರತಿಭಟನೆ

Date:

ಮೈಸೂರು ಜಿಲ್ಲಾ ಸಮಿತಿಯು, ನಗರದ ಗಾಂಧಿ ವೃತ್ತದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಕರೆಯ ಮೇರೆಗೆ ಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಮದ್ಯಪಾನ ಹಾವಳಿಯ ವಿರುದ್ಧ ದೇಶ ವ್ಯಾಪಿ ಪ್ರತಿಭಟನೆ ನಡೆಸಿದರು.

ಸೆಪ್ಟೆಂಬರ್. 1 ರಿಂದ 7 ರವರೆಗೆ ಮಹಿಳೆಯರಿಗೆ ಸಮಾನ ಹಕ್ಕು ಹಾಗೂ ಸಮಾನ ವೇತನವನ್ನು ಖಾತ್ರಿಪಡಿಸಿ ಎಂಬ ಘೋಷವಾಕ್ಯದೊಂದಿಗೆ ಪ್ರತಿಭಟನಾ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ , ಇಂದು ಕರ್ನಾಟಕ ರಾಜ್ಯವ್ಯಾಪಿ ಪ್ರತಿಭಟನೆ, ಪ್ರದರ್ಶನಗಳು ನಡೆಯಲಿದ್ದು, ಜಸ್ಟಿಸ್ ಫಾರ್ ಅಭಯ, ಮಹಿಳೆ ಮತ್ತು ಮಕ್ಕಳ ಮೇಲಿನ ಎಲ್ಲ ರೀತಿಯ ದೌರ್ಜನ್ಯಗಳಿಗೆ ಕೊನೆ ಹಾಡಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ, ಅಸಂಘಟಿತ ಕಾರ್ಮಿಕರಿಗೆ ಹಾಗೂ ಸ್ಕೀಮ್ ವರ್ಕರ್ಸ್ ಗೆ ಗೌರವಯುತ ಜೀವನ ನಡೆಸಲು ಬೇಕಾದಂತಹ ವೇತನವನ್ನು ಖಾತ್ರಿಪಡಿಸಬೇಕು.

ಶಿಕ್ಷಣದ ಕೋಮುವಾದೀಕರಣ ಹಾಗೂ ಖಾಸಗೀಕರಣವನ್ನು ನಿಲ್ಲಿಸಿ, ಹೆಣ್ಣು ಮಕ್ಕಳ, ಮಕ್ಕಳ ಸಾಗಾಣಿಕೆಯನ್ನು ನಿಲ್ಲಿಸಿ, ಮದ್ಯಪಾನ, ಮಾದಕ ವಸ್ತು ಹಾಗೂ ಅಶ್ಲೀಲ ಜಾಲತಾಣಗಳನ್ನು ನಿಷೇಧಿಸಿ ಎಂಬ ಹಕ್ಕೊತ್ತಾಯಗಳನ್ನು ಮುಂದಿಟ್ಟು ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿಗಳಾದ ಆಸಿಯಾ ಬೇಗಂ ‘ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಇಂದಿಗೂ ಯಾವುದೇ ಭದ್ರತೆ ಇಲ್ಲದಂತಾಗಿದೆ. ಭ್ರೂಣ ಹತ್ಯೆ, ಬಾಲ್ಯ ವಿವಾಹ, ವರದಕ್ಷಿಣೆ ಸಾವುಗಳು ಮುಂತಾದ ಪ್ರಕರಣಗಳು ಹೆಚ್ಚಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ಪರವಾಗಿ ಕೆಲವು ಯೋಜನೆಗಳನ್ನು ತಂದು, ಆ ಮೂಲಕ ತಾವು ಸ್ತ್ರೀಪರ ಕಾಳಜಿ ಎಂಬಂತೆ ಮೇಲ್ನೋಟಕ್ಕೆ ಪ್ರದರ್ಶಿಸುತ್ತಿದ್ದಾರೆ.

ಆದರೆ. ವಾಸ್ತವದಲ್ಲಿ ಇವರ್ಯಾರಿಗೂ ಯಾವುದೇ ಕಾಳಜಿ ಇಲ್ಲ. ಇದಕ್ಕೆಲ್ಲ ಇಂಬು ಕೊಡುವಂತೆ ಇತ್ತೀಚಿಗೆ ಪತ್ರಿಕೆಗಳಲ್ಲಿ ವರದಿಯಾದಂತೆ ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ 80 ಸಾವಿರ ಬಾಲ ಗರ್ಭಿಣಿಯರು ಕಂಡು ಬಂದಿರುವುದು. ತಡೆಯೇ ಇಲ್ಲದಂತೆ ದಿನೇ, ದಿನೇ ಹೆಚ್ಚುತ್ತಿರುವ ಸ್ತ್ರೀ ಭ್ರೂಣ ಹತ್ಯೆ, ಹೆಣ್ಣು ಮಕ್ಕಳ ಸಾವುಗಳು, ಕಳ್ಳ ಸಾಗಾಣಿಕೆ, ಅಶ್ಲೀಲ ಸಿನಿಮಾ -ಸಾಹಿತ್ಯಗಳಿಗೆ ಕಡಿವಾಣ ಹಾಕದೆ ಇರುವುದು.

ಮದ್ಯಪಾನ ಅಂಗಡಿ, ಮುಂಗಟ್ಟುಗಳಲ್ಲಿ ಸಿಗುತ್ತಿದ್ದು, ನಿಷೇಧಿಸುವ ಬದಲು, ಪರವಾನಗಿಯನ್ನು ಕೊಡುತ್ತಿರುವುದೇ ಸಾಕ್ಷಿ ಯಾಗಿದೆ. ಮಹಿಳೆಯರ ಮೇಲಿನ ಸಮಸ್ಯೆಗಳ ವಿರುದ್ಧ ಎಲ್ಲಾ ಮಹಿಳೆಯರು ಒಂದಾಗಿ ಹೋರಾಡುವುದೊಂದೇ ನಮ್ಮೆದುರುಗಿರುವ ದಾರಿ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು ದಸರಾ | ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲಾಡಳಿತದಿಂದ ಆಹ್ವಾನ

ಕಾರ್ಯದರ್ಶಿ ಜಿ. ಪುಷ್ಪ, ಜಿಲ್ಲಾ ಅಧ್ಯಕ್ಷೆ ನಳಿನ, ಉಪಾಧ್ಯಕ್ಷೆ ಜಿ. ಎಸ್.ಸೀಮಾ , ಸದಸ್ಯರುಗಳಾದ ಪದ್ಮ, ಗಾಯಿತ್ರಿ, ತುಳಸಿ , ಸುಮಾ ಇನ್ನಿತರರು ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...