ತುಮಕೂರಿನಲ್ಲಿ 18, 19 ಕ್ಕೆ ನೀನಾಸಂ ನಾಟಕೋತ್ಸವ

Date:

ತುಮಕೂರಿನ ಝೆನ್ ಟೀಮ್ ಗೆ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇದೇ ತಿಂಗಳ 18 ಮತ್ತು 19 ರಂದು ಎಂ.ಜಿ. ರಸ್ತೆಯ ಬಾಲಭವನದಲ್ಲಿ ನೀನಾಸಂ ನಾಟಕೋತ್ಸವವನ್ನು ಆಯೋಜಿಸಲಾಗಿದೆ.

18 ರಂದು ಶುಕ್ರವಾರ ಸಂಜೆ 6.45 ಕ್ಕೆ ಮಾಲತೀ ಮಾಧವ ನಾಟಕ ಪ್ರದರ್ಶನವಿದೆ. ಸಂಸ್ಕೃತ ನಾಟಕಕಾರ ಭವಭೂತಿಯ ಕೃತಿಯನ್ನು ಕೆ.ವಿ. ಅಕ್ಷರ ನಿರ್ದೇಶಿಸಿದ್ದಾರೆ.19 ರಂದು ಶನಿವಾರ ಸಂಜೆ 6.45 ಕ್ಕೆ ಅಂಕದ ಪರದೆ ನಾಟಕ ಪ್ರದರ್ಶನವಿದೆ.

ಅಭಿರಾಮ್ ಭಡ್ಕಮ್ಕರ್ ಅವರು ರಚಿಸಿರುವ ಈ ನಾಟಕವನ್ನು ಜಯಂತ ಕಾಯ್ಕಿಣಿ ಅನುವಾದಿಸಿದ್ದು ನಿರ್ದೇಶನವನ್ನು ವಿದ್ಯಾನಿಧಿ ವನಾರಸೆ ಮಾಡಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸಹಕಾರದಲ್ಲಿ ನಡೆಯುವ ನಾಟಕೋತ್ಸವಕ್ಕೆ ಉಚಿತ ಪ್ರವೇಶವಿದೆ ಎಂದು ಝೆನ್ ಟೀಮ್ ನ ಉಗಮ ಶ್ರೀನಿವಾಸ್ ತಿಳಿಸಿದ್ದಾರೆ.18 ರಂದು ನಾಟಕೋತ್ಸವದ ಉದ್ಘಾಟನೆಯನ್ನು ಕೈಗಾರಿಕೋದ್ಯಮಿ ಎಚ್.ಜಿ. ಚಂದ್ರಶೇಖರ್ ನೆರವೇರಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಯಾಗಿ ಚೇತನಕುಮಾರ್ ಎಂ.ಎನ್.ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು ಹಾಗೂ ಸಮಾಜ ಸೇವಕ ಮತ್ತು ಕಾಂಗ್ರೆಸ್ ಮುಖಂಡ ಎಸ್.ಬಿ. ಶ್ರೀನಿವಾಸ್ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ವಹಿಸಲಿದ್ದಾರೆ.

1000548402

ಅಕ್ಟೋಬರ್ 19 ಶನಿವಾರ ಸಮಾರೋಪ ಸಮಾರಂಭ ನಡೆಯಲಿದ್ದು ಮಹಾನಗರ ಪಾಲಿಕೆ ಆಯುಕ್ತರಾದ ಅಶ್ವಿಜಾ ಅವರು ಚಾಲನೆ ನೀಡಲಿದ್ದಾರೆ. ಸಮಾರೋಪ ಭಾಷಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀದೇವಿ ಶಿಕ್ಷಣ ಸಂಸ್ಥೆಯ ಡಾ. ಎಂ.ಆರ್. ಹುಲಿನಾಯ್ಕರ್ ವಹಿಸಲಿದ್ದಾರೆ

ಮಾಲತೀ ಮಾಧವ ನಾಟಕ ಪರಿಚಯ: ಕ್ರಿ.ಶ 8ನೇ ಶತಮಾನದ ಪ್ರಸಿದ್ಧ ಸಂಸ್ಕೃತ ನಾಟಕಕಾರ ಭವಭೂತಿಯ ಈ ಕೃತಿ ಮೇಲುನೋಟಕ್ಕೆ ಸರಳ- ಮಾಲತಿ ಮತ್ತು ಮಾಧವ ಎಂಬ ಪ್ರೇಮಿಗಳು ತಮ್ಮ ಮದುವೆಗೆ ಇರುವ ತೊಡಕುಗಳನ್ನೆಲ್ಲಾ ದಾಟಿ ಸಂಲಗ್ನಗೊಳ್ಳುವುದು ಜೊತೆಗೆ ಇನ್ನೆರೆಡು ಜೋಡಿ ಮದುವೆಗಳು ಸಂಭವಿಸುವುದು ಈ ಕಥೆಯ ತಿರುಳು, ಇಂತಹ ಅಸಂಭವನೀಯ ಸಂವಿಧಾನವನ್ನು ಹೆಣೆಯಲಿಕ್ಕೆ ಇಲ್ಲಿ ಕಾಮಂದಕಿ ಎಂಬ ಬೌದ್ಧ ಸನ್ಯಾಸಿನಿ ಮತ್ತವಳ ಶಿಷ್ಯರು ಕಾರಣರಾಗುತ್ತಾರೆ. ವೈರಾಗ್ಯಕ್ಕೆ ಮುಖ ಮಾಡಿರುವ ಸನ್ಯಾಸಿಗಳೇ ಸಂಸಾರಗಳನ್ನು ಕಟ್ಟುವ ಸೂತ್ರಧಾರರಾಗುವುದು ಈ ನಾಟಕದ ಮರ್ಮ.

ಅಂಕದ ಪರದೆ : 19 ರಂದು ತಮ್ಮ ಜೀವನದ ಕಡೆಯ ವರ್ಷಗಳನ್ನು ಕಳೆಯುತ್ತಿರುವ ಹಿರಿಯ ನಾಗರಿಕ ಒಂದು ಆಶ್ರಯ ಧಾಮದೊಳಗೆ ಈ ನಾಟಕ ಸಂಭವಿಸುತ್ತದೆ. ಆದರೆ ಇಲ್ಲಿರುವ ವ್ಯಕ್ತಿಗಳು ಬರೀದೆ ಬದುಕಿನ ಸಂಧ್ಯಾ ಕಾಲವನ್ನು ನೋವಿನಿಂದ ನೂಕುತ್ತಿರುವ ಹತಾಷರಲ್ಲ. ಹಲವು ಬಗೆಯಲ್ಲಿ ಕ್ರಿಯಾಶೀಲರು.ವೃದ್ದಾಪ್ಯವೆಂಬ ವಾಸ್ತವವು ರಂಗಭೂಮಿಯ ಭೂಮಿಕೆಗಳಾಗಿ ಪರಿವರ್ತನೆಯಾಗುವ ವಿಸ್ಮಯದ ದಿಕ್ಕಿಗೆ ನಾಟಕ ಮುನ್ನಡೆಯುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...