ಗದಗ | ನೀಟ್ ಪರೀಕ್ಷೆಯ ಅವ್ಯವಹಾರ; ಪಾರದರ್ಶಕ ತನಿಖೆಗೆ ಎಸ್‌ಎಫ್‌ಐ ಆಗ್ರಹ

Date:

ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿರುವ ನೀಟ್‌ (ಯುಜಿ) ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಕುರಿತು ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಸ್‌ಎಫ್‌ಐ) ಜಿಲ್ಲಾ ಘಟಕದ ಮುಖಂಡ ಗಣೇಶ ರಾಠೋಡ್ ಆಗ್ರಹಿಸಿದರು.

ಜೂನ್ 4ರಂದು ನೀಟ್‌ -ಯುಜಿ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾದ ನಂತರ, ಎನ್‌ಟಿಎ ನಡವಳಿಕೆಯ ಬಗ್ಗೆ ದೇಶಾದ್ಯಂತ ಸಾಕಷ್ಟು ದೂರುಗಳು ಬರುತ್ತಿವೆ. ಎನ್‌ಟಿಎ ಜಾರಿಗೆ ಬಂದಾಗಿನಿಂದ ಪ್ರಮುಖ ಪರೀಕ್ಷೆಗಳ ಗಂಭೀರ ಅವ್ಯವಹಾರಗಳ ಮುಂದುವರಿಕೆಯಾಗಿದೆ.ಎನ್‌ಟಿಎ ಸಂಸ್ಥೆಯು ಪ್ರವೇಶವನ್ನು ನಡೆಸಲು ಅಸಮರ್ಥ ಮತ್ತು ಅನರ್ಹವಾಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಗಜೇಂದ್ರಗಡದಲ್ಲಿ ನಡೆಸಿದ  ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಎಂಬಿಬಿಎಸ್‌ -ಬಿಡಿಎಸ್ ಪದವಿ ಹಂತದ ಪ್ರವೇಶ ಪರೀಕ್ಷೆಯಲ್ಲಿ ಒಟ್ಟು ಅಂಕಗಳು 720. ಪ್ರತಿ ಸರಿಯಾದ ಉತ್ತರಕ್ಕೆ 4 ಅಂಕಗಳನ್ನು ನೀಡಲಾಗುತ್ತದೆ. ಆದರೆ ಪ್ರತಿ ತಪ್ಪು ಉತ್ತರಕ್ಕೆ 1 ಅಂಕ ಕಡಿತಗೊಳಿಸಲಾಗುತ್ತದೆ. ಆದರೆ, ಉತ್ತರಿಸದ ಪ್ರಶ್ನೆಗಳನ್ನು ಗುರುತಿಸಿಲ್ಲ. ಆ ಸಂದರ್ಭದಲ್ಲಿ, ಗಣಿತದ ಪ್ರಕಾರ 719 ಮತ್ತು 718 ನಂತಹ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ. ಆದರೆ ಅಂತಹ ಪ್ರಕರಣಗಳು ಬಂದಿರುವ ಫಲಿತಾಂಶಗಳಲ್ಲಿ ಕಂಡುಬರುತ್ತಿದೆ. ಈ ವರ್ಷದ ಫಲಿತಾಂಶವು ಗ್ರೇಸ್ ಮಾರ್ಕಿಂಗ್‌ಗಾಗಿ ಎಂದು ಎನ್‌ಟಿಎ ಪ್ರಾಸಂಗಿಕವಾಗಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ವರ್ಷ ಪರೀಕ್ಷೆಗೆ ಮುನ್ನ ಎನ್‌ಟಿಎ ಪ್ರಕಟಿಸಿದ ಮಾರ್ಗಸೂಚಿಗಳಲ್ಲಿ ಎಲ್ಲಿಯೂ ಈ ಗ್ರೇಸ್ ಮಾರ್ಕಿಂಗ್ ಯೋಜನೆಯ ಬಗ್ಗೆ ಉಲ್ಲೇಖಸಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದೇ ಕೇಂದ್ರದ ಸತತ ರೋಲ್ ಸಂಖ್ಯೆ ಹೊಂದಿರುವ ಹಲವು ವಿದ್ಯಾರ್ಥಿಗಳು 720ಕ್ಕೆ 720 ಅಂಕಗಳನ್ನು ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿವೆ. ಆ ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಕೇಂದ್ರಗಳಿಗೆ ಸೇರಿದ ವಿದ್ಯಾರ್ಥಿಗಳಾಗಿದ್ದಾರೆ. ಕೇಂದ್ರದ ಸರ್ಕಾರ ವೈದ್ಯಕೀಯ ಶಿಕ್ಷಣದ ಪಠ್ಯಕ್ರಮದಲ್ಲಿ ಗಮನಾರ್ಹವಾದ ಕಡಿತಗೊಳಿಸಿ ಕಾಲೇಜು ಶುಲ್ಕಗಳನ್ನು ಹೆಚ್ಚಿಸಿ ಶ್ರೀಮಂತರ ಮಕ್ಕಳಿಗೆ ಮಾತ್ರ ವೈದ್ಯಕೀಯ ಶಿಕ್ಷಣ ಎಂಬ ಖಾಸಗೀಕರಣ ನೀತಿಗಳನ್ನು ಎನ್‌ಎಂಸಿ ಮತ್ತು ಎನ್‌ಟಿಎ ಸಂಸ್ಥೆಗಳು ಜಂಟಿಯಾಗಿ ಪ್ರೋತ್ಸಾಹಿಸುತ್ತಿವೆ ಇದು ದೇಶದ ಭವಿಷ್ಯಕ್ಕೆ ತುಂಬಾ ಅಪಾಯಕಾರಿ. ವೈದ್ಯಕೀಯ ಕ್ಷೇತ್ರದಲ್ಲಿ ರಾಜ್ಯ ಆಧಾರಿತ ಪ್ರವೇಶ ಪರೀಕ್ಷೆ ಪದ್ಧತಿಯನ್ನು ಬದಲಾಯಿಸಲು ಭ್ರಷ್ಟಾಚಾರ ನಡೆಯುತ್ತಿದೆ. ಈಗ ನೀಟ್-ಯುಜಿಗೆ ಸಂಬಂಧಿಸಿದಂತಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ | ಅಲ್ಪಮೊತ್ತದ ಕಾಳಗದಲ್ಲಿ ರೋಚಕ ಜಯ ಗಳಿಸಿದ ಟೀಮ್ ಇಂಡಿಯಾ; ಪಾಕ್‌ಗೆ ಭಾರೀ ಮುಖಭಂಗ

ಈ ಬಗ್ಗೆ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಎನ್‌ಟಿಎ ರದ್ದುಪಡಿಸಿ ಮತ್ತು ಇಲ್ಲಿಯವರೆಗಿನ ಅದರ ಎಲ್ಲ ಹಗರಣಗಳನ್ನು ತನಿಖೆ ನಡೆಸಬೇಕು. ರಾಜ್ಯದಲ್ಲಿ ಎನ್‌ಟಿಎ ಮೂಲಕ ಶಿಕ್ಷಣದ ಕೇಂದ್ರೀಕರಣ ನಡೆಸುವವರ ವಿರುದ್ಧ ಹೋರಾಟ ರೂಪಿಸಿ ವಿದ್ಯಾರ್ಥಿಗಳ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಎಸ್‌ಎಫ್‌ಐ ಬೆಂಬಲಿಸುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...