ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ 4 ಎಕರೆ ಫಸಲು ಬೆಂಕಿಗೆ ಆಹುತಿಯಾದ ಘಟನೆ ರಾಯಚೂರು ಲಿಂಗಸೂಗರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೋಗಾಪೂರ ಗ್ರಾಮದ ರೈತ ವೆಂಕಣ್ಣ ಕಿರ್ದಿ ಅವರಿಗೆ ಸೇರಿದ ಜಮೀನಿನ ಮೇಲೆ 11 ಕೆವಿ ವಿದ್ಯುತ್ ತಂತಿ ಹಾದು ಹೋಗಿತ್ತು. ಆ ವಿದ್ಯುತ್ ತಂತಿ ತುಂಡಾದ ಪರಿಣಾಮ ಈ ಅವಘಡ ಸಂಭವಿಸಿದೆ.
6 ಎಕರೆ ಜಮೀನಿನಲ್ಲಿ 6 ಲಕ್ಷ ರೂ ಸಾಲ ಮಾಡಿ ಕಬ್ಬು ಬೆಳೆ ಬೆಳೆದ ರೈತ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದರು, 2 ತಿಂಗಳ ಬಳಿಕ ಕಟಾವು ಮಾಡಲು ಸಿದ್ದತೆ ಮಾಡಿಕೊಂಡಿದ್ದ ರೈತನಿಗೆ ಅವಘಡದಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಈ ಸುದ್ದಿ ಓದಿದ್ದೀರಾ? ಮದ್ಯ ಮಾರಾಟಕ್ಕೆ ಪರವಾನಗಿ | ಜೀವ್ನ ಬರ್ಬಾದ್ ಆಗ್ತದೆ ಎನ್ನುತ್ತಿರುವ ಮಹಿಳೆಯರು
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾಲ್ಕು ಎಕರೆ ಕಬ್ಬು ಬೆಂಕಿಗೆ ಸರ್ವನಾಶವಾಗಿದೆ, ಇದರಿಂದ ಆರ್ಥಿಕ ಸಂಕಷ್ಟ ಉಂಟಾಗಿದೆ, ಕೂಡಲೇ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತ ವೆಂಕಣ್ಣ ಒತ್ತಾಯಿಸಿದರು.
ವರದಿ : ಸಿಟಿಜನ್ ಜರ್ನಲಿಸ್ಟ್, ಹಫೀಜುಲ್ಲ




