ನೆಲಮಂಗಲ | ಮದುವೆಯಾಗುವ ಭರವಸೆ; ಮಹಿಳಾ ಕಾನ್‌ಸ್ಟೆಬಲ್‌ಗೆ 18 ಲಕ್ಷ ರೂ. ವಂಚನೆ

Date:

ಮ್ಯಾಟ್ರಿಮೋನಿಯಲ್‌ನಲ್ಲಿ ಪರಿಯಚವಾಗಿದ್ದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ವರದಕ್ಷಿಣೆ ಹೆಸರಿನಲ್ಲಿ 18 ಲಕ್ಷ ರೂ. ಪಡೆದು ಮಹಿಳಾ ಕಾನ್‌ಸ್ಟೆಬಲ್‌ಗೆ ವಂಚಿಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ.

ನೆಲಮಂಗಲ ನಿವಾಸಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ (CISF) ಸೇವೆ ಸಲ್ಲಿಸುತ್ತಿದ್ದ ಯುವತಿ ವಂಚನೆಗೆ ಒಳಗಾಗಿದ್ದಾರೆ. ತೆಲಂಗಾಣ ಮೂಲದ ಅಶೋಕ್ ಮುಸ್ತಿ ಎಂಬಾತ ತಮಗೆ ವಂಚಿಸಿದ್ದಾನೆಂದು ಆರೋಪಿಸಿದ್ದಾರೆ. ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಯುವತಿ ಮದುವೆಯಾಗಲು ನಿರ್ಧರಿಸಿದ್ದರು. ಜೀವನ ಸಂಗಾತಿಯ ಹುಡುಕಾಟಕ್ಕಾಗಿ ಮ್ಯಾಟ್ರಿಮೋನಿಯಲ್ ವೇದಿಕೆಗಳಲ್ಲಿ ಖಾತೆ ತೆರೆದಿದ್ದರು. ಅವರಿಗೆ ಮ್ಯಾಟ್ರಿಮೋನಿಯಲ್‌ನಲ್ಲಿ ತೆಲಂಗಾಣದ ಆಶೋಕ್ ಮುಸ್ತಿ ಪರಿಚಯವಾಗಿದ್ದಾನೆ. ತಾನು ಸರ್ಕಾರಿ ಉದ್ಯೋಗಿ ಎಂದೂ ನಂಬಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದುವೆ ಮಾತುಕತೆಯನ್ನೂ ನಡೆಸಿದ್ದ ಆರೋಪಿ ಆಶೋಕ್, ವರದಕ್ಷಿಣೆಯಾಗಿ 20 ಲಕ್ಷ ರೂ. ನೀಡಬೇಕೆಂದು ಯುವತಿಯ ಬಳಿ ಬೇಡಿಕೆ ಇಟ್ಟಿದ್ದಾನೆ. ಆತನ ಬ್ಯಾಂಕ್‌ ಖಾತೆಗೆ ಯುವತಿ 18 ಲಕ್ಷ ರೂ. ವರ್ಗಾವಣೆ ಮಾಡಿದ್ದಾರೆ.

ಹಣ ಪಡೆದ ಬಳಿಕ, ವಿವಾಹಕ್ಕೆ ಆರೋಪಿ ನಿರಾಕರಿಸಿದ್ದಾನೆ. ಹಣ ವಾಪಸ್‌ ಕೊಡುವಂತೆ ಕೇಳಿದರೂ, ಹಣವನ್ನು ಹಿಂದಿರುಗಿಸದೆ ವಂಚಿಸಿದ್ದಾನೆ. ಇದೀಗ, ಸಂತ್ರಸ್ತೆ ದೂರು ದಾಖಲಿಸಿದ್ದಾರೆ.

ಅವರ ದೂರಿನ ಆಧಾರದ ಮೇಲೆ ದಾಬಸ್‌ಪೇಟೆ ಪೊಲೀಸರು ಬಿಎನ್‌ಎಸ್‌ ಸೆಕ್ಷನ್ 318, 321, 190 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...