ನೀಟ್ ಬೆನ್ನಲ್ಲೇ ನೆಟ್‌ ಅಕ್ರಮ ಆರೋಪ; ನ್ಯಾಯಾಂಗ ತನಿಖೆಗೆ ಎಐಡಿಎಸ್‌ಒ ಆಗ್ರಹ

Date:

ನೀಟ್‌ ಅವ್ಯವಹಾರ ನಡೆದ ಬೆನ್ನಲ್ಲೇ, ನೆಟ್‌ ಅವ್ಯವಹಾರವೂ ನಡೆದಿದೆ ಎಂಬ ಆರೋಪಗಳಿವೆ. ಹೀಗಾಗಿಯೇ, ನೆಟ್‌ ಪರೀಕ್ಷೆ ಬಡೆದ ಮರುದಿನವೇ ಆ ಪರೀಕ್ಷೆಯನ್ನು ಎನ್‌ಟಿಎ ರದ್ದುಗೊಳಿಸಿದೆ. ಆದರೆ, ಈ ಅವ್ಯವಹಾರಗಳನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ ಸಚಿವಾಲಯ ಮತ್ತು ಎನ್‌ಟಿಎ ಪ್ರಯತ್ನಿಸುತ್ತಿವೆ ಎಂದು ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕಾ ಪ್ರಕಟಣೆ ಹೊರಡಿಸಿರುವ ಶಿಲ್ಪಾ, “ಮೊನ್ನೆ ನೀಟ್, ಇಂದು ನೆಟ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಕೇಳಿ ಬಂದಿದೆ. ಲಕ್ಷಾಂತರ ವಿದ್ಯಾರ್ಥಿಗಳು ವರ್ಷಗಟ್ಟಲೆ ತಯಾರಿ ನಡೆಸಿ ಪರೀಕ್ಷೆ ಬರೆದಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಆದರೂ, ಗಂಭೀರ ಪ್ರಮಾಣದ ಅವ್ಯವಹಾರವನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ ಸಚಿವಾಲಯ ಮತ್ತು ಎನ್‌ಟಿಎ ಪ್ರಯತ್ನಿಸುತ್ತಲೇ ಇವೆ. ನೆಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರಗಳು ಈ ಪ್ರಕರಣದ ತೀವ್ರತೆಯನ್ನು ಪ್ರತಿಬಿಂಬಿಸುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಪವಿತ್ರತೆಯನ್ನು ಕಾಪಾಡಲು ಪರೀಕ್ಷೆ ನಡೆದ ಮರುದಿನವೇ ಅದನ್ನು ರದ್ದು ಪಡಿಸಿ, ತನಿಖೆ ನಡೆಸಲು ಸಿಬಿಐಗೆ ಒಪ್ಪಿಸಲಾಗಿದೆ. ಈ ನಡೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಪರೀಕ್ಷಾ ಕೇಂದ್ರಗಳಿಗೆ ತಲುಪಲು ದೂರದ ಪ್ರಯಾಣ, ವಸತಿ, ಅಧಿಕ ಪ್ರಮಾಣದ ಪರೀಕ್ಷಾ ಶುಲ್ಕ ಸೇರಿದಂತೆ ಹಲವಾರು ಸಂಕಷ್ಟಗಳನ್ನು ಎದುರಿಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾರು ಹೊಣೆ. ವಿದ್ಯಾರ್ಥಿಗಳ ಭವಿಷ್ಯವನ್ನು ಎನ್‌ಟಿಎ ಅತಂತ್ರಕ್ಕೆ ದೂಡಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವ್ಯಾಪಾರೀಕರಣ, ಅನಾರೋಗ್ಯ ಪೀಡಿತ ಸ್ಪರ್ಧೆ ಮತ್ತು ವ್ಯಾಪಕ ಭ್ರಷ್ಟಾಚಾರ ಜಾರಿಯಲ್ಲಿರುವಾಗ, ಒಂದು ಕೇಂದ್ರೀಕೃತ ಪರೀಕ್ಷೆಯು ಭ್ರಷ್ಟಾಚಾರದ ಏಕಸ್ವಾಮ್ಯಾಧಿಕಾರವನ್ನುಂಟು ಮಾಡಬಲ್ಲದೆ ಹೊರತು, ಈ ಯಾವ ಸಮಸ್ಯೆಯನ್ನೂ ಪರಿಹರಿಸುವುದಿಲ್ಲ. ಹೀಗಾಗಿ, ನೀಟ್ ಮತ್ತು ನೆಟ್ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮದ ಕುರಿತು ಸಮರೋಪಾದಿಯಲ್ಲಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರಕರಣವು ತಾರ್ಕಿಕ ಅಂತ್ಯ ತಲುಪುವವರೆಗೂ ನೀಟ್ ಕೌನ್ಸಿಲಿಂಗ್ಅನ್ನು ತಡೆಹಿಡಿಯಬೇಕು. ನೆಟ್ ಮರುಪರೀಕ್ಷೆಯ ದಿನಾಂಕವನ್ನು ಕೂಡಲೇ ಪ್ರಕಟಿಸಿ, ನೇರವಾಗಿ ಯುಜಿಸಿಯೇ ಪರೀಕ್ಷೆಯನ್ನು ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...