ಬಿಪಿಎಲ್-ಎಪಿಎಲ್ ಕಾರ್ಡ್‌ | ಹೊಸ ಅರ್ಜಿ ಸಲ್ಲಿಕೆಗೆ ತಾತ್ಕಾಲಿಕ ತಡೆ: ಆಹಾರ ಸಚಿವ ಕೆ ಎಚ್‌ ಮುನಿಯಪ್ಪ

Date:

  • ‘ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ’
  • ‘ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇವೆ’

ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇವೆ. ಇನ್ನೂ ಒಂದಿಷ್ಟು ದಿನ ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್‌ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅನ್ನಭಾಗ್ಯ ಯೋಜನೆಯ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಕರೆದು ಮಾತನಾಡಿದರು.

“ಗ್ಯಾರಂಟಿ ಯೋಜನೆಗಳ ಘೋಷಣೆ ಬಳಿಕ ಎಪಿಎಲ್‌ ಮತ್ತು ಬಿಪಿಎಲ್‌ ಕಾರ್ಡ್‌ಗಳಿಗೆ ಬೇಡಿಕೆ ಹೆಚ್ಚಿತ್ತು. ಆದರೆ, ಇಲಾಖೆಯ ನಿರ್ಧಾರ ಹಲವರಿಗೆ ನಿರಾಸೆ ತಂದಿದೆ. ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ್ದೇವೆ. ಡಿಬಿಟಿ ವಿಷಯದಲ್ಲಿ ಕಳೆದ ತಿಂಗಳು ತಡವಾಯಿತು. ಈ ತಿಂಗಳ 25 ಅಥವಾ 26ರೊಳಗೆ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಹಣ ಸಂದಾಯವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೋಳ, ರಾಗಿ, ಅಕ್ಕಿ ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡುತ್ತಾರೆ ಎನ್ನುವುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಇಲಾಖೆಯಲ್ಲಿ ಖಾಲಿಯಿರುವ 2,181 ಹುದ್ದೆ ಭರ್ತಿ ಮಾಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

ಅಕ್ಕಿ ಕೊಡಲು ಒಪ್ಪಿದ ರಾಜ್ಯಗಳು

“ಅನ್ನಭಾಗ್ಯ ಯೋಜನೆಗೆ ಕೊರತೆಯಾಗಿರುವ ಅಕ್ಕಿ ಪ್ರಮಾಣವನ್ನು ತೆಲಂಗಾಣ ಮತ್ತು ಆಂಧ್ರಪ್ರದೇಶ ಪೂರೈಸಲು ಮುಂದೆ ಬಂದಿವೆ. ಅಕ್ಕಿ ದರದ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ತಿಂಗಳ ಅಂತ್ಯದೊಳಗೆ ಮಾತುಕತೆ ಅಂತಿಮವಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್: ರಾಮಲಿಂಗಾರೆಡ್ಡಿ ಸ್ಪಷ್ಟನೆ

ಪತ್ರ ಬರೆದಿದ್ದು ನಿಜ

ವಿಧಾನ ಪರಿಷತ್‌ಗೆ ಸುಧಾಮ್‌ ದಾಸ್‌ ನಾಮ ನಿರ್ದೇಶನ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ಸುಧಾಮ್‌ ದಾಸ್‌ ನಾಮ ನಿರ್ದೇಶನಕ್ಕೆ ವಿರೋಧಿಸಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ನಿಜ. ಸುಧಾಮ್ ದಾಸ್ ಮೂರು ತಿಂಗಳ ಹಿಂದಿನ ತನಕ ಸರ್ಕಾರಿ ಅಧಿಕಾರಿ ಆಗಿದ್ದರು. ಅವರು ಈಗಷ್ಟೇ ಪಕ್ಷಕ್ಕೆ ಬಂದಿದ್ದಾರೆ. ಇನ್ನೊಂದಿಷ್ಟು ದಿನಗಳ ಕಾಲ ಸುಧಾಮ್ ದಾಸ್ ಪಕ್ಷಕ್ಕೆ ಕೆಲಸ ಮಾಡಲಿ” ಎಂದು ಹೇಳಿದರು

“30 ವರ್ಷಗಳ ಕಾಲದಿಂದ ಕೆಲಸ ಮಾಡಿದ ದಲಿತ ನಾಯಕರಿಗೆ ಅವಕಾಶ ನೀಡಬೇಕು ಎಂಬುದಷ್ಟೇ ನಮ್ಮ ಸಲಹೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಯಲ್ಲಿ ಪತ್ರ ಬರೆದಿರುವುದು ಸತ್ಯ. ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ. ಹೈಕಮಾಂಡ್ ನಾಯಕರ ನಿರ್ಧಾರ ಮುಖ್ಯ” ಎಂದು ಕೆ ಎಚ್‌ ಮುನಿಯಪ್ಪ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...